ಬಜಪೆ : ರಾಮ್ ಸೇನಾ ವಾಯುಪುತ್ರ ಘಟಕ ಕುಪ್ಪೆಪದವು ಇದರ ವತಿಯಿಂದ ನವರಾತ್ರಿಯ ಸಂಧರ್ಭ ಭವತಿ ಭಿಕ್ಷಾಂದೆಹೀ ಮೂಲಕ ಸಂಗ್ರಹಿಸಿದ ಮೊತ್ತವನ್ನು ಆಶಕ್ತ ಕುಟುಂಬಗಳಿಗೆ ಕುಪ್ಪೆಪದವು ಶ್ರೀ ದುರ್ಗೇಶ್ವರೀ ದೇವಸ್ಥಾನದಲ್ಲಿ ಹಸ್ತಾಂತರಿಸಲಾಯಿತು.
ದೇರೆಬೈಲ್ ಕೊಂಚಾಡಿ ನಿವಾಸಿ ಅನುಪಮಾ ಇವರ 2 ತಿಂಗಳ ನವಜಾತ ಶಿಶುವಿನ ಚಿಕಿತ್ಸೆಗಾಗಿ 32,057, ಕುಪ್ಪೆಪದವು ನಿವಾಸಿ ಮೋಹನ್ ರ ಚಿಕಿತ್ಸೆಗೆ 10,500, ಮೂಡಬಿದಿರೆ ಅಲಂಗಾರು ನಿವಾಸಿ ಸಿಂಚನ ಎಂಬವರ ಚಿಕಿತ್ಸೆಗೆ 20,100, ಕುಪ್ಪೆಪದವಿನ ಆರ್ಥಿಕವಾಗಿ ಹಿಂದುಳಿದ ಕುಟುಂಬದ ಯುವತಿಯೊರ್ವಳ ಮದುವೆಗೆ 10,500 ಸೇರಿದಂತೆ ಒಟ್ಟು 4 ಕುಟುಂಬಗಳಿಗೆ ಧನ ಸಹಾಯ ಹಸ್ತಾಂತರ ಮಾಡಲಾಯಿತು. ಕುಪ್ಪೆಪದವು ರಾಮ್ ಸೇನಾ ವಾಯುಪುತ್ರ ಘಟಕದ ಪ್ರಮುಖರು, ಕಾರ್ಯಕರ್ತರು ಹಾಜರಿದ್ದರು.
ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಪೋಷಕ ಸದಸ್ಯರೂ, ಬಂಟ್ಸ್ ಅಸೋಸಿಯೇಷನ್ ನಾರ್ತ್ ಅಮೆರಿಕಾ (BANA) ಅಧ್ಯಕ್ಷರೂ ಆದ ಶ್ರೀ ಮಂಜುನಾಥ್…
ಉಡುಪಿ ತಾಲೂಕಿನಲ್ಲಿ ಕಡಲ್ಕೊರೆತದಿಂದ ಹಾನಿಗೊಳಗಾಗಿರುವ ಹೆಜಮಾಡಿ, ಪಡುಬಿದ್ರಿ, ಎರ್ಮಾಳು, ಕಾಪು, ಪೊಲಿಪು ಹಾಗೂ ಕಟಪಾಡಿ-ಮಟ್ಟು ಪ್ರದೇಶಗಳಿಗೆ ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ.…
ಮಳೆ ಸುರಿದರೆ ಸಾಕು, ಬಂಟ್ವಾಳ ತಾಲೂಕಿನ ಮಾಣಿ ಸಮೀಪದ ಪೆರಾಜೆ ಗ್ರಾಮದ ಜೋಗಿಬೆಟ್ಟು ರಸ್ತೆಯಲ್ಲಿ ಸಂಚಾರ ದುಸ್ತರವಾಗುತ್ತಿದೆ. ರಾಷ್ಟ್ರೀಯ ಹೆದ್ದಾರಿಗೆ…
ಭಾರತ ಮತ್ತು ಅಮೆರಿಕಾಗಳು ಅನೇಕ ಸಾಮಾನ್ಯ ಅಂಶಗಳನ್ನು ಹೊಂದಿವೆ. ಅಮೆರಿಕಾ ಅವಕಾಶಗಳ ನಗರ. ಇಲ್ಲಿಗೆ ವಲಸೆ ಬಂದು ವಾಸಿಸುತ್ತಿರುವ ಭಾರತೀಯರು…
ವಾಹನ ದಟ್ಟಣೆ ಹೆಚ್ಚುತ್ತಿರುವ ನಗರದಲ್ಲಿ ಸುಗಮ ಸಂಚಾರಕ್ಕೆ ಸ್ಮಾರ್ಟ್ ಸಿಟಿ ಯೋಜನೆಯಡಿ 181ಕ್ಕೂ ಅಧಿಕ ಎಐ ಸಿ.ಸಿ ಕ್ಯಾಮರಾಗಳನ್ನು ಅಳವಡಿಸಲಾಗಿದೆ.…
ರಾಯಿ ಗ್ರಾಮದ ಪಾಂಚಕೋಡಿ ನಿವಾಸಿ ಜೋಸೆಫ್ ಪಿಂಟೋ ಎಂಬವರ ಪುತ್ರ ಜೀವನ್ ಪಿಂಟೊ ಅವರ ಚಪ್ಪಲಿ ಮತ್ತು ಟಾರ್ಚ್ ಶನಿವಾರ…