ಅಕ್ಟೋಬರ್ ದಿನಾಂಕ 28 ಮತ್ತು 29 ರಂದು ಉಡುಪಿಯಲ್ಲಿ ಅಭೂತಪೂರ್ವಾಗಿ ವಿಶ್ವ ಬಂಟರ ಸಮ್ಮೇಳನವು ಯಶಸ್ವಿಯಾಗಿ ಜರಗಿದ ನಂತರ ಅತ್ಯಂತ ನೋವು ಉಂಟಾಗುವ ರೀತಿಯಲ್ಲಿ ಮಾನ್ಯ ಮುಖ್ಯ ಮಂತ್ರಿಗಳ, ಗೃಹ ಸಚಿವರ, ಜನಪ್ರತಿನಿಧಿಗಳ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವಿರುದ್ಧ ಸಮಾಜಘಾತುಕ ವ್ಯಕ್ತಿ ಜಾಲತಾಣಗಳಲ್ಲಿ ಅಸಭ್ಯವಾಗಿ ವರ್ತಿಸಿ ಬೆದರಿಕೆ ಹಾಗೂ ಮಾನಹಾನಿ ಬರಹ ಹಾಕಿರುವುದು ಇದು ಸಮಾಜ ಬಾಹಿರ ಕೃತ್ಯವಾಗಿದ್ದು ಇಂತಹ ಘಾತಕ ವ್ಯಕ್ತಿಯ ವಿರುದ್ಧ ಮಂಗಳೂರಿನ ಕದ್ರಿ ಪೊಲೀಸ್ ಠಾಣೆಯಲ್ಲಿ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಉಪಾಧ್ಯಕ್ಷ ಕರ್ನಿರೆ ವಿಶ್ವನಾಥ್ ಶೆಟ್ಟಿ, ಒಕ್ಕೂಟದ ಜೊತೆ ಕಾರ್ಯದರ್ಶಿ ಹಾಗೂ ಬಂಟ್ವಾಳ ವಲಯ ಬಂಟರ ಸಂಘದ ಅಧ್ಯಕ್ಷ ಚಂದ್ರಹಾಸ್ ಶೆಟ್ಟಿ ರಂಗೋಲಿ, ಮಾಜಿ ಕೋಶಾಧಿಕಾರಿ ಕೊಲ್ಲಾಡಿ ಬಾಲಕೃಷ್ಣ ರೈ, ಸುರತ್ಕಲ್ ಬಂಟರ ಸಂಘದ ಮಾಜಿ ಅಧ್ಯಕ್ಷರಾದ ಸುಧಾಕರ್ ಪೂಂಜ ಹಾಗೂ ಪದಾಧಿಕಾರಿಗಳು, ಗುರುಪುರ ಬಂಟರ ಮಾತೃ ಸಂಘದ ಅಧ್ಯಕ್ಷರಾದ ಸಂತೋಷ್ ಶೆಟ್ಟಿ ಮತ್ತು ಪದಾಧಿಕಾರಿಗಳು, ಬಂಟ್ವಾಳ ವಲಯ ಬಂಟರ ಸಂಘದ ಪದಾಧಿಕಾರಿಗಳು, ಸಾಲೆತ್ತೂರು ವಲಯ ಬಂಟರ ಸಂಘದ ಜೊತೆ ಕಾರ್ಯದರ್ಶಿ ಅಮರೇಶ್ ಶೆಟ್ಟಿ ತಿರುವಾಜೆ, ಹಾಗೂ ವಿಟ್ಲ ವಲಯದ ಭಾಸ್ಕರ್ ಶೆಟ್ಟಿಯವರನ್ನು ಒಳಗೊಂಡ ತಂಡ ದೂರು ನೀಡಲಾಗಿದೆ.
ದೂರು ಪಡೆದು ತಕ್ಷಣದಿಂದ ತನಿಖೆಯನ್ನು ಆರಂಭಿಸಿ ಯಾರು ಈ ಸಮಾಜದ ಸ್ವಾಸ್ಥ್ಯವನ್ನು ಕೆದಡುತ್ತಾರೋ ಅವರ ವಿರುದ್ಧ ಕಾನೂನು ಕ್ರಮವನ್ನ ಜರಗಿಸುವುದಾಗಿ ಪೊಲೀಸ್ ಇಲಾಖೆ ಭರವಸೆ ನೀಡಿದೆ.ಮುಂದೆ ಈ ರೀತಿಯ ದುರ್ನಡತೆಗಳು ನಡೆಯದಂತೆ ಪೊಲೀಸ್ ಇಲಾಖೆಯು ಕ್ರಮ ಕೈಗೊಳ್ಳಲಿದೆ. ಹಾಗೆ ನಿಸ್ವಾರ್ಥವಾಗಿ ಸೇವೆ ಸಲ್ಲಿಸಿದ ಪ್ರತಿಯೊಬ್ಬರಿಗೂ ಕೂಡ ಈ ಕೆಟ್ಟ ಚಾಳಿಯ ವ್ಯಕ್ತಿಯ ನಡವಳಿಕೆ ಮತ್ತು ಅದನ್ನು ಜಾಲತಾಣಗಳಲ್ಲಿ ಪ್ರಚುರಪಡಿಸಿ ಶೇರ್ ಮಾಡಿದವರ ಮೇಲೆಯೂ ಕೂಡ ಕ್ರಮ ಜರುಗಿಸಲು ಇಲಾಖೆಯಲ್ಲಿ ವಿನಂತಿಸಲಾಗಿದೆ. ಈ ಪ್ರಕರಣವು ಅತ್ಯಂತ ಗಂಭೀರವಾಗಿ ಪೊಲೀಸ್ ಇಲಾಖೆಯು ಪರಿಗಣಿಸಿ ಜನರ ಮಧ್ಯೆ ಉಂಟಾಗುವ ಸಾಮಾಜಿಕ ಕ್ಷೋಭೆಯನ್ನು ನಿಲ್ಲಿಸುವುದಾಗಿ ಮಂಗಳೂರಿನ ಕದ್ರಿ ಪೊಲೀಸ್ ಠಾಣೆಯ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.
ಮಂಗಳೂರು: ಇತ್ತೀಚೆಗೆ ನಿಧನ ಹೊಂದಿದ ಬಂಟರ ಯಾನೆ ನಾಡವರ ಮಾತೃ ಸಂಘದ ಮಾಜಿ ಕೋಶಾಧಿಕಾರಿ ಹಾಗೂ ಯೂನಿಯನ್ ಬ್ಯಾಂಕಿನ ನಿವೃತ್ತ…
ಮಂಗಳೂರು: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ ನಡೆಯಲಿದ್ದು, ಅದರ ಭಾಗವಾಗಿ ಕರ್ನಾಟಕದಲ್ಲಿ 2027ರ ಜನಗಣತಿಯ…
ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ…
ಬಂಟ್ವಾಳ: ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆಯಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. …
ಕಾಸರಗೋಡು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕರ್ಯರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ…
ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್ನಲ್ಲಿ ಖಾಸಗಿ ಬಸ್ಗೆ ಹಿಂಬದಿಯಿಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದ್ದು, ಪಿಕಪ್ ವಾಹನದ ಮುಂಭಾಗವು ಸಂಪೂರ್ಣ…