ಜನ ಮನದ ನಾಡಿ ಮಿಡಿತ

Advertisement

ಮುಲ್ಕಿ: ಸರ ಸುಲಿಗೆ ಪ್ರಕರಣದ ಕುಖ್ಯಾತ ಆರೋಪಿ ಸೆರೆ; ಆರೋಪಿಯಿಂದ ಲಕ್ಷಾಂತರ ಮೌಲ್ಯದ ಸೊತ್ತು ವಶಕ್ಕೆ

ಮುಲ್ಕಿ:ಪೊಲೀಸ್ ಠಾಣಾ ವ್ಯಾಪ್ತಿಯ ವ್ಯಾಪ್ತಿಯ ಹಳೆಯಂಗಡಿ ಪಾವಂಜೆ ರಸ್ತೆಯಲ್ಲಿ ಮಹಿಳೆಯೋರ್ವರ ಕುತ್ತಿಗೆಯಿಂದ ಸರ ಸುಲಿಗೆ ಮಾಡಲು ಪ್ರಯತ್ನಿಸಿದ ಮತ್ತು ಉಡುಪಿ ಜಿಲ್ಲೆಯ ಕಾಪು ಪೊಲೀಸ್ ಠಾಣಾ ವ್ಯಾಪ್ತಿಯ ಕಟಪಾಡಿ ಎಂಬಲ್ಲಿ ಮಹಿಳೆಯ ಕುತ್ತಿಗೆಯಿಂದ ಸರ ಸುಲಿಗೆ ಮಾಡಿದ ಆರೋಪಿಯನ್ನು ಮುಲ್ಕಿ ಪೊಲೀಸರು ಬಂಧಿಸಿದ್ದು ಲಕ್ಷಾಂತರ ಮೌಲ್ಯದ ಚಿನ್ನದ ಹವಳದ ಸರ ಮತ್ತು ಕೃತ್ಯಕ್ಕೆ ಬಳಸಿದ ಮೋಟಾರ್ ಸೈಕಲನ್ನು ವಶಪಡಿಸಿಕೊಂಡಿದ್ದಾರೆ.


ಆರೋಪಿಯನ್ನು ಮಂಗಳೂರು ಮಾಲೇಮಾರ್ ಬಳಿ ವಾಸ್ತವ್ಯವಿರುವ ಮೂಲತಃ ಕೈಕಂಬ ಮಳಲಿ ನಿವಾಸಿ ವಿನಯ ಪ್ರಸಾದ್(30) ಎಂದು ಗುರುತಿಸಲಾಗಿದೆ.
ಕಳೆದ ಅ. 14ರಂದು ರಂದು ಮುಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯ ಪಾವಂಜೆ ಗ್ರಾಮದ ಪಾವಂಜೆಯಿಂದ ಹಳೆಯಂಗಡಿ ಕಡೆಗೆ ಹೋಗುವ ಒಳ ರಸ್ತೆಯಲ್ಲಿ ಲೀಲಾ ಎಂಬವರ ಕುತ್ತಿಗೆಯಲ್ಲಿದ್ದ ಸರವನ್ನು ಯಾರೋ ಅಪರಿಚಿತ ವ್ಯಕ್ತಿ ಸುಲಿಗೆ ಮಾಡಲು ಪ್ರಯತ್ನಿಸಿದ ಬಗ್ಗೆ ಲೀಲಾ ರವರು ನೀಡಿದ ದೂರಿನಂತೆ ಮುಲ್ಕಿ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.ಪ್ರಕರಣಕ್ಕೆ ಸಂಬಂಧಿಸಿದ ಆರೋಪಿಯಾದ ವಿನಯ್ ಪ್ರಸಾದ್ ಎಂಬಾತನನ್ನು ಮುಲ್ಕಿ ಪೊಲೀಸರು ನ.2ರಂದು ಖಚಿತ ಮಾಹಿತಿ ಮೇರೆಗೆ ಬಂಧಿಸಿದ್ದು, ಪೊಲೀಸರು ತೀವ್ರ ತನಿಖೆ ನಡೆಸಿದಾಗ ಆರೋಪಿ ತಾನು ಉಡುಪಿಯ ಕಟಪಾಡಿ ಒಳ ರಸ್ತೆಯಲ್ಲಿ ಕೂಡ ಮಹಿಳೆಯೋರ್ವಳ ಕುತ್ತಿಗೆಯಿಂದ ಸರವನ್ನು ಸುಲಿಗೆ ಮಾಡಿದ ತಿಳಿಸಿದ್ದಾನೆ.


ಅದರಂತೆ ಆರೋಪಿ ಸುಲಿಗೆ ಮಾಡಿದ 43,4 ಗ್ರಾಂ. ತೂಕದ ಚಿನ್ನದ ಹವಳದ ಸರವನ್ನು ಮತ್ತು ಕೃತ್ಯಕ್ಕೆ ಉಪಯೋಗಿಸಿದ (ಕೆ.ಎ.19.ಹೆಚ್.ಕೆ.1082)ಮೋಟಾರ್ ಸೈಕಲನ್ನು ಸ್ವಾಧೀನಪಡಿಸಿಕೊಂಡು ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದೆ.
ಪತ್ತೆ ಕಾರ್ಯದಲ್ಲಿ ಮಂಗಳೂರು ನಗರದ ಪೊಲೀಸ್ ಆಯುಕ್ತ ಅನುಪಮ್ ಅಗರವಾಲ್, ಮಾರ್ಗದರ್ಶನದಂತೆ, ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಡಿಸಿಪಿ ಸಿದ್ದಾರ್ಥ ಗೋಯಲ್ ಮತ್ತು ಅಪರಾಧ ಮತ್ತು ಸಂಚಾರ ವಿಭಾಗದ ಡಿಸಿಪಿ ದಿನೇಶ್ ಕುಮಾರ್ ರವರ ನಿರ್ದೇಶನದಂತೆ, ಮಂಗಳೂರು ಉತ್ತರ ವಿಭಾಗದ ಎ.ಸಿ.ಪಿ. ಮನೋಜ್ ಕುಮಾರ್ ರವರ ನೇತೃತ್ವದಲ್ಲಿ ಆರೋಪಿಯಮತ್ತು ಸೊತ್ತು ಪತ್ತೆ ಹಚ್ಚುವಲ್ಲಿ ಮುಲ್ಕಿ ಪೊಲಿಸ್ ಠಾಣೆಯ ಪಿ.ಎ, ವಿದ್ಯಾಧರ ಡಿ ಹಾಗೂ ಪೊಲೀಸ್ ಸಿಬ್ಬಂದಿ ಭಾಗವಹಿಸಿದ್ದರು

Leave a Reply

Your email address will not be published. Required fields are marked *

ಬಂಟ್ವಾಳ: ಶಾಲಾ ಬಸ್ ನಿಯಮ ಪರಿಶೀಲನೆ ; ಶಾಲಾ ಬಸ್‌ಗಳನ್ನು ಪರಿಶೀಲಿಸಿದ ಟ್ರಾಫಿಕ್ ಪೋಲಿಸ್ ಎಸ್.ಐ.ಆದರ್ಶ್…!

ಬಂಟ್ವಾಳ: ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿ ಕೃತಕ ನೆರೆ…..!

ಉಡುಪಿ: ಹೆಬ್ರಿಯಲ್ಲಿ ಅಂದರ್ ಬಾಹರ್ ಇಸ್ಪೀಟ್ ಜೂಜು ಅಡ್ಡೆಗೆ ಪೊಲೀಸರ ದಾಳಿ; 7 ಮಂದಿಯ ಬಂಧನ..!

ಬೆಳ್ತಂಗಡಿ: ಪಿಕಪ್ ವಾಹನ ಡಿಕ್ಕಿಯಾಗಿ ಸ್ಕೂಟರ್ ಸವಾರರಿಬ್ಬರು ಸಾ*ವು..!

ಉಡುಪಿ: ಗೋವನ್ನು ರಾಷ್ಟ್ರೀಯ ಪ್ರಾಣಿಯಾಗಿ ಘೋಷಿಸಿ: ಮುಸ್ಲಿಂ ಬಾಂಧವ್ಯ ವೇದಿಕೆ ಆಗ್ರಹ

ಕುಂದಾಪುರ: ಕಂಟೇನರ್ ಲಾರಿ ಡಿಕ್ಕಿಯಾಗಿ ಬೈಕ್ ಸವಾರ ಮೃತ್ಯು..!

ಬಂಟ್ವಾಳ: ಪುಂಜಾಲಕಟ್ಟೆ ಠಾಣಾ ವ್ಯಾಪ್ತಿಯ ಮನೆಯಲ್ಲಿ ನಡೆದ ಕಳವು ಪ್ರಕರಣದ ಆರೋಪಿಗಳು ಸರೆ..!

ಬೆಂಗಳೂರು: ಮುಖ್ಯಮಂತ್ರಿ ಡಿ. ಕೆ. ಶಿಯವರ ಅವರ ಮುಖ್ಯ ಸಲಹೆಗಾರರನ್ನಾಗಿ ಸುನಿಲ್ ಕಾನುಗೋಲು ನೇಮಕ…!

ಮಂಗಳೂರು: ಕಲ್ಲುಗುಡ್ಡೆ ನಿವಾಸಿ ಅರ್. ಪೈನ್ ಮೆಹತಾಬ್ (18) ನಾಪತ್ತೆ..!

error: Content is protected !!