ಮುಲ್ಕಿ: ಮುಲ್ಕಿ ಬಸ್ ನಿಲ್ದಾಣದ ಬಳಿ ಲಯನ್ಸ್ ಸೌಧದಲ್ಲಿ ನೂತನವಾದ ಕ್ಯಾನ್ ಕೊ ಕ್ಯಾಶ್ಯೂ ಮತ್ತು ಡ್ರೈ ಫ್ರೂಟ್ಸ್ ಸ್ಟೋರ್ ನ ಉದ್ಘಾಟನೆಯನ್ನು ಶಾಸಕ ಉಮಾನಾಥ ಕೋಟ್ಯಾನ್ ನೆರವೇರಿಸಿದರು.
ಈ ಸಂದರ್ಭ ಅವರು ಮಾತನಾಡಿ ಮುಲ್ಕಿ ತಾಲೂಕು ಅಭಿವೃದ್ಧಿಯತ್ತ ಸಾಗುತ್ತಿದ್ದು ನೂತನ ತಾಲೂಕು ಆಡಳಿತ ಸೌಧ, ಪ್ರವಾಸಿ ಮಂದಿರ, ನೂತನ ಅಗ್ನಿಶಾಮಕ ದಳ ಘಟಕ ಸ್ಥಾಪನೆ ಯಂತಹ ಮಹತ್ತರ ಯೋಜನೆಗಳು ಸದ್ಯದಲ್ಲಿ ಕಾರ್ಯಗತಗೊಳ್ಳಲಿದೆ ಜೊತೆಗೆ ಸ್ವಂತ ಉದ್ದಿಮೆಗಳ ಮುಖಾಂತರ ಅಭಿವೃದ್ಧಿಗೆ ಬೆಂಬಲ ಸೂಚಿಸುತ್ತಿರುವ ಉದ್ಯಮಿಗಳ ಕಾರ್ಯ ಯಶಸ್ವಿಯಾಗಲಿ ಎಂದರು.
ಚಿತ್ರನಟ ಅರ್ಜುನ್ ಕಾಪಿ ಕಾಡ್ ಮಾತನಾಡಿ ನೂತನ ಉದ್ಯಮ ಕ್ಯಾನ್ ಕೊ ಕ್ಯಾಶ್ಯೂ ಮತ್ತು ಡ್ರೈ ಫ್ರೂಟ್ಸ್ ಸ್ಟೋರ್ ಯಶಸ್ವಿಗೆ ಮುಲ್ಕಿ ನಾಗರಿಕರು ಬೆಂಬಲ ನೀಡಬೇಕಾಗಿದೆ ಎಂದರು.
ವೇದಿಕೆಯಲ್ಲಿ ಮುಲ್ಕಿ ಲಯನ್ಸ್ ಕ್ಲಬ್ ಅಧ್ಯಕ್ಷೆ ಶೀತಲ್ ಸುಶೀಲ್, ಉಡುಪಿ ವಿನಿ ಟೆಕ್ ಗ್ರೂಪಿನ ಹರೀಶ್ ದೇವಾಡಿಗ,ಕ್ಯಾನ್ ಕೊ ಕ್ಯಾಶ್ಯೂ ಮತ್ತು ಡ್ರೈ ಫ್ರೂಟ್ಸ್ ಸ್ಟೋರ್ ಮಾಲಕ ವೆಂಕಟೇಶ್ ಬಂಗೇರ,
ಲ. ಸುಶೀಲ್ ಬಂಗೇರ, ದಕ್ಷಾ ಸಾಲ್ಯಾನ್ ಚಿತ್ರಾಪು, ರಂಗನಾಥ ಶೆಟ್ಟಿ, ಲ. ಕಿಶೋರ್ ಶೆಟ್ಟಿ ಬಪ್ಪನಾಡು, ಉದಯಕುಮಾರ್ ಶೆಟ್ಟಿ ಕಾರ್ನಾಡ್ ಬೈಪಾಸ್, ಉದಯ ಅಮೀನ್ ಮಟ್ಟು, ದೇವಿ ಪ್ರಸಾದ್ ಕೆಂಪುಗುಡ್ಡೆ, ಪ್ರಭಾಕರ್ ಕೆಂಪುಗುಡ್ಡೆ, ಸತೀಶ್ ಬಂಗೇರ,ಅಶ್ವಥ್ ಕೊಲಕಾಡಿ ಮತ್ತಿತರರು ಉಪಸ್ಥಿತರಿದ್ದರು. ದಿನೇಶ್ ಕೋಲ್ನಾಡು ನಿರೂಪಿಸಿದರು.
ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ ನೀಡಿ ದೇವಿ ಮೂಕಾಂಬಿಕಾ…
ಮಳೆಗಾಲ ಆರಂಭವಾಗುತ್ತಿದ್ದಂತೆ ಸೇತುವೆಯೊಂದು ಕುಸಿದು ಬಿದ್ದ ಪರಿಣಾಮ ಹಲವು ಗ್ರಾಮಗಳ ಸಂಪರ್ಕದ ಕೊಂಡಿ ಕಳಚಿ ಬಿದ್ದು, ಜನರು ದ್ವೀಪದಂತೆ, ಹಳ್ಳಿಯೊಳಗೆ…
ಜ್ವರದಿಂದ ಬಳಲುತ್ತಿದ್ದ ಬಾಲಕಿಯೊರ್ವಳು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದ ಘಟನೆ ಬಂಟ್ವಾಳ ತಾಲೂಕಿನ ಅಲ್ಲಿಪಾದೆ ಎಂಬಲ್ಲಿ ನಡೆದಿದೆ. ಅಲ್ಲಿಪಾದೆ ಅನೇಜ…
ಬಿಸಿರೋಡಿನ ಪ್ರಸಿದ್ದ ಕ್ಯಾಂಟೀನ್ ಒಂದರಲ್ಲಿ ಅಡುಗೆ ಅನಿಲ ಸೋರಿಕೆಯಾಗಿ ಸ್ವಲ್ಪದರಲ್ಲಿ ದೊಡ್ಡ ದುರಂತವೊಂದು ತಪ್ಪಿದೆ. ಬಿಸಿರೋಡಿನ ಮಿನಿ ವಿಧಾನ ಸೌಧದ…
ಬೇಕಲ ಕೋಟೆ ಸಮೀಪದ ಪಳ್ಳಿಕರೆ ಕಡಲತೀರದಲ್ಲಿ ಭಾನುವಾರ ಸಂಜೆ ಸಂಭವಿಸಿದ ದುರ್ಘಟನೆಯಲ್ಲಿ ಇಬ್ಬರು ಕಾಲೇಜು ವಿದ್ಯಾರ್ಥಿಗಳು ಸಮುದ್ರದಲ್ಲಿ ಕೊಚ್ಚಿಹೋಗಿದ್ದು, ಅವರಿಗಾಗಿ…
ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ ಹೊಡೆದ ಘಟನೆ ಸುಬ್ರಹ್ಮಣ್ಯ ಸಮೀಪದ ಕುಲ್ಕುಂದ ಎಂಬಲ್ಲಿ ನಡೆದಿದೆ. ರಾತ್ರಿ ವೇಳೆ…