ಉಡುಪಿ: ಜನವರಿಯಲ್ಲಿ ನಡೆಯಲಿರುವ ಪುತ್ತಿಗೆ ಮಠದ ಪರ್ಯಾಯ ಮಹೋತ್ಸವದ ಹೊರೆಕಾಣಿಕೆ ಸಮಿತಿ ಸಭೆ ಪುತ್ತಿಗೆ ಮಠದ ಸಭಾಂಗಣದಲ್ಲಿ ಭಾನುವಾರ ನಡೆಯಿತು.
ಹೊರೆಕಾಣಿಕೆ ಸಮಿತಿಯ ಸಂಚಾಲಕ ಬೈಕಾಡಿ ಸುಪ್ರಸಾದ್ ಶೆಟ್ಟಿ ಮಾತನಾಡಿ, ಪುತ್ತಿಗೆ ಶ್ರೀಗಳ ಪರ್ಯಯಾ ಮಹೋತ್ಸವ ವನ್ನು ವಿಜೃಂಭಣೆಯಿಂದ ನಡೆಸುವ ಹಿನ್ನೆಲೆಯಲ್ಲಿ ಹೊರಕಾಣಿಕೆ ಮೆರವಣಿಗೆಯನ್ನು ಅದ್ದೂರಿಯಾಗಿ ನಡೆಸಲು ಚಿಂತನೆ ನಡೆಸಲಾಗಿದೆ ಎಂದರು. ಸುಮಾರು 50 ಭಾಗದಲ್ಲಿ ಹೊರೆಕಾಣಿಕೆ ಸಮಿತಿಯನ್ನು ಮಾಡಲಿದ್ದೇವೆ. ಅಲ್ಲಲ್ಲಿ ಸಭೆಗಳನ್ನು ನಡೆಸಿ ಹೊರೆಕಾಣಿಕೆಯನ್ನು ಅಚ್ಚುಕಟ್ಟಾಗಿ ನಿರ್ವಹಿಸಲು ಮಾರ್ಗದರ್ಶನ ನೀಡಲಾಗುತ್ತಿದೆ. ಪುತ್ತಿಗೆ ಶ್ರೀಗಳು ವಿದೇಶದಲ್ಲಿ ಕೂಡ ಮಠಗಳನ್ನು ಸ್ಥಾಪಿಸಿ ನಮ್ಮ ಧರ್ಮ ಸಂಸ್ಕೃತಿಯನ್ನು ಪ್ರಸಿದ್ಧಿ ಪಡಿಸುವಲ್ಲಿ ಯಶಸ್ವಿಯಾಗಿದ್ದಾರೆ. ಹೀಗಾಗಿ ಈ ಇದೊಂದು ವಿಶ್ವಮಟ್ಟದ ಪರ್ಯಾಯವಾಗಿದ್ದು, ನಮ್ಮ ಜವಾಬ್ದಾರಿಯನ್ನು ಅಚ್ಚುಕಟ್ಟಾಗಿ ನಿರ್ವಹಿಸಲಿದ್ದೇವೆ ಎಂದು ಹೇಳಿದರು.
ಸಮಿತಿಯ ಪ್ರಧಾನ ಕಾರ್ಯದರ್ಶಿ ಬೆಳಪು ದೇವಿಪ್ರಸಾದ್ ಶೆಟ್ಟಿ ಮಾತನಾಡಿ, ಉಭಯ ಜಿಲ್ಲೆಯ ಸಹಕಾರಿಗಳು ಸೇರಿ ಉತ್ತಮ ರೀತಿಯಲ್ಲಿ ಹೊರೆಕಾಣಿಕೆ ನೀಡಬೇಕೆಂದು ಮನವಿ ಮಾಡಿದ್ದೇವೆ. ಬೇರೆ ಬೇರೆ ಸಂಸ್ಥೆಗಳಿಗೆ ಎಲ್ಲ ಮಾಹಿತಿ ನೀಡಿದ್ದು, ಹೊರೆಕಾಣಿಕೆ ಮೆರವಣಿಗೆಯ ಬಗ್ಗೆಯೂ ಮಾಹಿತಿ ನೀಡಲಾಗುತ್ತಿದೆ. ಅದೊಂದು ನಾಡ ಹಬ್ಬದ ರೀತಿಯಲ್ಲಿ ನಡೆಯಲಿದೆ. ಸರಕಾರದ ವತಿಯಿಂದ ವಹಿಸಬೇಕಾದ ಜವಾಬ್ದಾರಿಯ ಬಗ್ಗೆಯೂ ಜಿಲ್ಲಾಧಿಕಾರಿ ಗಳ ನೇತೃತ್ವದಲ್ಲಿ ಸಭೆ ನಡೆಸಲು ತೀರ್ಮಾನಿಸಲಾಗಿದೆ ಎಂದರು.
ಸಭೆಯಲ್ಲಿ ಆನೆಗುಡ್ಡೆ ವಿನಾಯಕ ದೇವಸ್ಥಾನ ಮ್ಯಾನೆಜಿಂಗ್ ಟ್ರಸ್ಟಿ ಕೆ.ಶ್ರೀ ರಮಣ ಉಪಾಧ್ಯಾಯ, ಕೃಷ್ಣಮೂರ್ತಿ ಆಚಾರ್ಯ, ಅಮೃತಾ ಕೃಷ್ಣಮೂರ್ತಿ, ಯೋಗೀಶ್ ಶೆಟ್ಟಿ, ಅಂಡಾರು ದೇವಿಪ್ರಸಾದ್ ಶೆಟ್ಟಿ, ಬ್ರಾಹ್ಮಣ ಸಭಾದ ಮಂಜುನಾಥ ಉಪಾಧ್ಯ, ಶ್ರೀಕಾಂತ ನಾಯಕ್, ಶಶಿಕಾಂತ್ ಪಡುಬಿದ್ರಿ, ಜ್ಯೋತಿ ದೇವಾಡಿಗ, ಮಾತೃ ಮಂಡಳಿಯ ಪದ್ಮಾ, ಶ್ರೀಕಾಂತ್ ಸಿದ್ದಾಪುರ, ಉದಯ್ ಮಠದಬೆಟ್ಟು, ಕೃಷ್ಣ ರಾವ್ ಕೊಡಂಚ, ಬಾಸ್ಕರ್ ರಾವ್ ಕಿದಿಯೂರು, ಏಲ್.ಎನ್.ಹೆಗ್ಡೆ, ರಾಘವೇಂದ್ರ ಕಿಣಿ, ರಾಘವೇಂದ್ರ ಭಟ್ ಕನರ್ಪಾಡಿ, ರಘುಪತಿ ರಾವ್, ಚೈತನ್ಯ ಮತ್ತಿತರರು ಉಪಸ್ಥಿತರಿದ್ದರು.
ನಾಗರಾಜ್ ಆಚಾರ್ಯ ಸ್ವಾಗತಿಸಿ, ವಿಜಯ ರಾಘವ ವಂದಿಸಿದರು. ರವೀಂದ್ರ ಆಚಾರ್ಯ ಕಾರ್ಯಕ್ರಮ ನಿರೂಪಿಸಿದರು.
ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾಧ್ಯಕ್ಷ, ಜಾನಪದ ಕಲಾವಿದ ಡಾ.ಗಣೇಶ್ ಗಂಗೊಳ್ಳಿ ಅವರು ಇಂದು ನಿಧನರಾಗಿದ್ದಾರೆ. ಕಳೆದ ರಾತ್ರಿ ಸಮಾರಂಭವೊಂದರಲ್ಲಿ…
ಕೆಎಸ್ಆರ್ಟಿಸಿ ಬಸ್ ಡಿಕ್ಕಿಯಾಗಿ ಮಹಿಳೆಯೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ತೆಕ್ಕಟ್ಟೆ ಪ್ರೆಸಿಡೆಂಟ್ ಕನ್ವೆನ್ಷನ್ ಹಾಲ್ ಮುಂಭಾಗ…
ಕನ್ನಡ ಚಿತ್ರರಂಗದ ಖ್ಯಾತ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕುಟುಂಬ ಸಮೇತರಾಗಿ ಆಗಮಿಸಿದ್ದಾರೆ. ರಿಷಬ್…
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು -ಸುಳ್ಯ ರಾಷ್ಟ್ರೀಯ ಹೆದ್ದಾರಿಯ ಕೌಡಿಚ್ಚಾರು ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಪಿಕಪ್ ವಾಹನ ಮೋರಿಗೆ…
ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಮಹಿಳೆಯೊಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಘಟನೆ ದಕ್ಷಿಣ…
ವಸತಿಗೃಹವೊಂದರ ಮುಂಭಾಗದಲ್ಲಿ ನಿಲ್ಲಿಸಲಾಗಿದ್ದ ಬೈಕ್ ಕಳವು ಮಾಡಿದ ಆರೋಪಿಗಳಿಬ್ಬರನ್ನು ಬಂಟ್ವಾಳ ನಗರ ಠಾಣಾ ಪೋಲೀಸರು ಬಂಧಿಸಿದ್ದಾರೆ. ಬಂಟ್ವಾಳ ಸಜೀಪ ಮುನ್ನೂರು…