ಉಡುಪಿ: ರಾಜ್ಯ ಕಾರ್ಮಿಕ ಸಚಿವ ಸಂತೋಷ್ ಲಾಡ್ ರವರನ್ನು ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ರವರು ಬೆಂಗಳೂರಿನಲ್ಲಿ ಭೇಟಿಯಾಗಿ ಜಿಲ್ಲೆಯ ಅಸಂಘಟಿತ ಕಾರ್ಮಿಕರಾದ ಚಿನ್ನ ಬೆಳ್ಳಿ ಕುಶಲಕರ್ಮಿಗಳು, ವಿಶ್ವಕರ್ಮ ಸಮುದಾಯದ ಬಡಗಿ, ಕಮ್ಮಾರ ವೃತ್ತಿ, ಟೈಲರ್,ಆಟೋ ಚಾಲಕರು, ಮೀನುಗಾರಿಕಾ ಕಾರ್ಮಿಕರು ಎದುರಿಸುತ್ತಿರುವ ಸಮಸ್ಯೆ ಹಾಗೂ ಬೇಡಿಕೆಗಳ ಬಗ್ಗೆ ಸಮಾಲೋಚನೆ ನಡೆಸಿ ಸಮಸ್ಯೆಗಳ ಪರಿಹಾರಕ್ಕೆ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದರು.
ಇತ್ತೀಚಿನ ದಿನಗಳಲ್ಲಿ ಕರಾವಳಿ ಜಿಲ್ಲೆಯಾದ್ಯಂತ ಬಂಡವಾಳಶಾಹಿ ಕಾರ್ಪೊರೇಟ್ ವ್ಯವಸ್ಥೆಯ ಚಿನ್ನಾಭರಣ ಸಂಸ್ಥೆಗಳು ಹೊರ ರಾಜ್ಯದ ಕಾರ್ಮಿಕರಿಂದ ಆಭರಣಗಳನ್ನು ತಯಾರಿಸಿ ಮಾರಾಟ ಮಾಡುತ್ತಿದ್ದು, ಜಿಲ್ಲೆಯ ಸ್ಥಳೀಯ ಕುಶಲಕರ್ಮಿಗಳಿಗೆ ಅವಕಾಶ ನೀಡದೆ ಸಂಕಷ್ಟ ಎದುರಿಸುವಂತಾಗಿದೆ.
ಅಸಂಘಟಿತ ಕಾರ್ಮಿಕರು ಸರಕಾರದಿಂದ ನೀಡುವ ಸೌಲಭ್ಯದಿಂದ ವಂಚಿತರಾಗಿದ್ದು, ಆರೋಗ್ಯ ವಿಮೆ, ಮಕ್ಕಳ ವಿದ್ಯಭ್ಯಾಸಕ್ಕಾಗಿ ವಿದ್ಯಾರ್ಥಿ ವೇತನ, ಕಡಿಮೆ ಬಡ್ಡಿದರದಲ್ಲಿ ಸಾಲ ಯೋಜನೆ, ಇ ಎಸ್ ಐ ಸೌಲಭ್ಯ, ಕೌಶಲ್ಯ ತರಬೇತಿ ಕಾರ್ಯಕ್ರಮಗಳು, ಪಿಂಚಣಿ ಯೋಜನೆಗಳ ಬಗ್ಗೆ ಸೂಕ್ತ ಕ್ರಮ ವಹಿಸುವಂತೆ ಸಚಿವರಿಗೆ ಮನವಿ ಮಾಡಿದರು.
ಶೀಘ್ರದಲ್ಲಿಯೇ ಚಿನ್ನ ಬೆಳ್ಳಿ ಕುಶಲಕರ್ಮಿಗಳು, ವಿಶ್ವಕರ್ಮ ಸಮುದಾಯ ಹಾಗೂ ಟೈಲರ್ ಅಸೋಸಿಯೇಶನ್, ಆಟೋ ಚಾಲಕರ ಸಂಘ, ಮೀನುಗಾರಿಕಾ ಕಾರ್ಮಿಕರ ನಿಯೋಗದೊಂದಿಗೆ ವಿವಿಧ ಬೇಡಿಕೆಗಳ ಬಗ್ಗೆ ಸಚಿವರನ್ನು ಭೇಟಿಯಾಗಿ ಮಾತುಕತೆ ನಡೆಸಲು ಅವಕಾಶ ನೀಡುವಂತೆ ಕೋರಿದರು.
ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ ನೀಡಿ ದೇವಿ ಮೂಕಾಂಬಿಕಾ…
ಮಳೆಗಾಲ ಆರಂಭವಾಗುತ್ತಿದ್ದಂತೆ ಸೇತುವೆಯೊಂದು ಕುಸಿದು ಬಿದ್ದ ಪರಿಣಾಮ ಹಲವು ಗ್ರಾಮಗಳ ಸಂಪರ್ಕದ ಕೊಂಡಿ ಕಳಚಿ ಬಿದ್ದು, ಜನರು ದ್ವೀಪದಂತೆ, ಹಳ್ಳಿಯೊಳಗೆ…
ಜ್ವರದಿಂದ ಬಳಲುತ್ತಿದ್ದ ಬಾಲಕಿಯೊರ್ವಳು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದ ಘಟನೆ ಬಂಟ್ವಾಳ ತಾಲೂಕಿನ ಅಲ್ಲಿಪಾದೆ ಎಂಬಲ್ಲಿ ನಡೆದಿದೆ. ಅಲ್ಲಿಪಾದೆ ಅನೇಜ…
ಬಿಸಿರೋಡಿನ ಪ್ರಸಿದ್ದ ಕ್ಯಾಂಟೀನ್ ಒಂದರಲ್ಲಿ ಅಡುಗೆ ಅನಿಲ ಸೋರಿಕೆಯಾಗಿ ಸ್ವಲ್ಪದರಲ್ಲಿ ದೊಡ್ಡ ದುರಂತವೊಂದು ತಪ್ಪಿದೆ. ಬಿಸಿರೋಡಿನ ಮಿನಿ ವಿಧಾನ ಸೌಧದ…
ಬೇಕಲ ಕೋಟೆ ಸಮೀಪದ ಪಳ್ಳಿಕರೆ ಕಡಲತೀರದಲ್ಲಿ ಭಾನುವಾರ ಸಂಜೆ ಸಂಭವಿಸಿದ ದುರ್ಘಟನೆಯಲ್ಲಿ ಇಬ್ಬರು ಕಾಲೇಜು ವಿದ್ಯಾರ್ಥಿಗಳು ಸಮುದ್ರದಲ್ಲಿ ಕೊಚ್ಚಿಹೋಗಿದ್ದು, ಅವರಿಗಾಗಿ…
ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ ಹೊಡೆದ ಘಟನೆ ಸುಬ್ರಹ್ಮಣ್ಯ ಸಮೀಪದ ಕುಲ್ಕುಂದ ಎಂಬಲ್ಲಿ ನಡೆದಿದೆ. ರಾತ್ರಿ ವೇಳೆ…