ದಕ್ಷಿಣ ಕನ್ನಡ : ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಹೊಸಂಗಡಿಯಲ್ಲಿ ಕೃಷಿ ಮುಂಚೂಣಿ ಪ್ರಾತ್ಯಕ್ಷಿಕೆ 2023-24 ರ ಅಡಿಯಲ್ಲಿ ಭಾ.ಕೃ.ಅ.ಫ- ಕೃಷಿ ವಿಜ್ಞಾನ ಕೇಂದ್ರ (ದಕ್ಷಿಣ ಕನ್ನಡ) ಮಂಗಳೂರು, ವಿಜಯ ಗ್ರಾಮೀಣ ಅಭಿವೃದ್ದಿ ಪ್ರತಿಷ್ಠಾನ (ರಿ.) ಮಂಗಳೂರು ಹಾಗೂ ಪ್ರೆಂಡ್ಸ್ ಕ್ಲಬ್ (ರಿ.) ಹೊಸಂಗಡಿ ಇವರುಗಳ ಸಹಭಾಗಿತ್ವದಲ್ಲಿ ಅಡಿಕೆ ಬೆಳೆಯಲ್ಲಿ ಎಲೆ ಚುಕ್ಕೆ ರೋಗದ ನಿರ್ವಹಣೆ ಕುರಿತು ತರಬೇತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ಈ ಕಾರ್ಯಕ್ರಮದಲ್ಲಿ ಕೃಷಿ ವಿಜ್ಞಾನ ಕೇಂದ್ರದ ಸಸ್ಯ ಸಂರಕ್ಷಣೆ ವಿಜ್ಞಾನಿಗಳಾದ ಡಾ. ಕೇದಾರನಾಥ ರವರು ಭಾಗವಹಿಸಿ ಎಲೆ ಚುಕ್ಕೆ ರೋಗದ ಹರಡುವಿಕೆ ಹಾಗೂ ಅದರ ನಿರ್ವಹಣೆ ಕುರಿತು ಮಾಹಿತಿ ನೀಡಿ, ಔಷಧೋಪಚಾರವಾಗಿ (ಪ್ರೋಪಿಕೊನಾಜೊಲ್ 25 % ಇಸಿ @1 ಮಿಲಿ ಪ್ರತಿ ಲೀಟರ್ ನೀರಿನಲ್ಲಿ ಬೆರಸಿ ಎಲೆ ಹಾಗೂ ಹಿಂಗಾರಕ್ಕೆ ಸಿಂಪರಣೆ ಮಾಡಬೇಕು ಹಾಗೆ 30 ದಿನಗಳ ನಂತರ ಕಾರ್ಬೆಂಡೇಜಿಮ್+ ಮ್ಯಾಂಕೋಜೆಬ್ 75 ಡಬ್ಲ್ಯೂ ಪಿ @ 2 ಗ್ರಾಂ ಪ್ರತಿ ಲೀಟರ್ ನೀರಿನಲ್ಲಿ ಬೆರಸಿ ಎಲೆ ಹಾಗೂ ಹಿಂಗಾರಕ್ಕೆ ಸಿಂಪರಣೆ ಮಾಡಬೇಕು ಎಂಬ) ಮಾಹಿತಿ ನೀಡಿದರು. ಡಾ.ಮಲ್ಲಿಕಾರ್ಜುನ್ ಎಲ್ ಮಣ್ಣು ವಿಜ್ಞಾನಿಗಳು ಮಣ್ಣು ಪರೀಕ್ಷೆ ಹಾಗೂ ಪೋಷಕಾಂಶಗಳ ನಿರ್ವಹಣೆ ಕುರಿತು ಹಾಗೂ ಡಾ. ರಶ್ಮಿ ಆರ್ ತೋಟಗಾರಿಕೆ ಬೆಳೆಗಳ ಕುರಿತು ಮಾಹಿತಿಯನ್ನು ನೀಡಿದರು. ಶ್ರೀ ಹರಿಪ್ರಸಾದ್ ರವರು ವಿಜ್ಞಾನಿಗಳನ್ನು ಹಾಗೂ ಕೃಷಿಕರನ್ನು ಸ್ವಾಗತಿಸಿದರು. ಈ ಕಾರ್ಯಕ್ರಮದಲ್ಲಿ ಒಟ್ಟು 22 ರೈತರು ಭಾಗವಹಿಸಿದ್ದರು ಹಾಗೂ ಆಯ್ದ 10 ರೈತರಿಗೆ ಕೃಷಿ ಪರಿಕಗಳನ್ನು ವಿತರಿಸಲಾಯಿತು.
ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ ನೀಡಿ ದೇವಿ ಮೂಕಾಂಬಿಕಾ…
ಮಳೆಗಾಲ ಆರಂಭವಾಗುತ್ತಿದ್ದಂತೆ ಸೇತುವೆಯೊಂದು ಕುಸಿದು ಬಿದ್ದ ಪರಿಣಾಮ ಹಲವು ಗ್ರಾಮಗಳ ಸಂಪರ್ಕದ ಕೊಂಡಿ ಕಳಚಿ ಬಿದ್ದು, ಜನರು ದ್ವೀಪದಂತೆ, ಹಳ್ಳಿಯೊಳಗೆ…
ಜ್ವರದಿಂದ ಬಳಲುತ್ತಿದ್ದ ಬಾಲಕಿಯೊರ್ವಳು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದ ಘಟನೆ ಬಂಟ್ವಾಳ ತಾಲೂಕಿನ ಅಲ್ಲಿಪಾದೆ ಎಂಬಲ್ಲಿ ನಡೆದಿದೆ. ಅಲ್ಲಿಪಾದೆ ಅನೇಜ…
ಬಿಸಿರೋಡಿನ ಪ್ರಸಿದ್ದ ಕ್ಯಾಂಟೀನ್ ಒಂದರಲ್ಲಿ ಅಡುಗೆ ಅನಿಲ ಸೋರಿಕೆಯಾಗಿ ಸ್ವಲ್ಪದರಲ್ಲಿ ದೊಡ್ಡ ದುರಂತವೊಂದು ತಪ್ಪಿದೆ. ಬಿಸಿರೋಡಿನ ಮಿನಿ ವಿಧಾನ ಸೌಧದ…
ಬೇಕಲ ಕೋಟೆ ಸಮೀಪದ ಪಳ್ಳಿಕರೆ ಕಡಲತೀರದಲ್ಲಿ ಭಾನುವಾರ ಸಂಜೆ ಸಂಭವಿಸಿದ ದುರ್ಘಟನೆಯಲ್ಲಿ ಇಬ್ಬರು ಕಾಲೇಜು ವಿದ್ಯಾರ್ಥಿಗಳು ಸಮುದ್ರದಲ್ಲಿ ಕೊಚ್ಚಿಹೋಗಿದ್ದು, ಅವರಿಗಾಗಿ…
ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ ಹೊಡೆದ ಘಟನೆ ಸುಬ್ರಹ್ಮಣ್ಯ ಸಮೀಪದ ಕುಲ್ಕುಂದ ಎಂಬಲ್ಲಿ ನಡೆದಿದೆ. ರಾತ್ರಿ ವೇಳೆ…