ಮಕ್ಕಳ ಕಲಾಲೋಕ ಕನ್ನಡ ಸಾಹಿತ್ಯ ಪರಿಷತ್ತು ಬಂಟ್ವಾಳ ತಾಲೂಕು ಘಟಕವು ಮಕ್ಕಳಿಗಾಗಿ ಕಲೆ ಸಾಹಿತ್ಯ ಚಟುವಟಿಕೆಗಳಲ್ಲಿ ತನ್ನನ್ನು ವಿಪುಲವಾಗಿ ತೊಡಗಿಸಿಕೊಂಡಿರುವವರಿಗೆ ಪ್ರತಿ ವರ್ಷ ನೀಡುವ ತಾಲೂಕು ಮಟ್ಟದ ಬಾಲಬಂಧು ಪುರಸ್ಕಾರಕ್ಕೆ ಬಾರಿ ರಾಜೇಶ ವಿಟ್ಲ ಆಯ್ಕೆಯಾಗಿದ್ದಾರೆ.
ವಿಟ್ಲದ ಆರ್.ಕೆ. ಕಲಾ ಸಂಸ್ಥೆಯ ಸಹಪ್ರವರ್ತಕರಾಗಿರುವ ರಾಜೇಶ್ ವಿಟ್ಲ ತನ್ನ ಕಲಾ ವೃತ್ತಿ ಬದುಕಿನೊಂದಿಗೆ ಮಕ್ಕಳಿಗಾಗಿ ಬಂಟ್ವಾಳ ತಾಲೂಕಿನ ವಿವಿಧ ಶಾಲೆಗಳಲ್ಲಿ ರಜಾ ಶಿಬಿರಗಳನ್ನು ಸಂಘಟಿಸಿ, ಮಕ್ಕಳಲ್ಲಿ ಕಲೆ ಸಾಹಿತ್ಯವನ್ನು ಚಿಗುರಿಸುವ ಸೇವಾ ಕಾರ್ಯಗಳನ್ನು ಮಾಡುತ್ತಿದ್ದಾರೆ ಎಂಬುದನ್ನು ಗುರುತಿಸಿ ಬಾಲಬಂಧು ಪುರಸ್ಕಾರಕ್ಕೆ ಅವರನ್ನು ಆಯ್ಕೆ ಮಾಡಲಾಗಿದೆ.
ಕಡೇಶಿವಾಲಯ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ನೇತೃತ್ವದಲ್ಲಿ ದಿನಾಂಕ 06-12-2023 ರಂದು ಜರಗಲಿರುವ 17ನೇ ವರ್ಷದ ಬಂಟ್ವಾಳ ತಾಲೂಕು ಮಕ್ಕಳ ಸಾಹಿತ್ಯ ಸಮ್ಮೇಳನದಲ್ಲಿ, ಸಮಾರೋಪ ಸಮಾರಂಭದಲ್ಲಿ ರಾಜೇಶ ವಿಟ್ಲ ಅವರನ್ನು ಸನ್ಮಾನಿಸಿ, ಬಂಟ್ವಾಳ ತಾಲೂಕು ಮಟ್ಟದ ಬಾಲಬಂಧು ಪುರಸ್ಕಾರವನ್ನುಪ್ರದಾನ ಮಾಡಲಾಗುವುದು ಎಂದು ಮಕ್ಕಳ ಕಲಾ ಲೋಕದ ಅಧ್ಯಕ್ಷರಾದ ರಮೇಶ ಎಂ. ಬಾಯಾರು ತಿಳಿಸಿರುತ್ತಾರೆ
ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಪೋಷಕ ಸದಸ್ಯರೂ, ಬಂಟ್ಸ್ ಅಸೋಸಿಯೇಷನ್ ನಾರ್ತ್ ಅಮೆರಿಕಾ (BANA) ಅಧ್ಯಕ್ಷರೂ ಆದ ಶ್ರೀ ಮಂಜುನಾಥ್…
ಉಡುಪಿ ತಾಲೂಕಿನಲ್ಲಿ ಕಡಲ್ಕೊರೆತದಿಂದ ಹಾನಿಗೊಳಗಾಗಿರುವ ಹೆಜಮಾಡಿ, ಪಡುಬಿದ್ರಿ, ಎರ್ಮಾಳು, ಕಾಪು, ಪೊಲಿಪು ಹಾಗೂ ಕಟಪಾಡಿ-ಮಟ್ಟು ಪ್ರದೇಶಗಳಿಗೆ ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ.…
ಮಳೆ ಸುರಿದರೆ ಸಾಕು, ಬಂಟ್ವಾಳ ತಾಲೂಕಿನ ಮಾಣಿ ಸಮೀಪದ ಪೆರಾಜೆ ಗ್ರಾಮದ ಜೋಗಿಬೆಟ್ಟು ರಸ್ತೆಯಲ್ಲಿ ಸಂಚಾರ ದುಸ್ತರವಾಗುತ್ತಿದೆ. ರಾಷ್ಟ್ರೀಯ ಹೆದ್ದಾರಿಗೆ…
ಭಾರತ ಮತ್ತು ಅಮೆರಿಕಾಗಳು ಅನೇಕ ಸಾಮಾನ್ಯ ಅಂಶಗಳನ್ನು ಹೊಂದಿವೆ. ಅಮೆರಿಕಾ ಅವಕಾಶಗಳ ನಗರ. ಇಲ್ಲಿಗೆ ವಲಸೆ ಬಂದು ವಾಸಿಸುತ್ತಿರುವ ಭಾರತೀಯರು…
ವಾಹನ ದಟ್ಟಣೆ ಹೆಚ್ಚುತ್ತಿರುವ ನಗರದಲ್ಲಿ ಸುಗಮ ಸಂಚಾರಕ್ಕೆ ಸ್ಮಾರ್ಟ್ ಸಿಟಿ ಯೋಜನೆಯಡಿ 181ಕ್ಕೂ ಅಧಿಕ ಎಐ ಸಿ.ಸಿ ಕ್ಯಾಮರಾಗಳನ್ನು ಅಳವಡಿಸಲಾಗಿದೆ.…
ರಾಯಿ ಗ್ರಾಮದ ಪಾಂಚಕೋಡಿ ನಿವಾಸಿ ಜೋಸೆಫ್ ಪಿಂಟೋ ಎಂಬವರ ಪುತ್ರ ಜೀವನ್ ಪಿಂಟೊ ಅವರ ಚಪ್ಪಲಿ ಮತ್ತು ಟಾರ್ಚ್ ಶನಿವಾರ…