ಮೂಡುಬಿದಿರೆ: ಪುರಸಭಾ ವ್ಯಾಪ್ತಿಯಲ್ಲಿ ಎರಡು ರೋಯಲ್ ಎನ್ ಫೀಲ್ಡ್ ಮೋಟಾರು ಸೈಕಲ್ ಗಳನ್ನು ಕಳವು ಮಾಡಿದ್ದ ಕಳ್ಳರಿಬ್ಬರನ್ನು ಮೂಡುಬಿದಿರೆ ಪೊಲೀಸರು ಬಂಧಿಸಿದ್ದು, ಅವರಿಂದ ಮೋಟರ್ ಸೈಕಲನ್ನು ವಶಕ್ಕೆ ಪಡಿಸಿಕೊಂಡಿದ್ದಾರೆ.
ಬಂಧಿತರನ್ನು ಮೂಡುಬಿದಿರೆಯ ಕೋಟೆಬಾಗಿಲು ನಿವಾಸಿಗಳಾದ ಸಯ್ಯದ್ ಝಾಕೀರ್ (೨೦) ಹಾಗೂ ಮೊಹಮ್ಮದ್ ಶಾಹೀಮ್ (೨೪) ಎಂದು ಗುರುತಿಸಲಾಗಿದೆ.
ಮೂಡಬಿದ್ರೆ ಪೊಲೀಸ್ ನಿರೀಕ್ಷಕರಿಗೆ ನ.೭ ರಂದು ಬಂದ ಖಚಿತ ಮಾಹಿತಿಯ ಮೇರೆಗೆ ಅವರು ಹಾಗೂ ಠಾಣಾ ಸಿಬ್ಬಂದಿಗಳು ಬೆಳಗಿನ ಜಾವ ಮೂಡಬಿದ್ರೆ ಠಾಣಾ ವ್ಯಾಪ್ತಿಯ ಮಾರ್ಪಾಡಿ ಗ್ರಾಮದ ಸಾವಿರ ಕಂಬದ ಬಸದಿಯ ಬಳಿ ಇರುವ ಕೊಂಡೆ ಸ್ಟ್ರೀಟ್ ಎಂಬಲ್ಲಿ ಇಬ್ಬರು ಯುವಕರನ್ನು ಹಾಗೂ ಅವರ ವಶದಲ್ಲಿದ್ದ ನಂಬ್ರ ಪ್ಲೇಟ್ ಇಲ್ಲದ ರಾಯಲ್ ಎನ್ಫಿಲ್ಡ್ ಕ್ಲಾಸಿಕ್ ೩೫೦ ಮೋಟಾರು ಸೈಕಲಿನ ಸಮೇತ ವಶಕ್ಕೆ ಪಡೆದಿದ್ದಾರೆ.
ಅವರನ್ನು ಕೂಲಂಕುಶವಾಗಿ ತನಿಖೆ ನಡೆಸಿದಾಗ ಅ.೨೪-೨೫ ರ ಮಧ್ಯರಾತ್ರಿ ಮೂಡಬಿದ್ರೆ ಜೈನ್ ಪೇಟೆಯ ಬಡಗ ಬಸದಿ ಎದುರು ಇರುವ ದೇವಿ ಕೃಪಾ ಅಪಾರ್ಟ್ ಮೆಟ್ನ ಪಾರ್ಕಿಂಗ್ ಏರಿಯಾದಲ್ಲಿ ನಿಲ್ಲಿಸಿದ್ದ ಬೈಕನ್ನು ಕಳ್ಳತನ ಮಾಡಿರುವುದಾಗಿ ಒಪ್ಪಿಕೊಂಡಿರುತ್ತಾರೆ, ಆರೋಪಿಗಳು ವಿಚಾರಣೆಯ ವೇಳೆ ಮೂಡಬಿದ್ರೆ ಠಾಣಾ ವ್ಯಾಪ್ತಿಯ ಮಾರ್ಪಾಡಿ ಗ್ರಾಮದಲ್ಲಿರುವ ಎವರ್ ಪ್ರೈಸ್ ರೆಸಿಡೆನ್ಸ್, ಅಪಾರ್ಟ್ ಮೆಂಟ್ನ ಪಾರ್ಕಿಂಗ್ ಏರಿಯಾದಲ್ಲಿ ನಿಲ್ಲಿಸಿದ್ದ ಕೆಎ-೧೯-ಯುಇ-೦೦೦೯ ನೇ ರಾಯಲ್ ಎನ್ಫಿಲ್ಡ್ ಕ್ಲಾಸಿಕ್ ೩೫೦ ಮೋಟಾರು ಸೈಕಲನ್ನು ಕೂಡ ಕಳವು ಮಾಡಿ ಪೇಪರ್ ಮಿಲ್ ಬಳಿ ಇರುವ ಕೀರ್ತಿ ನಗರ ಕ್ರಾಸ್ ಬಳಿ ಪೊದೆಗಳ ಮಧ್ಯೆ ಬಚ್ಚಿಟ್ಟಿರುವ ಬಗ್ಗೆ ಮಾಹಿತಿ ಕಲೆ ಹಾಕಿ ಬೈಕನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ.
ವಶಪಡಿಸಿಕೊಂಡ ಸೊತ್ತುಗಳ ಒಟ್ಟು ಮೌಲ್ಯ ೩,೦೦,೦೦೦ ರೂ. ಎಂದು ಅಂದಾಜಿಸಲಾಗಿದೆ.
ಕಾರ್ಯಚರಣೆಯಲ್ಲಿ ಮಂಗಳೂರು ನಗರದ ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ಅವರ ಮಾರ್ಗದರ್ಶನದಲ್ಲಿ ಡಿಸಿಪಿಗಳಾದ ಸಿದಾರ್ಥ ಗೊಯಲ್ ಹಾಗೂ ದಿನೇಶ್ ಕುಮಾರ್ ಮತ್ತು ಮಂಗಳೂರು ಉತ್ತರ ಉಪ ವಿಭಾಗದ ಎಸಿಪಿ ಮನೋಜ್ ಕುಮಾರ್ ನಾಯಕ್ ಅವರ ನಿರ್ದೇಶನದಲ್ಲಿ ಮೂಡಬಿದ್ರೆ ಠಾಣಾ ಪೊಲೀಸ್ ನಿರೀಕ್ಷಕ ಸಂದೇಶ್ ಪಿ.ಜಿ ಹಾಗೂ ಠಾಣಾ ಅಪರಾಧ ವಿಭಾಗದ ಸಿಬ್ಬಂಧಿಯವರಾದ ಮೊಹಮ್ಮದ್ ಇಟ್ಬಾಲ್, ಮೊಹಮ್ಮದ್ ಹುಸೇನ್, ಅಕೀಲ್ ಅಹಮ್ಮದ್, ನಾಗರಾಜ್, ವೆಂಕಟೇಶ್ ಮತ್ತು ಚಂದ್ರಹಾಸ ರೈ ಭಾಗವಹಿಸಿದ್ದರು.
ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ ನೀಡಿ ದೇವಿ ಮೂಕಾಂಬಿಕಾ…
ಮಳೆಗಾಲ ಆರಂಭವಾಗುತ್ತಿದ್ದಂತೆ ಸೇತುವೆಯೊಂದು ಕುಸಿದು ಬಿದ್ದ ಪರಿಣಾಮ ಹಲವು ಗ್ರಾಮಗಳ ಸಂಪರ್ಕದ ಕೊಂಡಿ ಕಳಚಿ ಬಿದ್ದು, ಜನರು ದ್ವೀಪದಂತೆ, ಹಳ್ಳಿಯೊಳಗೆ…
ಜ್ವರದಿಂದ ಬಳಲುತ್ತಿದ್ದ ಬಾಲಕಿಯೊರ್ವಳು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದ ಘಟನೆ ಬಂಟ್ವಾಳ ತಾಲೂಕಿನ ಅಲ್ಲಿಪಾದೆ ಎಂಬಲ್ಲಿ ನಡೆದಿದೆ. ಅಲ್ಲಿಪಾದೆ ಅನೇಜ…
ಬಿಸಿರೋಡಿನ ಪ್ರಸಿದ್ದ ಕ್ಯಾಂಟೀನ್ ಒಂದರಲ್ಲಿ ಅಡುಗೆ ಅನಿಲ ಸೋರಿಕೆಯಾಗಿ ಸ್ವಲ್ಪದರಲ್ಲಿ ದೊಡ್ಡ ದುರಂತವೊಂದು ತಪ್ಪಿದೆ. ಬಿಸಿರೋಡಿನ ಮಿನಿ ವಿಧಾನ ಸೌಧದ…
ಬೇಕಲ ಕೋಟೆ ಸಮೀಪದ ಪಳ್ಳಿಕರೆ ಕಡಲತೀರದಲ್ಲಿ ಭಾನುವಾರ ಸಂಜೆ ಸಂಭವಿಸಿದ ದುರ್ಘಟನೆಯಲ್ಲಿ ಇಬ್ಬರು ಕಾಲೇಜು ವಿದ್ಯಾರ್ಥಿಗಳು ಸಮುದ್ರದಲ್ಲಿ ಕೊಚ್ಚಿಹೋಗಿದ್ದು, ಅವರಿಗಾಗಿ…
ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ ಹೊಡೆದ ಘಟನೆ ಸುಬ್ರಹ್ಮಣ್ಯ ಸಮೀಪದ ಕುಲ್ಕುಂದ ಎಂಬಲ್ಲಿ ನಡೆದಿದೆ. ರಾತ್ರಿ ವೇಳೆ…