ದಕ್ಷಿಣ ಕನ್ನಡ : ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಹೊಸಂಗಡಿಯಲ್ಲಿ ಕೃಷಿ ಮುಂಚೂಣಿ ಪ್ರಾತ್ಯಕ್ಷಿಕೆ 2023-24 ರ ಅಡಿಯಲ್ಲಿ ಭಾ.ಕೃ.ಅ.ಫ- ಕೃಷಿ ವಿಜ್ಞಾನ ಕೇಂದ್ರ (ದಕ್ಷಿಣ ಕನ್ನಡ) ಮಂಗಳೂರು, ವಿಜಯ ಗ್ರಾಮೀಣ ಅಭಿವೃದ್ದಿ ಪ್ರತಿಷ್ಠಾನ (ರಿ.) ಮಂಗಳೂರು ಹಾಗೂ ಪ್ರೆಂಡ್ಸ್ ಕ್ಲಬ್ (ರಿ.) ಹೊಸಂಗಡಿ ಇವರುಗಳ ಸಹಭಾಗಿತ್ವದಲ್ಲಿ ಅಡಿಕೆ ಬೆಳೆಯಲ್ಲಿ ಎಲೆ ಚುಕ್ಕೆ ರೋಗದ ನಿರ್ವಹಣೆ ಕುರಿತು ತರಬೇತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ಈ ಕಾರ್ಯಕ್ರಮದಲ್ಲಿ ಕೃಷಿ ವಿಜ್ಞಾನ ಕೇಂದ್ರದ ಸಸ್ಯ ಸಂರಕ್ಷಣೆ ವಿಜ್ಞಾನಿಗಳಾದ ಡಾ. ಕೇದಾರನಾಥ ರವರು ಭಾಗವಹಿಸಿ ಎಲೆ ಚುಕ್ಕೆ ರೋಗದ ಹರಡುವಿಕೆ ಹಾಗೂ ಅದರ ನಿರ್ವಹಣೆ ಕುರಿತು ಮಾಹಿತಿ ನೀಡಿ, ಔಷಧೋಪಚಾರವಾಗಿ (ಪ್ರೋಪಿಕೊನಾಜೊಲ್ 25 % ಇಸಿ @1 ಮಿಲಿ ಪ್ರತಿ ಲೀಟರ್ ನೀರಿನಲ್ಲಿ ಬೆರಸಿ ಎಲೆ ಹಾಗೂ ಹಿಂಗಾರಕ್ಕೆ ಸಿಂಪರಣೆ ಮಾಡಬೇಕು ಹಾಗೆ 30 ದಿನಗಳ ನಂತರ ಕಾರ್ಬೆಂಡೇಜಿಮ್+ ಮ್ಯಾಂಕೋಜೆಬ್ 75 ಡಬ್ಲ್ಯೂ ಪಿ @ 2 ಗ್ರಾಂ ಪ್ರತಿ ಲೀಟರ್ ನೀರಿನಲ್ಲಿ ಬೆರಸಿ ಎಲೆ ಹಾಗೂ ಹಿಂಗಾರಕ್ಕೆ ಸಿಂಪರಣೆ ಮಾಡಬೇಕು ಎಂಬ) ಮಾಹಿತಿ ನೀಡಿದರು. ಡಾ.ಮಲ್ಲಿಕಾರ್ಜುನ್ ಎಲ್ ಮಣ್ಣು ವಿಜ್ಞಾನಿಗಳು ಮಣ್ಣು ಪರೀಕ್ಷೆ ಹಾಗೂ ಪೋಷಕಾಂಶಗಳ ನಿರ್ವಹಣೆ ಕುರಿತು ಹಾಗೂ ಡಾ. ರಶ್ಮಿ ಆರ್ ತೋಟಗಾರಿಕೆ ಬೆಳೆಗಳ ಕುರಿತು ಮಾಹಿತಿಯನ್ನು ನೀಡಿದರು. ಶ್ರೀ ಹರಿಪ್ರಸಾದ್ ರವರು ವಿಜ್ಞಾನಿಗಳನ್ನು ಹಾಗೂ ಕೃಷಿಕರನ್ನು ಸ್ವಾಗತಿಸಿದರು. ಈ ಕಾರ್ಯಕ್ರಮದಲ್ಲಿ ಒಟ್ಟು 22 ರೈತರು ಭಾಗವಹಿಸಿದ್ದರು ಹಾಗೂ ಆಯ್ದ 10 ರೈತರಿಗೆ ಕೃಷಿ ಪರಿಕಗಳನ್ನು ವಿತರಿಸಲಾಯಿತು.
ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾಧ್ಯಕ್ಷ, ಜಾನಪದ ಕಲಾವಿದ ಡಾ.ಗಣೇಶ್ ಗಂಗೊಳ್ಳಿ ಅವರು ಇಂದು ನಿಧನರಾಗಿದ್ದಾರೆ. ಕಳೆದ ರಾತ್ರಿ ಸಮಾರಂಭವೊಂದರಲ್ಲಿ…
ಕೆಎಸ್ಆರ್ಟಿಸಿ ಬಸ್ ಡಿಕ್ಕಿಯಾಗಿ ಮಹಿಳೆಯೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ತೆಕ್ಕಟ್ಟೆ ಪ್ರೆಸಿಡೆಂಟ್ ಕನ್ವೆನ್ಷನ್ ಹಾಲ್ ಮುಂಭಾಗ…
ಕನ್ನಡ ಚಿತ್ರರಂಗದ ಖ್ಯಾತ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕುಟುಂಬ ಸಮೇತರಾಗಿ ಆಗಮಿಸಿದ್ದಾರೆ. ರಿಷಬ್…
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು -ಸುಳ್ಯ ರಾಷ್ಟ್ರೀಯ ಹೆದ್ದಾರಿಯ ಕೌಡಿಚ್ಚಾರು ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಪಿಕಪ್ ವಾಹನ ಮೋರಿಗೆ…
ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಮಹಿಳೆಯೊಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಘಟನೆ ದಕ್ಷಿಣ…
ವಸತಿಗೃಹವೊಂದರ ಮುಂಭಾಗದಲ್ಲಿ ನಿಲ್ಲಿಸಲಾಗಿದ್ದ ಬೈಕ್ ಕಳವು ಮಾಡಿದ ಆರೋಪಿಗಳಿಬ್ಬರನ್ನು ಬಂಟ್ವಾಳ ನಗರ ಠಾಣಾ ಪೋಲೀಸರು ಬಂಧಿಸಿದ್ದಾರೆ. ಬಂಟ್ವಾಳ ಸಜೀಪ ಮುನ್ನೂರು…