ಜನ ಮನದ ನಾಡಿ ಮಿಡಿತ

Advertisement

ಬಿಎಡ್ ವಿದ್ಯಾರ್ಥಿ ಮೃತದೇಹ ಬಾವಿಯಲ್ಲಿ ಪತ್ತೆ!!


ಪೆರ್ಲ: ಬಿಎಡ್ ವ್ಯಾಸಂಗ ನಿರತನಾಗಿದ್ದ ವಿದ್ಯಾರ್ಥಿಯೋರ್ವ ಡೆತ್ ನೋಟ್ ಬರೆದಿಟ್ಟು ಮನೆ ಸಮೀಪದ ಬಾವಿಗೆ ಹಾರಿ ಆತ್ಮಹತ್ಯೆಗೈದ ಘಟನೆ ಎಣ್ಮಕಜೆ ಗ್ರಾಮ ಪಂಚಾಯತಿನ ಪಜ್ಜಾನ ಎಂಬಲ್ಲಿ ನಡೆದಿದೆ.
ಇಲ್ಲಿನ ಬಡಗಿ ವೃತ್ತಿ ನಿರ್ವಹಿಸುವ ಸಿಲ್ವೆಸ್ಟರ್ ಕ್ರಾಸ್ತಾ ಎಂಬವರ ಪುತ್ರ ಐವನ್ ಕ್ರಾಸ್ತ (23) ಎಂಬ ಯುವಕನ ಮೃತದೇಹ ನ.7ರಂದು ಸಂಜೆ ಮನೆ ಸಮೀಪದ ಬಾವಿಯಲ್ಲಿ ಪತ್ತೆಯಾಗಿದೆ.

ತೊಕ್ಕೊಟಿನ ಕಾಲೇಜುವೊಂದರಲ್ಲಿ ಬಿಎಡ್ ವಿದ್ಯಾರ್ಥಿಯಾಗಿರುವ ಈತ ಕಳೆದ ಕೆಲವು ದಿನಗಳಿಂದ ಖಿನ್ನತೆಗೊಳಗಿದ್ದಂತೆ ಕಂಡು ಬರುತ್ತಿದ್ದು ನ.6ರಂದು ರಾತ್ರಿ ಊಟ ಮಾಡಿ ಮಲಗಿದ್ದ. ಮರುದಿನ ನ.7ರಿಂದ ಬೆಳಗ್ಗೆ ಈತ ನಾಪತ್ತೆಯಾಗಿದ್ದು ಬೆಳಗ್ಗೆಯೇ ಎದ್ದು ಕಾಲೇಜಿಗೆ ಹೋಗಿರಬೇಕೆಂದು ಭಾವಿಸಿದ್ದರು. ಸಂಜೆ ಕಾಲೇಜು ಬಿಟ್ಟು ಬಾರದಿರುವಾಗಲೂ ಕಾಣದಿದ್ದು ಮನೆಯವರು ಹುಡುಕಾಡಿದಾಗ ಮನೆ ಸಮೀಪದ ಬಾವಿಯಲ್ಲಿ ಮೃತದೇಹ ಪತ್ತೆಯಾಗಿತ್ತು. ಬಳಿಕ ಈತ ಮಲಗುವ ಕೋಣೆಯೊಳಗೆ “ನನ್ನ ಸಾವಿಗೆ ನಾನೇ ಕಾರಣ” ಎಂದು ಬರೆದಿಟ್ಟ ಡೆತ್ ನೋಟ್ ಪತ್ತೆಯಾಗಿದೆ. ಬದಿಯಡ್ಕ ಪೋಲಿಸರು ಪ್ರಕರಣ ದಾಖಲಿಸಿದ್ದು ಮೃತದೇಹ ಕಾಸರಗೋಡು ಜನರಲ್ ಆಸ್ಪತ್ರೆಯಲ್ಲಿ ಪಂಚೆನಾಮೆ ನಡೆಸಿ ನ.8ಕ್ಕೆ (ಇಂದು) ಸಂಜೆ 4 ಗಂಟೆಗೆ ಮಣಿಯಂಪಾರೆ ಸಂತ ಲಾರೆನ್ಸ್ ಚರ್ಚಿನಲ್ಲಿ ಸಂಸ್ಕರಿಸಲಾಗುವುದೆಂದು ಮನೆಯವರು ತಿಳಿಸಿದ್ದಾರೆ. ಮೃತರು ತಂದೆ,ತಾಯಿ ನತಾಲಿಯ ಡಿಸೋಜ, ಸಹೋದರ ಮೇಲ್ವಿನ್ ಕ್ರಾಸ್ತ (ಶೇಣಿ ಶಾಲಾ ವಿದ್ಯಾರ್ಥಿ) ಎಂಬವರನ್ನಗಲಿದ್ದಾರೆ.

Leave a Reply

Your email address will not be published. Required fields are marked *

ಉಡುಪಿ: ಹೆಬ್ರಿಯಲ್ಲಿ ಅಂದರ್ ಬಾಹರ್ ಇಸ್ಪೀಟ್ ಜೂಜು ಅಡ್ಡೆಗೆ ಪೊಲೀಸರ ದಾಳಿ; 7 ಮಂದಿಯ ಬಂಧನ..!

ಬೆಳ್ತಂಗಡಿ: ಪಿಕಪ್ ವಾಹನ ಡಿಕ್ಕಿಯಾಗಿ ಸ್ಕೂಟರ್ ಸವಾರರಿಬ್ಬರು ಸಾ*ವು..!

ಉಡುಪಿ: ಗೋವನ್ನು ರಾಷ್ಟ್ರೀಯ ಪ್ರಾಣಿಯಾಗಿ ಘೋಷಿಸಿ: ಮುಸ್ಲಿಂ ಬಾಂಧವ್ಯ ವೇದಿಕೆ ಆಗ್ರಹ

ಕುಂದಾಪುರ: ಕಂಟೇನರ್ ಲಾರಿ ಡಿಕ್ಕಿಯಾಗಿ ಬೈಕ್ ಸವಾರ ಮೃತ್ಯು..!

ಬಂಟ್ವಾಳ: ಪುಂಜಾಲಕಟ್ಟೆ ಠಾಣಾ ವ್ಯಾಪ್ತಿಯ ಮನೆಯಲ್ಲಿ ನಡೆದ ಕಳವು ಪ್ರಕರಣದ ಆರೋಪಿಗಳು ಸರೆ..!

ಬೆಂಗಳೂರು: ಮುಖ್ಯಮಂತ್ರಿ ಡಿ. ಕೆ. ಶಿಯವರ ಅವರ ಮುಖ್ಯ ಸಲಹೆಗಾರರನ್ನಾಗಿ ಸುನಿಲ್ ಕಾನುಗೋಲು ನೇಮಕ…!

ಮಂಗಳೂರು: ಕಲ್ಲುಗುಡ್ಡೆ ನಿವಾಸಿ ಅರ್. ಪೈನ್ ಮೆಹತಾಬ್ (18) ನಾಪತ್ತೆ..!

ಮಂಗಳೂರು: ವಿಶ್ವ ಸೈಕಲ್ ದಿನಾಚರಣೆ-2026ರ ಅಂಗವಾಗಿ ‘ಸಂಡೇಸ್ ಆನ್ ಸೈಕಲ್’ ಸೈಕಲ್ ಜಾಥಾ ಆಯೋಜನೆ..!

ಮಂಗಳೂರು: ಅಂತರರಾಷ್ಟ್ರೀಯ ಬುಕರ್ ಪ್ರಶಸ್ತಿ ಪುರಸ್ಕೃತ ದೀಪಾ ಭಸ್ತಿ ಅವರ ವಿಶೇಷ ಉಪನ್ಯಾಸ ಕಾರ್ಯಕ್ರಮ..!

error: Content is protected !!