ಮೂಡುಬಿದಿರೆ:-ಇಲ್ಲಿನ ಪಾಲಡ್ಕದ ಸೈಂಟ್ ಇಗ್ನೇಷೀಯಸ್ ಪ್ರೌಢಶಾಲೆಯಲ್ಲಿ ನಡೆದ ತಾಲೂಕು ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಕಲ್ಲಬೆಟ್ಟುವಿನಲ್ಲಿರುವ ಎಕ್ಸಲೆಂಟ್ ಪ್ರೌಢಶಾಲೆಯು ಸಮಗ್ರ ಪ್ರಶಸ್ತಿಯನ್ನು ತನ್ನ ಮುಡಿಗೇರಿಸಿಕೊಂಡಿದೆ.
ವೈಯಕ್ತಿಕ ವಿಭಾಗದ ಸ್ಪರ್ಧೆಗಳಾದ ಜಾನಪದಗೀತೆ- ಮೌಲ್ಯ ವೈ ಆರ್ ಜೈನ್ ಇಂಗ್ಲೀಷ್ ಭಾಷಣ- ಸುಧಾಶ್ರೀ, ಸಂಸ್ಕçತ ಭಾಷಣ- ಆದಿತ್ಯ, ಸಂಸ್ಕçತ ಧಾರ್ಮಿಕ ಪಠಣ –ವೀಕ್ಷಾ ನಾಯಕ್ ಹಾಗೂ ಗುಂಪು ಸ್ಪರ್ಧೆಯಲ್ಲಿ ಕವ್ವಾಲಿ-ಅನಘಾ ಕಾಮತ್, ಕೃತಿಕಾ ಕಾಮತ್, ದಿವಿಜೇಶ್, ಸುಮಾ ಪೈ, ಅಮೂಲ್ಯ ಈ ಎಲ್ಲಾ ವಿದ್ಯಾರ್ಧಿಗಳು ಪ್ರಥಮ ಸ್ಥಾನ ಗಳಿಸಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಅಲ್ಲದೆ ಕನ್ನಡ ಭಾಷಣ – ಸಾನಿಧ್ಯ (ದ್ವಿತೀಯ ), ಹಿಂದಿ ಭಾಷಣ –ಅಲ್ಸಿಯಾ (ತೃತೀಯ) ಲಘು ಸಂಗೀತ –ಆಯುಷ್ (ದ್ವಿತೀಯ)ಚರ್ಚಾ ಸ್ಪರ್ಧೆ- ದೀಕ್ಷಾ (ದ್ವಿತೀಯ) ಗಜಲ್-ಆದೀಶ್(ತೃತೀಯ) ಕ್ವಿಜ್- ಪ್ರತೀಶ್ ಗೌಡ, ವಿನಯ್ ಶಂಕರ್ ದ್ವಿತೀಯ ಸ್ಥಾನಗಳನ್ನು ಪಡೆಯುವುದರ ಮೂಲಕ ಸಮಗ್ರ ಪ್ರಶಸ್ತಿಗೆ ಭಾಜನರಾಗಿದ್ದಾರೆ.
ವಿದ್ಯಾರ್ಥಿಗಳ ಈ ಸಾಧನೆಗೆ ಸಂಸ್ಥೆಯ ಅಧ್ಯಕ್ಷರಾದ ಯುವರಾಜ್ ಜೈನ್, ಕಾರ್ಯದರ್ಶಿಗಳಾದ ರಶ್ಮಿತಾ ಜೈನ್, ಮುಖ್ಯೋಪಾಧ್ಯಾಯರಾದ ಶಿವಪ್ರಸಾದ ಭಟ್ ಹಾಗೂ ಅಧ್ಯಾಪಕ ವೃಂದ ಅಭಿನಂದನೆ ಸಲ್ಲಿಸಿದ್ದಾರೆ.
ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಪೋಷಕ ಸದಸ್ಯರೂ, ಬಂಟ್ಸ್ ಅಸೋಸಿಯೇಷನ್ ನಾರ್ತ್ ಅಮೆರಿಕಾ (BANA) ಅಧ್ಯಕ್ಷರೂ ಆದ ಶ್ರೀ ಮಂಜುನಾಥ್…
ಉಡುಪಿ ತಾಲೂಕಿನಲ್ಲಿ ಕಡಲ್ಕೊರೆತದಿಂದ ಹಾನಿಗೊಳಗಾಗಿರುವ ಹೆಜಮಾಡಿ, ಪಡುಬಿದ್ರಿ, ಎರ್ಮಾಳು, ಕಾಪು, ಪೊಲಿಪು ಹಾಗೂ ಕಟಪಾಡಿ-ಮಟ್ಟು ಪ್ರದೇಶಗಳಿಗೆ ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ.…
ಮಳೆ ಸುರಿದರೆ ಸಾಕು, ಬಂಟ್ವಾಳ ತಾಲೂಕಿನ ಮಾಣಿ ಸಮೀಪದ ಪೆರಾಜೆ ಗ್ರಾಮದ ಜೋಗಿಬೆಟ್ಟು ರಸ್ತೆಯಲ್ಲಿ ಸಂಚಾರ ದುಸ್ತರವಾಗುತ್ತಿದೆ. ರಾಷ್ಟ್ರೀಯ ಹೆದ್ದಾರಿಗೆ…
ಭಾರತ ಮತ್ತು ಅಮೆರಿಕಾಗಳು ಅನೇಕ ಸಾಮಾನ್ಯ ಅಂಶಗಳನ್ನು ಹೊಂದಿವೆ. ಅಮೆರಿಕಾ ಅವಕಾಶಗಳ ನಗರ. ಇಲ್ಲಿಗೆ ವಲಸೆ ಬಂದು ವಾಸಿಸುತ್ತಿರುವ ಭಾರತೀಯರು…
ವಾಹನ ದಟ್ಟಣೆ ಹೆಚ್ಚುತ್ತಿರುವ ನಗರದಲ್ಲಿ ಸುಗಮ ಸಂಚಾರಕ್ಕೆ ಸ್ಮಾರ್ಟ್ ಸಿಟಿ ಯೋಜನೆಯಡಿ 181ಕ್ಕೂ ಅಧಿಕ ಎಐ ಸಿ.ಸಿ ಕ್ಯಾಮರಾಗಳನ್ನು ಅಳವಡಿಸಲಾಗಿದೆ.…
ರಾಯಿ ಗ್ರಾಮದ ಪಾಂಚಕೋಡಿ ನಿವಾಸಿ ಜೋಸೆಫ್ ಪಿಂಟೋ ಎಂಬವರ ಪುತ್ರ ಜೀವನ್ ಪಿಂಟೊ ಅವರ ಚಪ್ಪಲಿ ಮತ್ತು ಟಾರ್ಚ್ ಶನಿವಾರ…