ಮಂಗಳೂರು: ಕಳೆದ 15 ವರ್ಷದಿಂದ ಕೆರೆಕಾಡು ಶ್ರೀ ವಿನಾಯಕ ಯಕ್ಷಕಲಾ ಫೌಂಡೇಶನ್ನ ಮೂಲಕ ಕರಾವಳಿ ಜಿಲ್ಲೆ ಸಹಿತ ಬೆಂಗಳೂರು, ಮೈಸೂರು, ಮುಂಬೈಯಂತಹ ನಗರಗಳಲ್ಲಿ ಯಕ್ಷಗಾನ ಪ್ರದರ್ಶನ ಮಾಡುವ ಪ್ರಭುದ್ಧ ತಂಡವಾಗಿರುವ ಕೆರೆಕಾಡು ಶ್ರೀ ವಿನಾಯಕ ಯಕ್ಷಕಲಾ ತಂಡದ 15ನೇ ವರ್ಷದ ಶ್ರೀ ವಿನಾಯಕ ಯಕ್ಷಕಲೋತ್ಸವ-2023 ಸಂಭ್ರಮವು ನವೆಂಬರ್ 11ಕ್ಕೆ ನಡೆಯಲಿದೆ ಎಂದು ಫೌಂಡೇಶನ್ನ ಅಧ್ಯಕ್ಷ ಜಯಂತ್ ಅಮೀನ್ ಕೆರೆಕಾಡು ತಿಳಿಸಿದ್ದಾರೆ.
ಅವರು ಕಿನ್ನಿಗೋಳಿಯ ಸ್ವಾಗತ್ ಸಭಾಂಗಣದಲ್ಲಿ ನಡೆದ ಸುದ್ಧಿಗೋಷ್ಠಿಯಲ್ಲಿ ಮಾಹಿತಿ ನೀಡಿ, ಕಾರ್ಯಕ್ರಮವು ಎಸ್ಕೋಡಿಯ ಪದ್ಮಾವತಿ ಸಭಾಂಗಣದಲ್ಲಿ ಶಾಸಕ ಉಮಾನಾಥ ಕೋಟ್ಯಾನ್ ಅವರ ಉದ್ಘಾಟನೆಯೊಂದಿಗೆ ಗಣ್ಯರ ಉಪಸ್ಥಿತಿಯೊಂದಿಗೆ ಸಭಾ ಕಾರ್ಯಕ್ರಮ, ಪ್ರಶಸ್ತಿ ಪ್ರದಾನ, ಗೌರವಾರ್ಪಣೆ ಹಾಗೂ ಯಕ್ಷಗಾನ ಪ್ರದರ್ಶನದೊಂದಿಗೆ ನಡೆಯಲಿದೆ ಎಂದರು.
ಮೇಳದ ಸಂಚಾಲಕ ಅಭಿಜಿತ್ ಮಾಹಿತಿ ನೀಡಿ, ಶ್ರೀ ವಿನಾಯಕ ಮೇಳವು ಪ್ರಸ್ತುತ ವರ್ಷದಲ್ಲಿ 70ಕ್ಕೂ ಮಿಕ್ಕಿ ಯಕ್ಷಗಾನ ಪ್ರದರ್ಶನ ನೀಡಿದೆ. ಮುಂಬೈಯ 9ನೇ ವರ್ಷದ ಪ್ರವಾಸವು ಯಶಸ್ವಿಯಾಗಿ ಮುಗಿಸಿದ್ದೇವೆ, ಮುಂದಿನ ದಶಮಾನೋತ್ಸವ ಸಂಭ್ರಮದಲ್ಲಿ ಹತ್ತು ದಿನಗಳ ಕಾಲ ಯಕ್ಷಗಾನ ಪ್ರದರ್ಶನ ನೀಡಲಿದ್ದೇವೆ ಎಂದರು.
ಮೇಳದ ಯಕ್ಷಗುರು ಅಜಿತ್ ಕೆರೆಕಾಡು ಮಾತನಾಡಿ, ಯಕ್ಷಕಲೋತ್ಸವದಲ್ಲಿ ಜಿಲ್ಲೆಯ ಪ್ರಸಿದ್ಧ ಕಲಾವಿದರ ಸಹಿತ ಮೇಳದ 65ಕ್ಕೂ ಮಿಕ್ಕಿ ಕಲಾವಿದರು ಬಣ್ಣ ಹಚ್ಚಲಿದ್ದಾರೆ. ಹಿಮ್ಮೇಳದಲ್ಲಿಯೂ ಕಲಾವಿದರ ಸಂಗಮವಿದೆ. ಪೂರ್ವರಂಗ, ನಂದ ಮುಕುಂದ, ಕರುಣಾಳು ರಾಘವ, ಸಂಭವಾಮಿ ಯುಗೇ ಯುಗೇ, ವಾಸುದೇವ ಸರ್ವಂ ಪ್ರಸಂಗ ಪ್ರದರ್ಶನಗೊಳ್ಳಲಿದೆ ಎಂದರು.
ಸುದ್ಧಿಗೋಷ್ಠಿಯಲ್ಲಿ ಉಪಾಧ್ಯಕ್ಷೆ ಉಷಾ ನರೇಂದ್ರ ಕೆರೆಕಾಡು, ಕಾರ್ಯದರ್ಶಿ ದುರ್ಗಾಪ್ರಸಾದ್, ಸದಸ್ಯರಾದ ಶ್ರೇಯಸ್ ರಾವ್ ಉಪಸ್ಥಿತರಿದ್ದರು.
ಬೇಕಲ ಕೋಟೆ ಸಮೀಪದ ಪಳ್ಳಿಕರೆ ಕಡಲತೀರದಲ್ಲಿ ಭಾನುವಾರ ಸಂಜೆ ಸಂಭವಿಸಿದ ದುರ್ಘಟನೆಯಲ್ಲಿ ಇಬ್ಬರು ಕಾಲೇಜು ವಿದ್ಯಾರ್ಥಿಗಳು ಸಮುದ್ರದಲ್ಲಿ ಕೊಚ್ಚಿಹೋಗಿದ್ದು, ಅವರಿಗಾಗಿ…
ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ ಹೊಡೆದ ಘಟನೆ ಸುಬ್ರಹ್ಮಣ್ಯ ಸಮೀಪದ ಕುಲ್ಕುಂದ ಎಂಬಲ್ಲಿ ನಡೆದಿದೆ. ರಾತ್ರಿ ವೇಳೆ…
ಕಡಬ ತಾಲೂಕು ಕೊಯಿಲ ಮತ್ತು ರಾಮಕುಂಜ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕ ರಸ್ತೆಯುದ್ದಕ್ಕೂ ಉಂಟಾಗಿರುವ ಹೊಂಡಗಳಿಗೆ ಸ್ಥಳಿಯರು ಶ್ರಮ…
ರಾಷ್ಟ್ರೀಯ ಹೆದ್ದಾರಿಯ ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದಲ್ಲಿ ಸರ್ವೀಸ್ ರಸ್ತೆ ಹೊಂಡಗುಂಡಿಗಳಿಂದ ತುಂಬಿ ವಾಹನ ಸಂಚಾರಕ್ಕೆ ತೊಂದರೆಯಾಗುತ್ತಿದೆ ಎಂದು ಸ್ಥಳೀಯರು…
ಮಾದಕ ದ್ರವ್ಯ ಸಾಗಾಟ ಹಾಗೂ ಮಾರಾಟ ಪ್ರಕರಣಗಳಲ್ಲಿ ಭಾಗಿಯಾಗಿರುವ ಆರೋಪದಡಿ ಮಣಿಪಾಲ ಪೊಲೀಸ್ ಠಾಣೆ ವ್ಯಾಪ್ತಿಯ 80 ಬಡಗಬೆಟ್ಟು ಗ್ರಾಮದ…
ಮಂಗಳೂರು ನಗರದ ಪದವು ಗ್ರಾಮದ ಜೋಡುಕಟ್ಟೆ ಮರೋಳಿ ಹತ್ತಿರ ಜೂನ್ 11 ರಂದು ಅಕ್ರಮವಾಗಿ ಆನೆದಂತಗಳನ್ನು ಮಾರಾಟಕ್ಕೆ ಯತ್ನಿಸುತಿದ್ದವರನ್ನು ಬಂಧಿಸಲಾಗಿದೆ.…