ದೀಪಾವಳಿಯ ಪ್ರಯುಕ್ತ ಪ್ರತೀ ವರ್ಷದಂತೆ ಈ ಬಾರಿಯೂ ರೈ ಎಸ್ಟೇಟ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಪುತ್ತೂರು ತಾಲೂಕು ಕ್ರೀಡಾಂಗಣದಲ್ಲಿ ನ.೧೩ ರಂದು ಬೆಳಿಗ್ಗೆ6 ಗಂಟೆಯಿ0ದ ವಸ್ತ್ರ ದಾ ಕಾರ್ಯಕ್ರಮ ಹಾಗೂ ಅನ್ನಸಂತರ್ಪಣೆ ನಡೆಯಲಿದೆ ಎಂದು ಟ್ರಸ್ಟ್ ಪ್ರವರ್ತಕ ಹಾಗೂ ಶಾಸಕ ಅಶೋಕ್ ಕುಮಾರ್ ರೈ ಹೇಳಿದ್ದಾರೆ.
ಇವರು ಶಾಸಕರ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಸುಮಾರು ೧.೭೦ ಕೋಟಿ ವೆಚ್ಚದಲ್ಲಿ ಈ ವಸ್ತçದಾನ ಹಾಗೂ ಅನ್ನಸಂತರ್ಪಣೆ ಕಾರ್ಯ ನಡೆಯಲಿದ್ದು, ಬೆಳಿಗ್ಗೆ ೧೧-೩೦ಕ್ಕೆ ನಡೆಯುವ ಸಭಾ ಕಾರ್ಯಕ್ರಮದಲ್ಲಿ ಒಡಿಯೂರು ಗುರುದೇವಾನಂದ ಸ್ವಾಮೀಜಿ, ಜಿಲ್ಲೆಯ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್, ಜಿಲ್ಲಾ ಕಾಂಗ್ರೇಸ್ ಅಧ್ಯಕ್ಷರಾದ ಹರೀಶ್ ಕುಮಾರ್, ವಿಧಾನಪರಿಷತ್ ಸದಸ್ಯ ಮಂಜುನಾಥ ಭಂಡಾರಿ, ವಿವಿಧ ಧರ್ಮ- ಸಮುದಾಯಗಳ ಮುಖಂಡರು ಭಾಗಿಯಾಗಲಿದ್ದಾರೆ. ಕಳೆದ ವರ್ಷ ೩೫ ಸಾವಿರ ಮಂದಿಗೆ ವಸ್ತçದಾನ ಮಾಡಲಾಗಿದ್ದು, ಈ ಬಾರಿ ಸುಮಾರು ೫೦ ಸಾವಿರ ಮಂದಿಗೆ ವಸ್ತçದಾನ ಮಾಡಲಾಗುವುದು. ಪುತ್ತೂರು ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಮಂದಿಗೆ ಆದ್ಯತೆ ನೀಡಲಾಗುವುದು. ಬೇರೆ ಕಡೆಯಿಂದ ಬರುವ ಮಹಿಳೆಯರಿಗೆ ಸೀರೆ ಹಾಗೂ ಪುರುಷರಿಗೆ ಮತ್ತು ಮಕ್ಕಳಿಗೆ ಬೆಡ್ ಶೀಟ್ ನೀಡಲಾಗುವುದು ಎಂದು ಮಾಹಿತಿ ನೀಡಿದ್ರು.
ಇರಾನ್ನ ನೂತನ ಸುಪ್ರೀಂ ಲೀಡರ್ ಮೊಜ್ತಬಾ ಖಮೇನಿ ಅವರ ಆರೋಗ್ಯ ಹಾಗೂ ಅವರು ಎಲ್ಲಿದ್ದಾರೆ ಎಂಬ ಕುರಿತು ಜಾಗತಿಕ ಮಟ್ಟದಲ್ಲಿ…
ಥೈಲ್ಯಾಂಡ್ನ ರಾಜಧಾನಿ ಬ್ಯಾಂಕಾಕ್ ಸಮೀಪದ ಶಾಲೆಯೊಂದರಲ್ಲಿ 9ನೇ ತರಗತಿ ವಿದ್ಯಾರ್ಥಿಯೊಬ್ಬ ನಡೆಸಿದ ಗುಂಡಿನ ದಾಳಿಯಲ್ಲಿ ಶಿಕ್ಷಕರೊಬ್ಬರು ಮೃತಪಟ್ಟಿದ್ದು, ಕನಿಷ್ಠ 15…
ಮೂಡಬಿದ್ರೆಯ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಆಯೋಜಿಸಿರುವ ಆಳ್ವಾಸ್ ಪ್ರಗತಿ-2026 ಬೃಹತ್ ಉದ್ಯೋಗ ಮೇಳಕ್ಕೆ ತೆರಳಲು ಬಂಟ್ವಾಳದಿಂದ ಶುಕ್ರವಾರ ಎರಡು ಉಚಿತ…
ರಾಷ್ಟ್ರೀಯ ಹೆದ್ದಾರಿ 75ರ ಸುರಿಕುಮೇರು ಸಮೀಪದ ಹಿಂದೂಸ್ತಾನ್ ಪೆಟ್ರೋಲ್ ಬಂಕ್ ಬಳಿ ನಡೆದ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ಆರು…
ಬಿ.ಸಿ.ರೋಡ್ನ ಎನ್.ಜಿ. ಸರ್ಕಲ್ನಲ್ಲಿ ಗುರುವಾರ ಸಂಜೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಇಬ್ಬರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.…
ಕಳೆದ ಒಂದು ವಾರದಿಂದ ನ್ಯುಮೋನಿಯಾ ಜ್ವರದಿಂದ ಬಳಲುತ್ತಿದ್ದ ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವ ದುಃಖದ ಘಟನೆ ನಡೆದಿದೆ. ಮೃತ ವಿದ್ಯಾರ್ಥಿನಿಯನ್ನು…