ಸುರಿದ ಬಾರಿ ಮಳೆಗೆ ತಾಲೂಕಿನ ಅಮ್ಟಾಡಿ ಗ್ರಾಮದ ನಲ್ಕೆಮಾರ್ ಎಂಬಲ್ಲಿರುವ ಗೂಡಂಗಡಿ ಮೇಲೆ ಮರ ಬಿದ್ದು ಹಾನಿಯಾಗಿದೆ. ಬಸ್ ನಿಲ್ದಾಣದ ಬಳಿಯಿರುವ ಸುಂದರ ಎಂಬವರ ಗೂಡಂಗಡಿ ಮೇಲೆ ಮರ ಬಿದ್ದು, ಗೂಡಂಗಡಿ ಸಂಪೂರ್ಣ ಜಖಂಗೊAಡಿದೆ. ಜೊತೆಗೆ ಬಸ್ ತಂಗುದಾನದ ಮೇಲೆ ಕೂಡ ಹಾನಿಯಾಗಿದ್ದು, ಬಸ್ ನಿಲ್ದಾಣದ ಹಂಚು ಪುಡಿಯಾಗಿದೆ.

ಅದೃಷ್ಟವಶಾತ್ ಆಗಿದ್ದರಿಂದ ಬಸ್ ನಿಲ್ದಾಣದಲ್ಲಿ ಪ್ರಯಾಣಿಕರು ಯಾರು ಇರದಿದ್ದ ಕಾರಣದಿಂದಾಗಿ ಯಾವುದೇ ಅಪಾಯ ಸಂಭವಿಸಿಲ್ಲ. ಅಮ್ಟಾಡಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ವಿಜಯ್ ಕುಮಾರ್ ಹಾಗೂ ಸ್ಥಳೀಯರ ನೆರವಿನಿಂದ ಕೂಡಲೇ ಮರವನ್ನು ಕಡಿದು ತೆರವುಗೊಳಿಸಿದ್ದಾರೆ.



