ಬಂಟ್ವಾಳ: ಜಲ್ಲಿ ಸಾಗಿಸುವ ಬೃಹತ್ ಗಾತ್ರದ ಲಾರಿಯೊಂದು ಕಾರಿಗೆ ಡಿಕ್ಕಿಯಾಗಿ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ಅದೃಷ್ಟವಶಾತ್ ಕಾರು ಚಾಲಕ ಅಪಾಯದಿಂದ ಪಾರಾದ ಘಟನೆ ಇಂದು ಬೆಳಿಗ್ಗೆ ಬಂಟ್ವಾಳ ಸಮೀಪದ ಲೊರೆಟ್ಟೋ ಎಂಬಲ್ಲಿ ನಡೆದಿದೆ.
ಮೈಸೂರು ಮೂಲದ ಕೃಷ್ಣ ಅರಸ ಎಂಬವರ ಕಾರಿಗೆ ಕೆ.ಎನ್.ಆರ್.ಸಿ.ಕಂಪೆನಿಯ ಲಾರಿ ಡಿಕ್ಕಿಯಾಗಿ
ಕೃಷ್ಣ ಅರಸ ಅವರು ಮೈಸೂರಿನಿಂದ ಬಂಟ್ವಾಳ ಕಡೆಯಿಂದ ಮೂಡಬಿದಿರೆ ಅಳ್ವಾಸ್ ಕಾಲೇಜಿಗೆ ತೆರಳುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ.ಕೃಷ್ಣ ಅರಸ ಅವರ ಮಗಳು ಮೂಡಬಿದಿರೆಯ ಅಳ್ವಾಸ್ ಕಾಲೇಜಿನಲ್ಲಿ ಶಿಕ್ಷಣ ಪಡೆಯುತ್ತಿದ್ದ ದೀಪಾವಳಿ ರಜೆ ನಿಮಿತ್ತ ಊರಿಗೆ ಕರೆದುಕೊಂಡು ಹೋಗುವ ಉದ್ದೇಶದಿಂದ ಮೂಡಬಿದಿರೆಯ ಕಡೆಗೆ ತೆರಳುವ ವೇಳೆ ಅತೀ ವೇಗ ಹಾಗೂ ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಬರುತ್ತಿದ್ದ ಕೆ.ಎನ್.ಆರ್.ಸಿ.ಕಂಪೆನಿಯ ಲಾರಿ ಎದುರಿನಿಂದ ಡಿಕ್ಕಿ ಹೊಡೆದಿದೆ ಡಿಕ್ಕಿಯ ರಭಸಕ್ಕೆ ಕಾರಿನ ಮುಂಭಾಗ ಸಂಪೂರ್ಣ ಜಖಂಗೊಂಡಿದೆ.ಆದರೆ ಅದೃಷ್ಟವಶಾತ್ ಕಾರು ಚಾಲಕ ಕೃಷ್ಣ ಅವರಿಗೆ ಯಾವುದೇ ಅಪಾಯವಿಲ್ಲದೆ ಪಾರಾಗಿದ್ದಾರೆ.
ಸ್ಥಳದಲ್ಲಿ ಹಠಾತ್ ಪ್ರತಿಭಟನೆ
ಬಿಸಿರೋಡನಿಂದ ಅಡ್ಡಹೊಳೆವರೆಗೆ ರಾಷ್ಟ್ರೀಯ ಹೆದ್ದಾರಿ ಚತುಷ್ಪತ ಕಾಮಗಾರಿ ಗುತ್ತಿಗೆ ವಹಿಸಿಕೊಂಡ ಕೆ.ಎನ್.ಆರ್.ಸಿ.ಕಂಪೆನಿಯವರು ಕಾಮಗಾರಿ ನಡೆಸಲು ಜಲ್ಲಿಯನ್ನು ಕುಪ್ಪೆಪದವು ಎಂಬಲ್ಲಿರುವ ಜಲ್ಲಿ ಪ್ಲ್ಯಾಂಟ್ ನಿಂದ ಬೃಹತ್ ಗಾತ್ರದ ಲಾರಿಗಳ ಮೂಲಕ ತರುತ್ತಾರೆ. ಆದರೆ ಕಂಪೆನಿಯ ಲಾರಿಯ ಚಾಲಕರು ಎ.ಸಿ.ಹಾಕಿಕೊಂಡು ಕಿವಿಗೊಂದು ಇಯರ್ ಪೋನ್ ಸಿಕ್ಕಿಸಿ ಹಾಡು ಕೇಳಿಕೊಂಡು ಅಥವಾ ಮೊಬೈಲ್ ನಲ್ಲಿ ಹರಟೆ ಹೊಡೆಯುತ್ತಾ ರಸ್ತೆಯಲ್ಲಿ ಬರುವ ಇತರ ವಾಹನಗಳ ಬಗ್ಗೆ ಗಮನವಿಲ್ಲದೆ ಅತೀ ವೇಗ ಮತ್ತು ಅಜಾಗರೂಕತೆಯಿಂದ ಬರುತ್ತಾರೆ ಎಂಬುದು ಸ್ಥಳೀಯರ ವಾದ. ಹಾಗಾಗಿ ಕಳೆದ ಎರಡು ವರ್ಷಗಳಿಂದ ಕಂಪೆನಿಯ ಲಾರಿಗಳು ಡಿಕ್ಕಿಯಾಗಿ ಅನೇಕರಿಗೆ ಗಾಯವಾಗಿದೆ ಎಂದು ಅರೋಪ ಮಾಡಿದ್ದಾರೆ.
ಕಂಪೆನಿಯ ಘನಗಾತ್ರದ ವಾಹನಗಳ ಸಂಚಾರದಿಂದ ಪ್ರಾಣಹಾನಿಯ ಜೊತೆಗೆ ಉತ್ತಮವಾಗಿದ್ದ ಡಾಮರು ರಸ್ತೆಯಲ್ಲಿ ಅಲ್ಲಲ್ಲಿ ಹೊಂಡಗಳು ಬಿದ್ದಿವೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಇಂದು ಅಪಘಾತ ನಡೆದ ಜಾಗದಲ್ಲಿ ಶಾಲೆಯಿದ್ದು, ಮಕ್ಕಳು ಶಾಲೆಗೆ ಬರುವ ಸಮಯದಲ್ಲಿ ಅತೀ ವೇಗ ಮತ್ತು ಅಜಾಗರೂಕತೆಯ ಚಾಲನೆ ಮಾಡಿದರೆ ಅನಾಹುತಗಳು ನಡೆಯಬಹುದು, ಎಂದು ಇಲ್ಲಿ ಸೇರಿದ ಜನರು ಅರೋಪ ಮಾಡಿದ್ದಾರೆ. ಕಂಪೆನಿ ವಿರುದ್ದ ಪ್ರಕರಣ ದಾಖಲಿಸಿ ಮತ್ತು ಕಂಪೆನಿ ಲಾರಿಗಳಿಗೆ ಸ್ಪೀಡ್ ಕಂಟ್ರೋಲ್ ಕಿಟ್ ಹಾಕಿ ಎಂದು ಸಾರ್ವಜನಿಕ ರು ಒತ್ತಾಯ ಮಾಡಿದ್ದಾರೆ.
ಕೆಲ ಹೊತ್ತು ಸ್ಥಳದಲ್ಲಿ ಬಿಗುವಿನ ವಾತಾವರಣ ಉಂಟಾಗಿತ್ತು. ಕಂಪೆನಿ ಮತ್ತು ಲಾರಿ ಚಾಲಕರ ವಿರುದ್ದ ಸಾರ್ವಜನಿಕರು ರೊಚ್ಚಿಗೆದ್ದ ಘಟನೆ ನಡೆಯಿತು. ಅಮಾರ್ಗದಲ್ಲಿ ಬರುವ ಕಂಪೆನಿಯ ಎಲ್ಲಾ ಲಾರಿಗಳನನ್ನು ನಿಲ್ಲಿಸಿ ಆಕ್ರೋಶ ವ್ಯಕ್ತಪಡಿಸಿದರು. ಘಟನೆಯಿಂದ ಸ್ಥಳದಲ್ಲಿ ಜಮಾಯಿಸಿದ್ದ ಜನರನ್ನು ಪೋಲಿಸರು ಚದುರಿಸಿದರು. ಸ್ಥಳಕ್ಕೆ ಟ್ರಾಫಿಕ್ ಎಸ್.ಐ. ಸುತೇಶ್, ಮತ್ತು ಸಂಜೀವ ಹಾಗೂ ಎಎಸ್.ಐ ಸುರೇಶ್ ಪಡಾರ್, ಸಿಬ್ಬಂದಿಗಳಾದ ರಾಜು, ವಿವೇಕ್, ಸಂತೋಷ ಬೇಟಿ ನೀಡಿ ಪರಿಸ್ಥಿತಿಯನ್ನು ತಿಳಿಗೊಳಿಸಿದರು.
ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾಧ್ಯಕ್ಷ, ಜಾನಪದ ಕಲಾವಿದ ಡಾ.ಗಣೇಶ್ ಗಂಗೊಳ್ಳಿ ಅವರು ಇಂದು ನಿಧನರಾಗಿದ್ದಾರೆ. ಕಳೆದ ರಾತ್ರಿ ಸಮಾರಂಭವೊಂದರಲ್ಲಿ…
ಕೆಎಸ್ಆರ್ಟಿಸಿ ಬಸ್ ಡಿಕ್ಕಿಯಾಗಿ ಮಹಿಳೆಯೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ತೆಕ್ಕಟ್ಟೆ ಪ್ರೆಸಿಡೆಂಟ್ ಕನ್ವೆನ್ಷನ್ ಹಾಲ್ ಮುಂಭಾಗ…
ಕನ್ನಡ ಚಿತ್ರರಂಗದ ಖ್ಯಾತ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕುಟುಂಬ ಸಮೇತರಾಗಿ ಆಗಮಿಸಿದ್ದಾರೆ. ರಿಷಬ್…
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು -ಸುಳ್ಯ ರಾಷ್ಟ್ರೀಯ ಹೆದ್ದಾರಿಯ ಕೌಡಿಚ್ಚಾರು ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಪಿಕಪ್ ವಾಹನ ಮೋರಿಗೆ…
ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಮಹಿಳೆಯೊಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಘಟನೆ ದಕ್ಷಿಣ…
ವಸತಿಗೃಹವೊಂದರ ಮುಂಭಾಗದಲ್ಲಿ ನಿಲ್ಲಿಸಲಾಗಿದ್ದ ಬೈಕ್ ಕಳವು ಮಾಡಿದ ಆರೋಪಿಗಳಿಬ್ಬರನ್ನು ಬಂಟ್ವಾಳ ನಗರ ಠಾಣಾ ಪೋಲೀಸರು ಬಂಧಿಸಿದ್ದಾರೆ. ಬಂಟ್ವಾಳ ಸಜೀಪ ಮುನ್ನೂರು…