ಇತರೆ

ಬೃಹತ್ ಗಾತ್ರದ ಲಾರಿಯೊಂದು ಕಾರಿಗೆ ಡಿಕ್ಕಿ..!; ಬಂಟ್ವಾಳ ಸಮೀಪದ ಲೊರೆಟ್ಟೋ ಎಂಬಲ್ಲಿ ಘಟನೆ

ಬಂಟ್ವಾಳ: ಜಲ್ಲಿ ಸಾಗಿಸುವ ಬೃಹತ್ ಗಾತ್ರದ ಲಾರಿಯೊಂದು ಕಾರಿಗೆ ಡಿಕ್ಕಿಯಾಗಿ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ಅದೃಷ್ಟವಶಾತ್ ಕಾರು ಚಾಲಕ ಅಪಾಯದಿಂದ ಪಾರಾದ ಘಟನೆ ಇಂದು ಬೆಳಿಗ್ಗೆ ಬಂಟ್ವಾಳ ಸಮೀಪದ ಲೊರೆಟ್ಟೋ ಎಂಬಲ್ಲಿ ನಡೆದಿದೆ.


ಮೈಸೂರು ಮೂಲದ ಕೃಷ್ಣ ಅರಸ ಎಂಬವರ ಕಾರಿಗೆ ಕೆ.ಎನ್.ಆರ್.ಸಿ.ಕಂಪೆನಿಯ ಲಾರಿ ಡಿಕ್ಕಿಯಾಗಿ
ಕೃಷ್ಣ ಅರಸ ಅವರು ಮೈಸೂರಿನಿಂದ ಬಂಟ್ವಾಳ ಕಡೆಯಿಂದ ಮೂಡಬಿದಿರೆ ಅಳ್ವಾಸ್ ಕಾಲೇಜಿಗೆ ತೆರಳುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ.ಕೃಷ್ಣ ಅರಸ ಅವರ ಮಗಳು ಮೂಡಬಿದಿರೆಯ ಅಳ್ವಾಸ್ ಕಾಲೇಜಿನಲ್ಲಿ ಶಿಕ್ಷಣ ಪಡೆಯುತ್ತಿದ್ದ ದೀಪಾವಳಿ ರಜೆ ನಿಮಿತ್ತ ಊರಿಗೆ ಕರೆದುಕೊಂಡು ಹೋಗುವ ಉದ್ದೇಶದಿಂದ ಮೂಡಬಿದಿರೆಯ ಕಡೆಗೆ ತೆರಳುವ ವೇಳೆ ಅತೀ ವೇಗ ಹಾಗೂ ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಬರುತ್ತಿದ್ದ ಕೆ.ಎನ್.ಆರ್.ಸಿ.ಕಂಪೆನಿಯ ಲಾರಿ ಎದುರಿನಿಂದ ಡಿಕ್ಕಿ ಹೊಡೆದಿದೆ ಡಿಕ್ಕಿಯ ರಭಸಕ್ಕೆ ಕಾರಿನ ಮುಂಭಾಗ ಸಂಪೂರ್ಣ ಜಖಂಗೊಂಡಿದೆ.ಆದರೆ ಅದೃಷ್ಟವಶಾತ್ ಕಾರು ಚಾಲಕ ಕೃಷ್ಣ ಅವರಿಗೆ ಯಾವುದೇ ಅಪಾಯವಿಲ್ಲದೆ ಪಾರಾಗಿದ್ದಾರೆ.


‌ ಸ್ಥಳದಲ್ಲಿ ಹಠಾತ್ ಪ್ರತಿಭಟನೆ
ಬಿಸಿರೋಡನಿಂದ ಅಡ್ಡಹೊಳೆವರೆಗೆ ರಾಷ್ಟ್ರೀಯ ಹೆದ್ದಾರಿ ಚತುಷ್ಪತ ಕಾಮಗಾರಿ ಗುತ್ತಿಗೆ ವಹಿಸಿಕೊಂಡ ಕೆ.ಎನ್.ಆರ್.ಸಿ.ಕಂಪೆನಿಯವರು ಕಾಮಗಾರಿ ನಡೆಸಲು ಜಲ್ಲಿಯನ್ನು ಕುಪ್ಪೆಪದವು ಎಂಬಲ್ಲಿರುವ ಜಲ್ಲಿ ಪ್ಲ್ಯಾಂಟ್ ನಿಂದ ಬೃಹತ್ ಗಾತ್ರದ ಲಾರಿಗಳ ಮೂಲಕ ತರುತ್ತಾರೆ. ಆದರೆ ಕಂಪೆನಿಯ ಲಾರಿಯ ಚಾಲಕರು ಎ.ಸಿ.ಹಾಕಿಕೊಂಡು ಕಿವಿಗೊಂದು ಇಯರ್ ಪೋನ್ ಸಿಕ್ಕಿಸಿ ಹಾಡು ಕೇಳಿಕೊಂಡು ಅಥವಾ ಮೊಬೈಲ್ ನಲ್ಲಿ ಹರಟೆ ಹೊಡೆಯುತ್ತಾ ರಸ್ತೆಯಲ್ಲಿ ಬರುವ ಇತರ ವಾಹನಗಳ ಬಗ್ಗೆ ಗಮನವಿಲ್ಲದೆ ಅತೀ ವೇಗ ಮತ್ತು ಅಜಾಗರೂಕತೆಯಿಂದ ಬರುತ್ತಾರೆ ಎಂಬುದು ಸ್ಥಳೀಯರ ವಾದ. ಹಾಗಾಗಿ ಕಳೆದ ಎರಡು ವರ್ಷಗಳಿಂದ ಕಂಪೆನಿಯ ಲಾರಿಗಳು ಡಿಕ್ಕಿಯಾಗಿ ಅನೇಕರಿಗೆ ಗಾಯವಾಗಿದೆ ಎಂದು ಅರೋಪ ಮಾಡಿದ್ದಾರೆ.


‌‌ ಕಂಪೆನಿಯ ಘನಗಾತ್ರದ ವಾಹನಗಳ ಸಂಚಾರದಿಂದ ಪ್ರಾಣಹಾನಿಯ ಜೊತೆಗೆ ಉತ್ತಮವಾಗಿದ್ದ ಡಾಮರು ರಸ್ತೆಯಲ್ಲಿ ಅಲ್ಲಲ್ಲಿ ಹೊಂಡಗಳು ಬಿದ್ದಿವೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಇಂದು ಅಪಘಾತ ನಡೆದ ಜಾಗದಲ್ಲಿ ಶಾಲೆಯಿದ್ದು, ಮಕ್ಕಳು ಶಾಲೆಗೆ ಬರುವ ಸಮಯದಲ್ಲಿ ಅತೀ ವೇಗ ಮತ್ತು ಅಜಾಗರೂಕತೆಯ ಚಾಲನೆ ಮಾಡಿದರೆ ಅನಾಹುತಗಳು ನಡೆಯಬಹುದು, ಎಂದು ಇಲ್ಲಿ ಸೇರಿದ ಜನರು ಅರೋಪ ಮಾಡಿದ್ದಾರೆ. ಕಂಪೆನಿ ವಿರುದ್ದ ಪ್ರಕರಣ ದಾಖಲಿಸಿ ಮತ್ತು ಕಂಪೆನಿ ಲಾರಿಗಳಿಗೆ ಸ್ಪೀಡ್ ಕಂಟ್ರೋಲ್ ಕಿಟ್ ಹಾಕಿ ಎಂದು ಸಾರ್ವಜನಿಕ ರು ಒತ್ತಾಯ ಮಾಡಿದ್ದಾರೆ.

ಕೆಲ ಹೊತ್ತು ಸ್ಥಳದಲ್ಲಿ ಬಿಗುವಿನ ವಾತಾವರಣ ಉಂಟಾಗಿತ್ತು. ಕಂಪೆನಿ ಮತ್ತು ಲಾರಿ ಚಾಲಕರ ವಿರುದ್ದ ಸಾರ್ವಜನಿಕರು ರೊಚ್ಚಿಗೆದ್ದ ಘಟನೆ ನಡೆಯಿತು. ಅಮಾರ್ಗದಲ್ಲಿ ಬರುವ ಕಂಪೆನಿಯ ಎಲ್ಲಾ ಲಾರಿಗಳನನ್ನು ನಿಲ್ಲಿಸಿ ಆಕ್ರೋಶ ವ್ಯಕ್ತಪಡಿಸಿದರು. ಘಟನೆಯಿಂದ ಸ್ಥಳದಲ್ಲಿ ಜಮಾಯಿಸಿದ್ದ ಜನರನ್ನು ಪೋಲಿಸರು ಚದುರಿಸಿದರು. ಸ್ಥಳಕ್ಕೆ ಟ್ರಾಫಿಕ್ ಎಸ್.ಐ. ಸುತೇಶ್, ಮತ್ತು ಸಂಜೀವ ಹಾಗೂ ಎಎಸ್.ಐ ಸುರೇಶ್ ಪಡಾರ್, ಸಿಬ್ಬಂದಿಗಳಾದ ರಾಜು, ವಿವೇಕ್, ಸಂತೋಷ ಬೇಟಿ ನೀಡಿ ಪರಿಸ್ಥಿತಿಯನ್ನು ತಿಳಿಗೊಳಿಸಿದರು.

ಅಭಿಮತ ಟಿವಿ

Abhimatha TV is a trusted channel renowned for its dedication to honest journalism and its unwavering commitment to showcasing the rich culture, heritage, and traditions of Tulunadu. With a focus on delivering unbiased news and promoting the region's vibrant art forms, rituals, and cultural events, Abhimatha TV has become a beacon of authenticity and pride for the community. Established in 2018, the channel was founded by Mamatha P. Shetty (Managing Partner) and Kanyana Sadhashiva Shetty (Chief Promoter) with a mission to provide truthful reporting and celebrate the essence of our heritage.

Recent Posts

ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..!

ಹೊಸದಿಲ್ಲಿ: ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..! ಪ್ರಖ್ಯಾತ ಭಾಗವತ, ಸಂಘಟಕ ಪಟ್ಲ ಸತೀಶ್ ಶೆಟ್ಟಿ…

23 hours ago

ವ್ಯಕ್ತಿಯೊಬ್ಬ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ…!

ಮಣಿಪಾಲ: ಸರಳೆಬೆಟ್ಟು ನಗರಸಭಾ ಸದಸ್ಯೆಯ ಸಹೋದರ ಆತ್ಮಹತ್ಯೆ ವೈಯಕ್ತಿಕ ಕಾರಣದಿಂದ ಮನನೊಂದ ವ್ಯಕ್ತಿಯೊಬ್ಬರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ…

24 hours ago

ವಿ ಡಿ ಸತೀಶನ್ ಅವರನ್ನು ಕಾಸರಗೋಡಿನಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು…!

ಮಲೆಯಾಳ ಕಡ್ಡಾಯ ಮಸೂದೆ ವಿರೋಧಿ ಸಮಿತಿ ವತಿಯಿಂದ ಕೇರಳದ ವಿರೋಧ ಪಕ್ಷದ ನಾಯಕ ಸನ್ಮಾನ್ಯ ವಿ ಡಿ ಸತೀಶನ್ ಅವರನ್ನು…

3 days ago

ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ನಿಧನ…!

  ಉಡುಪಿ : ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ಅವರು ಅಲ್ಪಕಾಲದ ಅಸೌಖ್ಯದಿಂದ…

3 days ago

ಬಂಟ್ವಾಳ: ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್ (65) ಹೃದಯಾಘಾತದಿಂದ ನಿಧನ!

ಮೂಲತಃ ಪುತ್ತೂರು ಬೆಂದ್ರುತೀರ್ಥ ನಿವಾಸಿ, ಪ್ರಸಕ್ತ ರಾಯಿ ಸಮೀಪದ ಮಾಬೆಟ್ಟು ಎಂಬಲ್ಲಿ ವಾಸವಾಗಿದ್ದ ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್…

3 days ago

ಮಂಗಳೂರು: ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ!

ದೆಹಲಿ ಕರ್ನಾಟಕ ಸಂಘದಿಂದ ಖ್ಯಾತ ಯಕ್ಷಗಾನ ಭಾಗವತರಾದ ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ…

4 days ago