ಮಂಗಳೂರು: ಕಳೆದ 15 ವರ್ಷದಿಂದ ಕೆರೆಕಾಡು ಶ್ರೀ ವಿನಾಯಕ ಯಕ್ಷಕಲಾ ಫೌಂಡೇಶನ್ನ ಮೂಲಕ ಕರಾವಳಿ ಜಿಲ್ಲೆ ಸಹಿತ ಬೆಂಗಳೂರು, ಮೈಸೂರು, ಮುಂಬೈಯಂತಹ ನಗರಗಳಲ್ಲಿ ಯಕ್ಷಗಾನ ಪ್ರದರ್ಶನ ಮಾಡುವ ಪ್ರಭುದ್ಧ ತಂಡವಾಗಿರುವ ಕೆರೆಕಾಡು ಶ್ರೀ ವಿನಾಯಕ ಯಕ್ಷಕಲಾ ತಂಡದ 15ನೇ ವರ್ಷದ ಶ್ರೀ ವಿನಾಯಕ ಯಕ್ಷಕಲೋತ್ಸವ-2023 ಸಂಭ್ರಮವು. ನವೆಂಬರ್ 11ಕ್ಕೆ ನಡೆಯಲಿದೆ ಎಂದು ಫೌಂಡೇಶನ್ನ ಅಧ್ಯಕ್ಷ ಜಯಂತ್ ಅಮೀನ್ ಕೆರೆಕಾಡು ತಿಳಿಸಿದ್ದಾರೆ.
ಅವರು ಕಿನ್ನಿಗೋಳಿಯ ಸ್ವಾಗತ್ ಸಭಾಂಗಣದಲ್ಲಿ ನಡೆದ ಸುದ್ಧಿಗೋಷ್ಠಿಯಲ್ಲಿ ಮಾಹಿತಿ ನೀಡಿ, ಕಾರ್ಯಕ್ರಮವು ಎಸ್ಕೋಡಿಯ ಪದ್ಮಾವತಿ ಲಾನ್ನಲ್ಲಿ ಶಾಸಕ ಉಮಾನಾಥ ಕೋಟ್ಯಾನ್ ಅವರ ಉದ್ಘಾಟನೆಯೊಂದಿಗೆ ಗಣ್ಯರ ಉಪಸ್ಥಿತಿಯೊಂದಿಗೆ ಸಭಾ ಕಾರ್ಯಕ್ರಮ, ಪ್ರಶಸ್ತಿ ಪ್ರದಾನ, ಗೌರವಾರ್ಪಣೆ ಹಾಗೂ ಯಕ್ಷಗಾನ ಪ್ರದರ್ಶನದೊಂದಿಗೆ ನಡೆಯಲಿದೆ ಎಂದರು.ಮೇಳದ ಸಂಚಾಲಕ ಅಭಿಜಿತ್ ಮಾಹಿತಿ ನೀಡಿ, ಶ್ರೀ ವಿನಾಯಕ ಮೇಳವು ಪ್ರಸ್ತುತ ವರ್ಷದಲ್ಲಿ 70ಕ್ಕೂ ಮಿಕ್ಕಿ ಯಕ್ಷಗಾನ ಪ್ರದರ್ಶನ ನೀಡಿದೆ. ಮುಂಬೈಯ 9ನೇ ವರ್ಷದ ಪ್ರವಾಸವು ಯಶಸ್ವಿಯಾಗಿ ಮುಗಿಸಿದ್ದೇವೆ, ಮುಂದಿನ ದಶಮಾನೋತ್ಸವ ಸಂಭ್ರಮದಲ್ಲಿ ಹತ್ತು ದಿನಗಳ ಕಾಲ ಯಕ್ಷಗಾನ ಪ್ರದರ್ಶನ ನೀಡಲಿದ್ದೇವೆ ಎಂದರು.ಮೇಳದ ಯಕ್ಷಗುರು ಅಜಿತ್ ಕೆರೆಕಾಡು ಮಾತನಾಡಿ, ಯಕ್ಷಕಲೋತ್ಸವದಲ್ಲಿ ಜಿಲ್ಲೆಯ ಪ್ರಸಿದ್ಧ ಕಲಾವಿದರ ಸಹಿತ ಮೇಳದ 65ಕ್ಕೂ ಮಿಕ್ಕಿ ಕಲಾವಿದರು ಬಣ್ಣ ಹಚ್ಚಲಿದ್ದಾರೆ. ಹಿಮ್ಮೇಳದಲ್ಲಿಯೂ ಕಲಾವಿದರ ಸಂಗಮವಿದೆ. ಪೂರ್ವರಂಗ, ನಂದ ಮುಕುಂದ, ಕರುಣಾಳು ರಾಘವ, ಸಂಭವಾಮಿ ಯುಗೇ ಯುಗೇ, ವಾಸುದೇವ ಸರ್ವಂ ಪ್ರಸಂಗ ಪ್ರದರ್ಶನಗೊಳ್ಳಲಿದೆ ಎಂದರು.
ಸುದ್ಧಿಗೋಷ್ಠಿಯಲ್ಲಿ ಉಪಾಧ್ಯಕ್ಷೆ ಉಷಾ ನರೇಂದ್ರ ಕೆರೆಕಾಡು, ಕಾರ್ಯದರ್ಶಿ ದುರ್ಗಾಪ್ರಸಾದ್, ಸದಸ್ಯರಾದ ಶ್ರೇಯಸ್ ರಾವ್ ಉಪಸ್ಥಿತರಿದ್ದರು.
ಬಂಟ್ವಾಳ ತಾಲೂಕಿನ ತೆಂಕಬೆಳ್ಳೂರು ಗ್ರಾಮದ ಕಾಗುಡ್ಡೆ ಎಂಬಲ್ಲಿ ರಾತ್ರಿ ಸುರಿದ ಭಾರೀ ಮಳೆ ಹಾಗೂ ಬಿರುಗಾಳಿಯ ಅಬ್ಬರಕ್ಕೆ ಮನೆಯ ಚಾವಣಿ…
ಬಂಟ್ವಾಳ ತಾಲೂಕಿನ ಸಜೀಪಮೂಡ ಗ್ರಾಮದ ಕೊಳಕೆ ಎಂಬಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದ ಸಂಭವಿಸಿದಂತಹ ಅವಘಡದಲ್ಲಿ ಮನೆಯ ಪೀಠೋಪಕರಣಗಳು ಹಾಗೂ ದಿನನಿತ್ಯ…
ವಾಷಿಂಗ್ಟನ್ ಕರ್ನಾಟಕದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ. ಯು. ಟಿ. ಖಾದರ್ ಫರೀದ್ ಅವರ ಸಾರ್ವಜನಿಕ ಸೇವೆ…
ಫಿಫಾ ವಿಶ್ವಕಪ್ 2026ರ ಫೈನಲ್ ಹಾಗೂ ಸೆಮಿಫೈನಲ್ ಪಂದ್ಯಗಳ ವೇಳೆ ನಡೆದ ಗಲಾಟೆ ಮತ್ತು ನಿಯಮ ಉಲ್ಲಂಘನೆಗಳ ಹಿನ್ನೆಲೆಯಲ್ಲಿ, ಅರ್ಜೆಂಟೀನಾ…
'ನ್ಯೂಯಾರ್ಕ್ ಟೈಮ್ಸ್' ತನ್ನ ವರದಿಯಲ್ಲಿ 'ಪಾಕಿಸ್ತಾನಿ ಕಾಶ್ಮೀರ' ಎಂದು ಉಲ್ಲೇಖಿಸಿರುವುದಕ್ಕೆ ಭಾರತ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಅಮೆರಿಕದಲ್ಲಿರುವ ಭಾರತೀಯ ರಾಯಭಾರ…
ಚೀನಾ ಪಾಕಿಸ್ತಾನದ ಮೂಲಕ ಇರಾನ್ಗೆ 400 ರಾಕೆಟ್ ಲಾಂಚರ್ಗಳನ್ನು ಪೂರೈಸಿದೆ ಎಂಬ ವರದಿಗಳು ಜಾಗತಿಕ ಆತಂಕಕ್ಕೆ ಕಾರಣವಾಗಿವೆ. ಈ ಕುರಿತು…