ಜನ ಮನದ ನಾಡಿ ಮಿಡಿತ

Advertisement

ಸೌಜನ್ಯ ಕೊಲೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್..!; ಸಂತೋಷ್ ರಾವ್‌ಗೆ ಮತ್ತೊಮ್ಮೆ ಸಂಕಷ್ಟ ಎದುರಾಗುತ್ತಾ..??

ಹನ್ನೊಂದು ರ‍್ಷದ ಹಿಂದೆ ನಡೆದ ಕುಮಾರಿ ಸೌಜನ್ಯ ಮೇಲಿನ ಅತ್ಯಾಚಾರ ಹಾಗೂ ಕೊಲೆ ಪ್ರಕರಣದ ಆರೋಪಿಯನ್ನು ಖುಲಾಸೆಗೊಳಿಸಿ ವಿಶೇಷ ನ್ಯಾಯಾಲಯ ಹೊರಡಿಸಿದ್ದ ಆದೇಶ ಪ್ರಶ್ನಿಸಿ ಸಿಬಿಐ ಹೈಕರ‍್ಟ್ನಲ್ಲಿ ಮೇಲ್ಮನವಿ ಸಲ್ಲಿಸಿದೆ.

ಅರ್ಜಿಯು ಇನ್ನೂ ವಿಚಾರಣೆಗೆ ಬರಬೇಕಿದೆ. ಪ್ರಕರಣದ ಆರೋಪಿ ಸಂತೋಷ್ ರಾವ್ ನಿರ್ದೂಷಿ ಎಂದು ಸಿಬಿಐ ವಿಶೇಷ ನ್ಯಾಯಾಲಯ 2023ರ ಜೂನ್ 16ರಂದು ತೀರ್ಪು ನೀಡಿತ್ತು. ಮೇಲ್ಮನವಿ ಸಲ್ಲಿಸಲು ಸಿಬಿಐಗೆ 60 ದಿನಗಳ ಕಾಲಾವಕಾಶ ಸಹ ನೀಡಲಾಗಿತ್ತು. ಆದರೆ, 4 ತಿಂಗಳ ಬಳಿಕ ಸಿಬಿಐ ಮೇಲ್ಮನವಿ ಸಲ್ಲಿಸಿದೆ. ಈ ಹಿಂದೆ ಆರೋಪಿ ಸಂತೋಷ್ ರಾವ್ ನಿರ್ದೋಷಿ ಎಂದು ಬೆಂಗಳೂರು ಸಿಬಿಐ ವಿಶೇಷ ಕೋರ್ಟ್ ತೀರ್ಪು ನೀಡಿತ್ತು. ಸಿಬಿಐ ಅಧಿಕಾರಿಗಳು ಸಂತೋಷ್ ರಾವ್ ವಿರುದ್ಧದ ಆರೋಪ ಸಾಬೀತು ಪಡಿಸಲು ವಿಫಲ ಎಂದು ಕೋರ್ಟ್ ಹೇಳಿತ್ತು. ಹೀಗಾಗಿ ಸಂತೋಷ್ ರಾವ್ ಅವರನ್ನು ನಿರಾಪರಾಧಿ ಎಂದು ಬಿಡುಗಡೆಗೊಳಿಸಿದ್ರು. ಆ ಬಳಿಕ ಮೇಲ್ಮನವಿ ಸಲ್ಲಿಸಲು ಸಿಬಿಐಗೆ 60 ದಿನಗಳ ಕಾಲಾವಕಾಶ ಇತ್ತು. ಆದರೆ ಇದೀಗ ಅವಧಿ ಮುಗಿದ ಮೇಲೆ ನಾಲ್ಕು ತಿಂಗಳ ಬಳಿಕ ಹೈಕೋರ್ಟ್‍ಗೆ ಮೇಲ್ಮನವಿ ಸಲ್ಲಿಸಲಾಗಿದೆ. ಆ ಮೂಲಕ ಸೌಜನ್ಯ ಕೊಲೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕಿದ್ದು, ಸಿಬಿಐ ಸಲ್ಲಿಸಿರುವ ಮೇಲ್ಮನವಿಯನ್ನು ಹೈಕೋರ್ಟ್ ಅಂಗೀಕರಿಸುತ್ತದೆಯೇ ಎಂಬುದನ್ನು ಕಾದು ನೋಡಬೇಕಿದೆ.

Leave a Reply

Your email address will not be published. Required fields are marked *

ಟೆಹ್ರಾನ್: ಖಮೇನಿ ಭೇಟಿಯಲ್ಲೇ ಹೊಸ ರಹಸ್ಯ! ‘ನೀವೇ ಖಮೇನಿಯೇ?’ ಎಂದು ಪ್ರಶ್ನಿಸಿದ ಇರಾನ್ ಅಧ್ಯಕ್ಷ…!

ಬ್ಯಾಂಕಾಕ್: ಥೈಲ್ಯಾಂಡ್ ಶಾಲೆಯಲ್ಲಿ ಗುಂಡಿನ ದಾಳಿ: ಶಿಕ್ಷಕ ಸಾವು, 15 ಮಂದಿಗೆ ಗಾಯ…!

ಬಂಟ್ವಾಳ: ಆಳ್ವಾಸ್ ಪ್ರಗತಿ-2026 ಉದ್ಯೋಗ ಮೇಳಕ್ಕೆ ಬಂಟ್ವಾಳದಿಂದ ಉಚಿತ ಬಸ್…!

ಮಂಗಳೂರು: ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಕಾರು ಅಪಘಾತ: ಒಂದೇ ಕುಟುಂಬದ ಆರು ಮಂದಿಗೆ ಗಾಯ…!

ಬಂಟ್ವಾಳ: ಬಿ.ಸಿ.ರೋಡ್ ಎನ್.ಜಿ. ಸರ್ಕಲ್‌ನಲ್ಲಿ ಭೀಕರ ಅಪಘಾತ: ಚಿಕಿತ್ಸೆ ಫಲಕಾರಿಯಾಗದೆ ಇಬ್ಬರು ಮೃತ್ಯು…!

ಮಂಗಳೂರು: ನ್ಯುಮೋನಿಯಾಗೆ 6ನೇ ತರಗತಿ ವಿದ್ಯಾರ್ಥಿನಿ ಬಲಿ

ಬಂಟ್ವಾಳ: ಬಿಸಿರೋಡು–ಅಡ್ಡಹೊಳೆ ಚತುಷ್ಪಥ ಕಾಮಗಾರಿ ನಿಂತಿಲ್ಲ: ಕೆಎನ್‌ಆರ್‌ಸಿಎಲ್ ಸ್ಪಷ್ಟನೆ

ವಾಷಿಂಗ್ಟನ್: ಟ್ರಂಪ್ ಸುಂಕಕ್ಕೆ ಸುಪ್ರೀಂ ಕೋರ್ಟ್ ಬ್ರೇಕ್; ಕಂಪನಿಗಳಿಗೆ ಬಿಲಿಯನ್‌ಗಟ್ಟಲೆ ಮರುಪಾವತಿ..!

ಟೆಹ್ರಾನ್: ಮೊಜ್ತಬಾ ಖಮೇನಿ ಸಂಪರ್ಕಿಸುವುದು ಕಷ್ಟ; ಇರಾನ್ ಅಧ್ಯಕ್ಷರ ಬಹಿರಂಗ ಹೇಳಿಕೆ…!

error: Content is protected !!