ಉಡುಪಿ: ಇಂದ್ರಾಳಿ ರೈಲ್ವೇ ಸೇತುವೆ ಕಾಮಗಾರಿಯ ಭಾಗವಾಗಿ ಧಾರವಾಡದ ಪದ್ಮಜಾ ಇಂಡಸ್ಟ್ರೀಸ್ ನಲ್ಲಿ ಸಿದ್ಧಗೊಳ್ಳುತ್ತಿರುವ ಸ್ಟೀಲ್ ಬ್ರಿಡ್ಜ್ ನಿರ್ಮಾಣ ಘಟಕಕ್ಕೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರ ಸೂಚನೆಯಂತೆ ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಭೇಟಿ ನೀಡಿ ಅಧಿಕಾರಿಗಳೊಂದಿಗೆ ಸ್ಟೀಲ್ ಬ್ರಿಡ್ಜ್ ನಿರ್ಮಾಣದ ಬಗ್ಗೆ ಸಮಾಲೋಚನೆ ನಡೆಸಿ ಶೀಘ್ರದಲ್ಲಿ ಹಸ್ತಾಂತರಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಸುಮಾರು 5.20 ಕೋಟಿ ವೆಚ್ಚದಲ್ಲಿ 54 ಮೀಟರ್ ಉದ್ದ ಹಾಗೂ 12.5 ಮೀಟರ್ ಅಗಲದ 385 ಟನ್ ಸಾಮರ್ಥ್ಯದ ಸ್ಟೀಲ್ ಬ್ರಿಡ್ಜ್ ನ ಶೇ. 60 ಕಾಮಗಾರಿ ಪೂರ್ಣಗೊಂಡಿದ್ದು, ಹದಿನೈದು ದಿನಗಳಲ್ಲಿ ಶೇ. 80 ಪೂರ್ಣಗೊಂಡ ಬಳಿಕ ರೈಲ್ವೇ ಇಲಾಖೆಯ ತಾಂತ್ರಿಕ ವಿಭಾಗ ಪರಿಶೀಲನೆ ನಡೆಸಿ ವರದಿ ಸಲ್ಲಿಸಿದ ಬಳಿಕ ಡಿಸೆಂಬರ್ ಮೊದಲ ವಾರದಲ್ಲಿ ಇಂದ್ರಾಳಿಯಲ್ಲಿ ಸ್ಟೀಲ್ ಬ್ರಿಡ್ಜ್ ಅಳವಡಿಕೆ ಪ್ರಕ್ರಿಯೆ ನಡೆಯಲಿದ್ದು, ಆ ಬಳಿಕ ಸ್ಟೀಲ್ ಬ್ರಿಡ್ಜ್ ಮೇಲೆ 200 ಎಂ. ಎಂ. ಕಾಂಕ್ರಿಟೀಕರಣ ನಡೆಯಲಿದೆ.
ಡಿಸೆಂಬರ್ ಕೊನೆಯ ವಾರದಲ್ಲಿ ಇಂದ್ರಾಳಿ ರೈಲ್ವೇ ಸೇತುವೆ ಕಾಮಗಾರಿ ಪೂರ್ಣಗೊಳ್ಳಲಿದ್ದು, ಜನವರಿಯಲ್ಲಿ ಸಾರ್ವಜನಿಕರ ಸೇವೆಗೆ ಲಭ್ಯವಾಗಲಿದೆ ಎಂದು ಶಾಸಕ ಯಶ್ ಪಾಲ್ ಸುವರ್ಣ ತಿಳಿಸಿದ್ದಾರೆ.
ಈ ಸಂದರ್ಭದಲ್ಲಿ ಸುಗ್ಗಿ ಸುಧಾಕರ ಶೆಟ್ಟಿ, ಮಹೇಶ್ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.
ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾಧ್ಯಕ್ಷ, ಜಾನಪದ ಕಲಾವಿದ ಡಾ.ಗಣೇಶ್ ಗಂಗೊಳ್ಳಿ ಅವರು ಇಂದು ನಿಧನರಾಗಿದ್ದಾರೆ. ಕಳೆದ ರಾತ್ರಿ ಸಮಾರಂಭವೊಂದರಲ್ಲಿ…
ಕೆಎಸ್ಆರ್ಟಿಸಿ ಬಸ್ ಡಿಕ್ಕಿಯಾಗಿ ಮಹಿಳೆಯೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ತೆಕ್ಕಟ್ಟೆ ಪ್ರೆಸಿಡೆಂಟ್ ಕನ್ವೆನ್ಷನ್ ಹಾಲ್ ಮುಂಭಾಗ…
ಕನ್ನಡ ಚಿತ್ರರಂಗದ ಖ್ಯಾತ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕುಟುಂಬ ಸಮೇತರಾಗಿ ಆಗಮಿಸಿದ್ದಾರೆ. ರಿಷಬ್…
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು -ಸುಳ್ಯ ರಾಷ್ಟ್ರೀಯ ಹೆದ್ದಾರಿಯ ಕೌಡಿಚ್ಚಾರು ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಪಿಕಪ್ ವಾಹನ ಮೋರಿಗೆ…
ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಮಹಿಳೆಯೊಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಘಟನೆ ದಕ್ಷಿಣ…
ವಸತಿಗೃಹವೊಂದರ ಮುಂಭಾಗದಲ್ಲಿ ನಿಲ್ಲಿಸಲಾಗಿದ್ದ ಬೈಕ್ ಕಳವು ಮಾಡಿದ ಆರೋಪಿಗಳಿಬ್ಬರನ್ನು ಬಂಟ್ವಾಳ ನಗರ ಠಾಣಾ ಪೋಲೀಸರು ಬಂಧಿಸಿದ್ದಾರೆ. ಬಂಟ್ವಾಳ ಸಜೀಪ ಮುನ್ನೂರು…