ಉಡುಪಿ: ಇಂದ್ರಾಳಿ ರೈಲ್ವೇ ಸೇತುವೆ ಕಾಮಗಾರಿಯ ಭಾಗವಾಗಿ ಧಾರವಾಡದ ಪದ್ಮಜಾ ಇಂಡಸ್ಟ್ರೀಸ್ ನಲ್ಲಿ ಸಿದ್ಧಗೊಳ್ಳುತ್ತಿರುವ ಸ್ಟೀಲ್ ಬ್ರಿಡ್ಜ್ ನಿರ್ಮಾಣ ಘಟಕಕ್ಕೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರ ಸೂಚನೆಯಂತೆ ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಭೇಟಿ ನೀಡಿ ಅಧಿಕಾರಿಗಳೊಂದಿಗೆ ಸ್ಟೀಲ್ ಬ್ರಿಡ್ಜ್ ನಿರ್ಮಾಣದ ಬಗ್ಗೆ ಸಮಾಲೋಚನೆ ನಡೆಸಿ ಶೀಘ್ರದಲ್ಲಿ ಹಸ್ತಾಂತರಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಸುಮಾರು 5.20 ಕೋಟಿ ವೆಚ್ಚದಲ್ಲಿ 54 ಮೀಟರ್ ಉದ್ದ ಹಾಗೂ 12.5 ಮೀಟರ್ ಅಗಲದ 385 ಟನ್ ಸಾಮರ್ಥ್ಯದ ಸ್ಟೀಲ್ ಬ್ರಿಡ್ಜ್ ನ ಶೇ. 60 ಕಾಮಗಾರಿ ಪೂರ್ಣಗೊಂಡಿದ್ದು, ಹದಿನೈದು ದಿನಗಳಲ್ಲಿ ಶೇ. 80 ಪೂರ್ಣಗೊಂಡ ಬಳಿಕ ರೈಲ್ವೇ ಇಲಾಖೆಯ ತಾಂತ್ರಿಕ ವಿಭಾಗ ಪರಿಶೀಲನೆ ನಡೆಸಿ ವರದಿ ಸಲ್ಲಿಸಿದ ಬಳಿಕ ಡಿಸೆಂಬರ್ ಮೊದಲ ವಾರದಲ್ಲಿ ಇಂದ್ರಾಳಿಯಲ್ಲಿ ಸ್ಟೀಲ್ ಬ್ರಿಡ್ಜ್ ಅಳವಡಿಕೆ ಪ್ರಕ್ರಿಯೆ ನಡೆಯಲಿದ್ದು, ಆ ಬಳಿಕ ಸ್ಟೀಲ್ ಬ್ರಿಡ್ಜ್ ಮೇಲೆ 200 ಎಂ. ಎಂ. ಕಾಂಕ್ರಿಟೀಕರಣ ನಡೆಯಲಿದೆ.
ಡಿಸೆಂಬರ್ ಕೊನೆಯ ವಾರದಲ್ಲಿ ಇಂದ್ರಾಳಿ ರೈಲ್ವೇ ಸೇತುವೆ ಕಾಮಗಾರಿ ಪೂರ್ಣಗೊಳ್ಳಲಿದ್ದು, ಜನವರಿಯಲ್ಲಿ ಸಾರ್ವಜನಿಕರ ಸೇವೆಗೆ ಲಭ್ಯವಾಗಲಿದೆ ಎಂದು ಶಾಸಕ ಯಶ್ ಪಾಲ್ ಸುವರ್ಣ ತಿಳಿಸಿದ್ದಾರೆ.
ಈ ಸಂದರ್ಭದಲ್ಲಿ ಸುಗ್ಗಿ ಸುಧಾಕರ ಶೆಟ್ಟಿ, ಮಹೇಶ್ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.
ಇರಾನ್ನ ನೂತನ ಸುಪ್ರೀಂ ಲೀಡರ್ ಮೊಜ್ತಬಾ ಖಮೇನಿ ಅವರ ಆರೋಗ್ಯ ಹಾಗೂ ಅವರು ಎಲ್ಲಿದ್ದಾರೆ ಎಂಬ ಕುರಿತು ಜಾಗತಿಕ ಮಟ್ಟದಲ್ಲಿ…
ಥೈಲ್ಯಾಂಡ್ನ ರಾಜಧಾನಿ ಬ್ಯಾಂಕಾಕ್ ಸಮೀಪದ ಶಾಲೆಯೊಂದರಲ್ಲಿ 9ನೇ ತರಗತಿ ವಿದ್ಯಾರ್ಥಿಯೊಬ್ಬ ನಡೆಸಿದ ಗುಂಡಿನ ದಾಳಿಯಲ್ಲಿ ಶಿಕ್ಷಕರೊಬ್ಬರು ಮೃತಪಟ್ಟಿದ್ದು, ಕನಿಷ್ಠ 15…
ಮೂಡಬಿದ್ರೆಯ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಆಯೋಜಿಸಿರುವ ಆಳ್ವಾಸ್ ಪ್ರಗತಿ-2026 ಬೃಹತ್ ಉದ್ಯೋಗ ಮೇಳಕ್ಕೆ ತೆರಳಲು ಬಂಟ್ವಾಳದಿಂದ ಶುಕ್ರವಾರ ಎರಡು ಉಚಿತ…
ರಾಷ್ಟ್ರೀಯ ಹೆದ್ದಾರಿ 75ರ ಸುರಿಕುಮೇರು ಸಮೀಪದ ಹಿಂದೂಸ್ತಾನ್ ಪೆಟ್ರೋಲ್ ಬಂಕ್ ಬಳಿ ನಡೆದ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ಆರು…
ಬಿ.ಸಿ.ರೋಡ್ನ ಎನ್.ಜಿ. ಸರ್ಕಲ್ನಲ್ಲಿ ಗುರುವಾರ ಸಂಜೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಇಬ್ಬರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.…
ಕಳೆದ ಒಂದು ವಾರದಿಂದ ನ್ಯುಮೋನಿಯಾ ಜ್ವರದಿಂದ ಬಳಲುತ್ತಿದ್ದ ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವ ದುಃಖದ ಘಟನೆ ನಡೆದಿದೆ. ಮೃತ ವಿದ್ಯಾರ್ಥಿನಿಯನ್ನು…