ಜನ ಮನದ ನಾಡಿ ಮಿಡಿತ

Advertisement

ಅಂಗನವಾಡಿ ಕೇಂದ್ರವನ್ನೂ ಬಿಡದ ಖದೀಮರು!! ಸಾವಿರಾರು ರೂ. ಮೌಲ್ಯದ ಸಾಮಾಗ್ರಿಗಳು ಕಳವು..

ಬಂಟ್ವಾಳ: ಮಕ್ಕಳ ಪೌಷ್ಟಿಕಾಂಶ ಪಡೆಯುವಿಕೆ ಮತ್ತು ಬೆಳವಣಿಗೆಗೆ ಪೂರಕವಾಗುವ ನಿಟ್ಟಿನಲ್ಲಿ ಸರ್ಕಾರ ಜಾರಿ ಮಾಡಿದ ಅಂಗನವಾಡಿ ಕೇಂದ್ರವನ್ನು ಬಿಡದ ಕಳ್ಳರು , ಅಂಗನವಾಡಿಯೊಂದಕ್ಕೆ ನುಗ್ಗಿ ಅಲ್ಲಿ ಮಕ್ಕಳಿಗೆ ತಿನಿಸುಗಳನ್ನು ತಯಾರಿಸಲು ತಂದಿರಿಸಲಾಗಿದ್ದ ಸಾವಿರಾರು ರೂ ಮೌಲ್ಯದ ವಿವಿಧ ಸಾಮಾಗ್ರಿಗಳನ್ನು ಕಳವು ಮಾಡಿದ ಘಟನೆ ಬಂಟ್ವಾಳ ನಗರ ಪೋಲೀಸ್ ಠಾಣಾ ವ್ಯಾಪ್ತಿಯ ಬೊಂಡಾಲ ಎಂಬಲ್ಲಿ ನಡೆದಿದೆ.
ಪಾಣೆಮಂಗಳೂರು ಗ್ರಾಮದ ಬೊಂಡಾಲ ಸಮೀಪದ ಶಾಂತಿ ಗುಡ್ಡೆ ಎಂಬಲ್ಲಿನ ಅಂಗನವಾಡಿಯಿಂದ ಸುಮಾರು 7 ಸಾವಿರ ರೂ ಮೌಲ್ಯದ ವಿವಿಧ ಸೊತ್ತುಗಳನ್ನು ಕಳವು ಮಾಡಲಾಗಿದೆ ಎಂದು ಅಂಗನವಾಡಿ ಕಾರ್ಯಕರ್ತೆ ದೇವಕಿ ಠಾಣೆಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.

ಅಂಗನವಾಡಿಯಲ್ಲಿದ್ದ ಅಲ್ಯುಮಿನಿಯಂ ಕುಕ್ಕರ್ 10 ಲೀ-1 ಅಂದಾಜು ಮೌಲ್ಯ 1500/- ರೂ, ಅಲ್ಯುಮಿನಿಯಂ ಕುಕ್ಕರ್ 5 ಲೀ-1 ಅಂದಾಜು ಮೌಲ್ಯ 1000/- ರೂ, ಅಲ್ಯುಮಿನಿಯಂ ಡಬ್ಬ ಹಾಗೂ ಮುಚ್ಚಳ-2 ಅಂದಾಜು ಮೌಲ್ಯ 3000/- ರೂ, ರೂ, 1000/- ರೂ ನಗದು ಹಾಗೂ ದಿನಸಿ ವಸ್ತುಗಳನ್ನು ಕಳವು ಮಾಡಿಕೊಂಡು ಹೋಗಿರುತ್ತಾರೆ ಎಂಬುದಾಗಿ ನೀಡಿದ ದೂರಿನಂತೆ ಬಂಟ್ವಾಳ ನಗರ ಠಾಣೆಯಲ್ಲಿ ಅ.ಕ್ರ 134/2023 ಕಲಂ: 454, 457, 380 ಐಪಿಸಿ ಯಂತೆ ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.

Leave a Reply

Your email address will not be published. Required fields are marked *

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

error: Content is protected !!