ಜನ ಮನದ ನಾಡಿ ಮಿಡಿತ

Advertisement

“ಭೀಕರ ಬರಗಾಲ ಸಮಸ್ಯೆಯಿದ್ದರೂ ರಾಜ್ಯ ಸರಕಾರದಿಂದ ಒಂದಷ್ಟು ಪರಿಹಾರ ಬಿಡುಗಡೆ”; ಕೋಟ ಶ್ರೀನಿವಾಸ್ ಪೂಜಾರಿ

ರಾಜ್ಯದ ೨೧೬ ತಾಲೂಕುಗಳಲ್ಲಿ ಭೀಕರ ಬರಗಾಲ ಆವರಿಸಿದೆ. ೩೬ ಲಕ್ಷ ಹೆಕ್ಟೇರ್ ಕೃಷಿ ಮತ್ತು ೩ ಲಕ್ಷ ಹೆಕ್ಟೇರ್ ತೋಟಗಾರಿಕೆ ಪ್ರದೇಶದಲ್ಲಿ ಬರಗಾಲದ ಛಾಯೆಯಿದೆ. ಒಟ್ಟಾರೆ ರಾಜ್ಯದಲ್ಲಿ ಸುಮಾರು ೩೩ ಸಾವಿರ ಕೋಟಿ ರೂ. ನಷ್ಟ ಅಂದಾಜಿಸಲಾಗಿದೆ.

ಇಷ್ಟೆಲ್ಲ ಆಗಿದ್ದರೂ ಸಿದ್ದರಾಮಯ್ಯ ಸರಕಾರ ಕೇವಲ ೩೨೦ ಕೋಟಿ ರೂ. ಮಾತ್ರ ಬಿಡುಗಡೆ ಮಾಡಿದೆ. ಸರಕಾರ ಒಂದು ವಾರದಲ್ಲಿ ಕನಿಷ್ಠ ೧೦ ಸಾವಿರ ಕೋಟಿ ರೂಪಾಯಿ ಪರಿಹಾರ ಬಿಡುಗಡೆ ಮಾಡಬೇಕು. ಇಲ್ಲದಿದ್ದರೆ ರಾಜ್ಯ ಬಿಜೆಪಿ ವಿಧಾನಸಭೆ ಮುತ್ತಿಗೆ ಚಳುವಳಿ ನಡೆಸಲಿದೆ ಎಂದು ವಿಧಾನಪರಿಷತ್ ಸದಸ್ಯರಾದ ಮಾಜಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಎಚ್ಚರಿಕೆ ನೀಡಿದ್ದಾರೆ. ಇವರು ಪುತ್ತೂರಿನ ಬಿಜೆಪಿ ಕಚೇರಿಯಲ್ಲಿ ಮಾತಾನಾಡಿ, ಪರಿಹಾರ ಹಣ ಬಿಡುಗಡೆ ಮಾಡಬೇಕಾದ ರಾಜ್ಯ ಸರಕಾರ ಕೇಂದ್ರವನ್ನು ದೂರುತ್ತಾ ಕೂತಿದೆ. ರಾಜ್ಯಕ್ಕೆ ಪರಿಹಾರ ನೀಡುವಂತೆ ಕೋರಿ ಪ್ರಧಾನಿಯವರ ಬಳಿ ಸರ್ವಪಕ್ಷ ನಿಯೋಗ ಕೊಂಡೊಯ್ಯಲಿ. ಪ್ರತಿಪಕ್ಷವಾಗಿ ನಾವು ಕೂಡ ಬರುತ್ತೇವೆ. ತನ್ನ ಜವಾಬ್ದಾರಿ ನಿರ್ವಹಣೆ ಮಾಡದೆ ಕೇಂದ್ರದತ್ತ ಬೊಟ್ಟು ಮಾಡುವುದು ಸರಿಯಲ್ಲ. ರಾಜ್ಯ ಬಿಜೆಪಿಯು ೧೭ ತಂಡಗಳನ್ನು ರಚಿಸಿ ೩೧ ಜಿಲ್ಲೆಗಳಲ್ಲೂ ಬರ ಸ್ಥಿತಿ ಅಧ್ಯಯನ ಮಾಡಿದೆ. ನಾವು ಅಧ್ಯಯನ ಆರಂಭಿಸಿದ ಮೇಲೆ ರಾಜ್ಯ ಸರಕಾರ ಒಂದಷ್ಟು ಪರಿಹಾರ ಬಿಡುಗಡೆ ಮಾಡಿದೆ. ಈಗಾಗಲೇ ರಾಜ್ಯದ ಅನೇಕ ಕಡೆ ಮಳೆಯ ಸೂಚನೆ ಸಿಕ್ಕಿದೆ. ಸರಕಾರ ತಕ್ಷಣ ರೈತರ ನೆರವಿಗೆ ಬಂದು ಬಿತ್ತನೆ ಬೀಜ ಮತ್ತಿತರ ಕಾರ್ಯಕ್ಕೆ ಸಹಕಾರ ನೀಡಬೇಕು. ೧೦ ಸಾವಿರ ಕೋಟಿ ಪರಿಹಾರ ಪ್ಯಾಕೇಜ್ ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿದ್ದಾರೆ. ಇನ್ನೂ ಈ ಸುದ್ದಿಗೋಷ್ಠಿಯಲ್ಲಿ ಬಿಜೆಪಿ ಪುತ್ತೂರು ಮಂಡಲ ಅಧ್ಯಕ್ಷರಾದ ಸಾಜ ರಾಧಾಕೃಷ್ಣ ಆಳ್ವಾ, ನಗರ ಮಂಡಲ ಅಧ್ಯಕ್ಷರಾದ ಪಿ.ಜಿ. ಜಗನ್ನಿವಾಸ ರಾವ್, ಜಿಲ್ಲಾ ಒಬಿಸಿ ಮೋರ್ಛಾ ಅಧ್ಯಕ್ಷರಾದ ಆರ್.ಸಿ. ನಾರಾಯಣ್, ಪುತ್ತೂರು ಮಂಡಲ ಕಾರ್ಯದರ್ಶಿಗಳಾದ ನಿತೀಶ್ ಕುಮಾರ್ ಶಾಂತಿವನ ಹಾಗೂ ಮತ್ತಿತರರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಟೆಹ್ರಾನ್: ಖಮೇನಿ ಭೇಟಿಯಲ್ಲೇ ಹೊಸ ರಹಸ್ಯ! ‘ನೀವೇ ಖಮೇನಿಯೇ?’ ಎಂದು ಪ್ರಶ್ನಿಸಿದ ಇರಾನ್ ಅಧ್ಯಕ್ಷ…!

ಬ್ಯಾಂಕಾಕ್: ಥೈಲ್ಯಾಂಡ್ ಶಾಲೆಯಲ್ಲಿ ಗುಂಡಿನ ದಾಳಿ: ಶಿಕ್ಷಕ ಸಾವು, 15 ಮಂದಿಗೆ ಗಾಯ…!

ಬಂಟ್ವಾಳ: ಆಳ್ವಾಸ್ ಪ್ರಗತಿ-2026 ಉದ್ಯೋಗ ಮೇಳಕ್ಕೆ ಬಂಟ್ವಾಳದಿಂದ ಉಚಿತ ಬಸ್…!

ಮಂಗಳೂರು: ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಕಾರು ಅಪಘಾತ: ಒಂದೇ ಕುಟುಂಬದ ಆರು ಮಂದಿಗೆ ಗಾಯ…!

ಬಂಟ್ವಾಳ: ಬಿ.ಸಿ.ರೋಡ್ ಎನ್.ಜಿ. ಸರ್ಕಲ್‌ನಲ್ಲಿ ಭೀಕರ ಅಪಘಾತ: ಚಿಕಿತ್ಸೆ ಫಲಕಾರಿಯಾಗದೆ ಇಬ್ಬರು ಮೃತ್ಯು…!

ಮಂಗಳೂರು: ನ್ಯುಮೋನಿಯಾಗೆ 6ನೇ ತರಗತಿ ವಿದ್ಯಾರ್ಥಿನಿ ಬಲಿ

ಬಂಟ್ವಾಳ: ಬಿಸಿರೋಡು–ಅಡ್ಡಹೊಳೆ ಚತುಷ್ಪಥ ಕಾಮಗಾರಿ ನಿಂತಿಲ್ಲ: ಕೆಎನ್‌ಆರ್‌ಸಿಎಲ್ ಸ್ಪಷ್ಟನೆ

ವಾಷಿಂಗ್ಟನ್: ಟ್ರಂಪ್ ಸುಂಕಕ್ಕೆ ಸುಪ್ರೀಂ ಕೋರ್ಟ್ ಬ್ರೇಕ್; ಕಂಪನಿಗಳಿಗೆ ಬಿಲಿಯನ್‌ಗಟ್ಟಲೆ ಮರುಪಾವತಿ..!

ಟೆಹ್ರಾನ್: ಮೊಜ್ತಬಾ ಖಮೇನಿ ಸಂಪರ್ಕಿಸುವುದು ಕಷ್ಟ; ಇರಾನ್ ಅಧ್ಯಕ್ಷರ ಬಹಿರಂಗ ಹೇಳಿಕೆ…!

error: Content is protected !!