ರಾಜ್ಯದ ೨೧೬ ತಾಲೂಕುಗಳಲ್ಲಿ ಭೀಕರ ಬರಗಾಲ ಆವರಿಸಿದೆ. ೩೬ ಲಕ್ಷ ಹೆಕ್ಟೇರ್ ಕೃಷಿ ಮತ್ತು ೩ ಲಕ್ಷ ಹೆಕ್ಟೇರ್ ತೋಟಗಾರಿಕೆ ಪ್ರದೇಶದಲ್ಲಿ ಬರಗಾಲದ ಛಾಯೆಯಿದೆ. ಒಟ್ಟಾರೆ ರಾಜ್ಯದಲ್ಲಿ ಸುಮಾರು ೩೩ ಸಾವಿರ ಕೋಟಿ ರೂ. ನಷ್ಟ ಅಂದಾಜಿಸಲಾಗಿದೆ.
ಇಷ್ಟೆಲ್ಲ ಆಗಿದ್ದರೂ ಸಿದ್ದರಾಮಯ್ಯ ಸರಕಾರ ಕೇವಲ ೩೨೦ ಕೋಟಿ ರೂ. ಮಾತ್ರ ಬಿಡುಗಡೆ ಮಾಡಿದೆ. ಸರಕಾರ ಒಂದು ವಾರದಲ್ಲಿ ಕನಿಷ್ಠ ೧೦ ಸಾವಿರ ಕೋಟಿ ರೂಪಾಯಿ ಪರಿಹಾರ ಬಿಡುಗಡೆ ಮಾಡಬೇಕು. ಇಲ್ಲದಿದ್ದರೆ ರಾಜ್ಯ ಬಿಜೆಪಿ ವಿಧಾನಸಭೆ ಮುತ್ತಿಗೆ ಚಳುವಳಿ ನಡೆಸಲಿದೆ ಎಂದು ವಿಧಾನಪರಿಷತ್ ಸದಸ್ಯರಾದ ಮಾಜಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಎಚ್ಚರಿಕೆ ನೀಡಿದ್ದಾರೆ. ಇವರು ಪುತ್ತೂರಿನ ಬಿಜೆಪಿ ಕಚೇರಿಯಲ್ಲಿ ಮಾತಾನಾಡಿ, ಪರಿಹಾರ ಹಣ ಬಿಡುಗಡೆ ಮಾಡಬೇಕಾದ ರಾಜ್ಯ ಸರಕಾರ ಕೇಂದ್ರವನ್ನು ದೂರುತ್ತಾ ಕೂತಿದೆ. ರಾಜ್ಯಕ್ಕೆ ಪರಿಹಾರ ನೀಡುವಂತೆ ಕೋರಿ ಪ್ರಧಾನಿಯವರ ಬಳಿ ಸರ್ವಪಕ್ಷ ನಿಯೋಗ ಕೊಂಡೊಯ್ಯಲಿ. ಪ್ರತಿಪಕ್ಷವಾಗಿ ನಾವು ಕೂಡ ಬರುತ್ತೇವೆ. ತನ್ನ ಜವಾಬ್ದಾರಿ ನಿರ್ವಹಣೆ ಮಾಡದೆ ಕೇಂದ್ರದತ್ತ ಬೊಟ್ಟು ಮಾಡುವುದು ಸರಿಯಲ್ಲ. ರಾಜ್ಯ ಬಿಜೆಪಿಯು ೧೭ ತಂಡಗಳನ್ನು ರಚಿಸಿ ೩೧ ಜಿಲ್ಲೆಗಳಲ್ಲೂ ಬರ ಸ್ಥಿತಿ ಅಧ್ಯಯನ ಮಾಡಿದೆ. ನಾವು ಅಧ್ಯಯನ ಆರಂಭಿಸಿದ ಮೇಲೆ ರಾಜ್ಯ ಸರಕಾರ ಒಂದಷ್ಟು ಪರಿಹಾರ ಬಿಡುಗಡೆ ಮಾಡಿದೆ. ಈಗಾಗಲೇ ರಾಜ್ಯದ ಅನೇಕ ಕಡೆ ಮಳೆಯ ಸೂಚನೆ ಸಿಕ್ಕಿದೆ. ಸರಕಾರ ತಕ್ಷಣ ರೈತರ ನೆರವಿಗೆ ಬಂದು ಬಿತ್ತನೆ ಬೀಜ ಮತ್ತಿತರ ಕಾರ್ಯಕ್ಕೆ ಸಹಕಾರ ನೀಡಬೇಕು. ೧೦ ಸಾವಿರ ಕೋಟಿ ಪರಿಹಾರ ಪ್ಯಾಕೇಜ್ ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿದ್ದಾರೆ. ಇನ್ನೂ ಈ ಸುದ್ದಿಗೋಷ್ಠಿಯಲ್ಲಿ ಬಿಜೆಪಿ ಪುತ್ತೂರು ಮಂಡಲ ಅಧ್ಯಕ್ಷರಾದ ಸಾಜ ರಾಧಾಕೃಷ್ಣ ಆಳ್ವಾ, ನಗರ ಮಂಡಲ ಅಧ್ಯಕ್ಷರಾದ ಪಿ.ಜಿ. ಜಗನ್ನಿವಾಸ ರಾವ್, ಜಿಲ್ಲಾ ಒಬಿಸಿ ಮೋರ್ಛಾ ಅಧ್ಯಕ್ಷರಾದ ಆರ್.ಸಿ. ನಾರಾಯಣ್, ಪುತ್ತೂರು ಮಂಡಲ ಕಾರ್ಯದರ್ಶಿಗಳಾದ ನಿತೀಶ್ ಕುಮಾರ್ ಶಾಂತಿವನ ಹಾಗೂ ಮತ್ತಿತರರು ಉಪಸ್ಥಿತರಿದ್ದರು.
ಇರಾನ್ನ ನೂತನ ಸುಪ್ರೀಂ ಲೀಡರ್ ಮೊಜ್ತಬಾ ಖಮೇನಿ ಅವರ ಆರೋಗ್ಯ ಹಾಗೂ ಅವರು ಎಲ್ಲಿದ್ದಾರೆ ಎಂಬ ಕುರಿತು ಜಾಗತಿಕ ಮಟ್ಟದಲ್ಲಿ…
ಥೈಲ್ಯಾಂಡ್ನ ರಾಜಧಾನಿ ಬ್ಯಾಂಕಾಕ್ ಸಮೀಪದ ಶಾಲೆಯೊಂದರಲ್ಲಿ 9ನೇ ತರಗತಿ ವಿದ್ಯಾರ್ಥಿಯೊಬ್ಬ ನಡೆಸಿದ ಗುಂಡಿನ ದಾಳಿಯಲ್ಲಿ ಶಿಕ್ಷಕರೊಬ್ಬರು ಮೃತಪಟ್ಟಿದ್ದು, ಕನಿಷ್ಠ 15…
ಮೂಡಬಿದ್ರೆಯ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಆಯೋಜಿಸಿರುವ ಆಳ್ವಾಸ್ ಪ್ರಗತಿ-2026 ಬೃಹತ್ ಉದ್ಯೋಗ ಮೇಳಕ್ಕೆ ತೆರಳಲು ಬಂಟ್ವಾಳದಿಂದ ಶುಕ್ರವಾರ ಎರಡು ಉಚಿತ…
ರಾಷ್ಟ್ರೀಯ ಹೆದ್ದಾರಿ 75ರ ಸುರಿಕುಮೇರು ಸಮೀಪದ ಹಿಂದೂಸ್ತಾನ್ ಪೆಟ್ರೋಲ್ ಬಂಕ್ ಬಳಿ ನಡೆದ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ಆರು…
ಬಿ.ಸಿ.ರೋಡ್ನ ಎನ್.ಜಿ. ಸರ್ಕಲ್ನಲ್ಲಿ ಗುರುವಾರ ಸಂಜೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಇಬ್ಬರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.…
ಕಳೆದ ಒಂದು ವಾರದಿಂದ ನ್ಯುಮೋನಿಯಾ ಜ್ವರದಿಂದ ಬಳಲುತ್ತಿದ್ದ ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವ ದುಃಖದ ಘಟನೆ ನಡೆದಿದೆ. ಮೃತ ವಿದ್ಯಾರ್ಥಿನಿಯನ್ನು…