ರಾಜ್ಯದ ೨೧೬ ತಾಲೂಕುಗಳಲ್ಲಿ ಭೀಕರ ಬರಗಾಲ ಆವರಿಸಿದೆ. ೩೬ ಲಕ್ಷ ಹೆಕ್ಟೇರ್ ಕೃಷಿ ಮತ್ತು ೩ ಲಕ್ಷ ಹೆಕ್ಟೇರ್ ತೋಟಗಾರಿಕೆ ಪ್ರದೇಶದಲ್ಲಿ ಬರಗಾಲದ ಛಾಯೆಯಿದೆ. ಒಟ್ಟಾರೆ ರಾಜ್ಯದಲ್ಲಿ ಸುಮಾರು ೩೩ ಸಾವಿರ ಕೋಟಿ ರೂ. ನಷ್ಟ ಅಂದಾಜಿಸಲಾಗಿದೆ.
ಇಷ್ಟೆಲ್ಲ ಆಗಿದ್ದರೂ ಸಿದ್ದರಾಮಯ್ಯ ಸರಕಾರ ಕೇವಲ ೩೨೦ ಕೋಟಿ ರೂ. ಮಾತ್ರ ಬಿಡುಗಡೆ ಮಾಡಿದೆ. ಸರಕಾರ ಒಂದು ವಾರದಲ್ಲಿ ಕನಿಷ್ಠ ೧೦ ಸಾವಿರ ಕೋಟಿ ರೂಪಾಯಿ ಪರಿಹಾರ ಬಿಡುಗಡೆ ಮಾಡಬೇಕು. ಇಲ್ಲದಿದ್ದರೆ ರಾಜ್ಯ ಬಿಜೆಪಿ ವಿಧಾನಸಭೆ ಮುತ್ತಿಗೆ ಚಳುವಳಿ ನಡೆಸಲಿದೆ ಎಂದು ವಿಧಾನಪರಿಷತ್ ಸದಸ್ಯರಾದ ಮಾಜಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಎಚ್ಚರಿಕೆ ನೀಡಿದ್ದಾರೆ. ಇವರು ಪುತ್ತೂರಿನ ಬಿಜೆಪಿ ಕಚೇರಿಯಲ್ಲಿ ಮಾತಾನಾಡಿ, ಪರಿಹಾರ ಹಣ ಬಿಡುಗಡೆ ಮಾಡಬೇಕಾದ ರಾಜ್ಯ ಸರಕಾರ ಕೇಂದ್ರವನ್ನು ದೂರುತ್ತಾ ಕೂತಿದೆ. ರಾಜ್ಯಕ್ಕೆ ಪರಿಹಾರ ನೀಡುವಂತೆ ಕೋರಿ ಪ್ರಧಾನಿಯವರ ಬಳಿ ಸರ್ವಪಕ್ಷ ನಿಯೋಗ ಕೊಂಡೊಯ್ಯಲಿ. ಪ್ರತಿಪಕ್ಷವಾಗಿ ನಾವು ಕೂಡ ಬರುತ್ತೇವೆ. ತನ್ನ ಜವಾಬ್ದಾರಿ ನಿರ್ವಹಣೆ ಮಾಡದೆ ಕೇಂದ್ರದತ್ತ ಬೊಟ್ಟು ಮಾಡುವುದು ಸರಿಯಲ್ಲ. ರಾಜ್ಯ ಬಿಜೆಪಿಯು ೧೭ ತಂಡಗಳನ್ನು ರಚಿಸಿ ೩೧ ಜಿಲ್ಲೆಗಳಲ್ಲೂ ಬರ ಸ್ಥಿತಿ ಅಧ್ಯಯನ ಮಾಡಿದೆ. ನಾವು ಅಧ್ಯಯನ ಆರಂಭಿಸಿದ ಮೇಲೆ ರಾಜ್ಯ ಸರಕಾರ ಒಂದಷ್ಟು ಪರಿಹಾರ ಬಿಡುಗಡೆ ಮಾಡಿದೆ. ಈಗಾಗಲೇ ರಾಜ್ಯದ ಅನೇಕ ಕಡೆ ಮಳೆಯ ಸೂಚನೆ ಸಿಕ್ಕಿದೆ. ಸರಕಾರ ತಕ್ಷಣ ರೈತರ ನೆರವಿಗೆ ಬಂದು ಬಿತ್ತನೆ ಬೀಜ ಮತ್ತಿತರ ಕಾರ್ಯಕ್ಕೆ ಸಹಕಾರ ನೀಡಬೇಕು. ೧೦ ಸಾವಿರ ಕೋಟಿ ಪರಿಹಾರ ಪ್ಯಾಕೇಜ್ ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿದ್ದಾರೆ. ಇನ್ನೂ ಈ ಸುದ್ದಿಗೋಷ್ಠಿಯಲ್ಲಿ ಬಿಜೆಪಿ ಪುತ್ತೂರು ಮಂಡಲ ಅಧ್ಯಕ್ಷರಾದ ಸಾಜ ರಾಧಾಕೃಷ್ಣ ಆಳ್ವಾ, ನಗರ ಮಂಡಲ ಅಧ್ಯಕ್ಷರಾದ ಪಿ.ಜಿ. ಜಗನ್ನಿವಾಸ ರಾವ್, ಜಿಲ್ಲಾ ಒಬಿಸಿ ಮೋರ್ಛಾ ಅಧ್ಯಕ್ಷರಾದ ಆರ್.ಸಿ. ನಾರಾಯಣ್, ಪುತ್ತೂರು ಮಂಡಲ ಕಾರ್ಯದರ್ಶಿಗಳಾದ ನಿತೀಶ್ ಕುಮಾರ್ ಶಾಂತಿವನ ಹಾಗೂ ಮತ್ತಿತರರು ಉಪಸ್ಥಿತರಿದ್ದರು.
ಹೆಬ್ರಿ ಸಮೀಪದ ಹೊಸೂರು ಎಂಬಲ್ಲಿ ಇಸ್ಪೀಟ್ ಜೂಜಾಟ ನಡೆಸುತ್ತಿದ್ದ ಆರೋಪದಲ್ಲಿ ಏಳು ಮಂದಿಯನ್ನು ಹೆಬ್ರಿ ಪೊಲೀಸರು ಬಂಧಿಸಿದ್ದಾರೆ. ಜೂಜಾಟ ನಡೆಯುತ್ತಿರುವ…
ಮಚ್ಚಿನ ಗ್ರಾಮ ಪಾಳ್ಯರ ಎಂಬಲ್ಲಿ ಪಿಕಪ್ ವಾಹನ ಹಾಗೂ ಸ್ಕೂಟರ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಸವಾರರಿಬ್ಬರು ಚಿಕಿತ್ಸೆ…
ಗೋವನ್ನು ರಾಷ್ಟ್ರೀಯ ಪ್ರಾಣಿಯಾಗಿ ಘೋಷಿಸಿ, ದೇಶಾದ್ಯಂತ ಗೋಹತ್ಯೆ ಹಾಗೂ ಗೋಮಾಂಸ ರಫ್ತನ್ನು ಸಂಪೂರ್ಣವಾಗಿ ನಿಷೇಧಿಸುವ ಕಾನೂನು ಜಾರಿಗೊಳಿಸಬೇಕು ಎಂದು ಮುಸ್ಲಿಂ…
ಕಂಟೇನರ್ ಲಾರಿ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟ ಘಟನೆ ಕೋಟೇಶ್ವರ ಹಾಲಾಡಿ…
ಎ. 4 2026ರಂದು ಪುಂಜಾಲಕಟ್ಟೆ ಠಾಣಾ ವ್ಯಾಪ್ತಿಯ ಮನೆಯಲ್ಲಿ ನಡೆದ ಚಿನ್ನಾಭರಣ ಮತ್ತು ನಗದು ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ದಾಖಲಾಗಿದ್ದ…
ರಾಜಕೀಯ ಹಾಗೂ ಚುನಾವಣಾ ತಂತ್ರಗಾರಿಕೆಯಲ್ಲಿ ಗುರುತಿಸಿಕೊಂಡಿರುವ ಸುನಿಲ್ ಕಾನುಗೋಲು ಅವರನ್ನು ಕರ್ನಾಟಕದ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಅವರ ಮುಖ್ಯ…