ಪುರಸಭಾ ವ್ಯಾಪ್ತಿಯ ಬಿ.ಸಿ.ರೋಡಿನ ನಗರ ಪ್ರದೇಶದಲ್ಲಿ ಹಾದು ಹೋಗುವ ಕಾಂಕ್ರೀಟ್ ರಸ್ತೆಯೊಂದು ಅವೈಜ್ಞಾನಿಕತೆಯಿಂದ ಕೂಡಿದ್ದು, ರಸ್ತೆಯನ್ನು ಸರಿಪಡಿಸಿಕೊಡುವಂತೆ ಪುರಸಭಾ ಮುಖ್ಯಾಧಿಕಾರಿಗೆ ಬಂಟ್ವಾಳ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿ ಬಿಂದಿಯಾ ನಾಯಕ್ ಅವರು ಮನವಿ ಮಾಡಿದ್ದಾರೆ.
ಬಿ.ಸಿ.ರೋಡಿನ ಖಾಸಗಿ ಬಸ್ ನಿಲ್ದಾಣದ ಸಮೀಪ ಸರ್ವೀಸ್ ರಸ್ತೆಯಿಂದ ಹಾದುಹೋಗುವ ವಿವೇಕ ನಗರ ರಸ್ತೆಯಲ್ಲಿ ಹತ್ತಾರು ಮನೆಗಳಿವೆ, ಜೊತೆಗೆ ಮಕ್ಕಳ ಆಸ್ಪತ್ರೆಗಳಿವೆ. ಹೀಗಿರುವಾಗ ರಸ್ತೆಯಲ್ಲಿ ಗುಂಡಿ ಬಿದ್ದ ಕಾರಣದಿಂದ ವಾಹನ ಸವಾರರಿಗೆ ಸಾಕಷ್ಟು ತೊಂದರೆಯಾಗುತ್ತಿದೆ. ಅದಲ್ಲದೇ ವಿವೇಕ ನಗರ ರಸ್ತೆಗೆ ಪ್ರವೇಶ ಮಾಡುವ ರಸ್ತೆಯಲ್ಲಿ ಖಾಸಗಿ ವ್ಯಕ್ತಿಯೋರ್ವರು ನೀರಿನ ಪೈಪ್ ಅಳವಡಿಕೆ ಮಾಡಿರುವ ಹಿನ್ನೆಲೆಯಲ್ಲಿ ಕಾಂಕ್ರೀಟ್ ರಸ್ತೆಯನ್ನು ಅಗೆದು ಹಾಕಿದ್ದಾರೆ. ಬಳಿಕ ಅ ಗುಂಡಿಯನ್ನು ಮುಚ್ಚಿಲ್ಲ ಎಂದು ಆರೋಪಿಸಿದ್ದಾರೆ.
ಹೆಬ್ರಿ ಸಮೀಪದ ಹೊಸೂರು ಎಂಬಲ್ಲಿ ಇಸ್ಪೀಟ್ ಜೂಜಾಟ ನಡೆಸುತ್ತಿದ್ದ ಆರೋಪದಲ್ಲಿ ಏಳು ಮಂದಿಯನ್ನು ಹೆಬ್ರಿ ಪೊಲೀಸರು ಬಂಧಿಸಿದ್ದಾರೆ. ಜೂಜಾಟ ನಡೆಯುತ್ತಿರುವ…
ಮಚ್ಚಿನ ಗ್ರಾಮ ಪಾಳ್ಯರ ಎಂಬಲ್ಲಿ ಪಿಕಪ್ ವಾಹನ ಹಾಗೂ ಸ್ಕೂಟರ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಸವಾರರಿಬ್ಬರು ಚಿಕಿತ್ಸೆ…
ಗೋವನ್ನು ರಾಷ್ಟ್ರೀಯ ಪ್ರಾಣಿಯಾಗಿ ಘೋಷಿಸಿ, ದೇಶಾದ್ಯಂತ ಗೋಹತ್ಯೆ ಹಾಗೂ ಗೋಮಾಂಸ ರಫ್ತನ್ನು ಸಂಪೂರ್ಣವಾಗಿ ನಿಷೇಧಿಸುವ ಕಾನೂನು ಜಾರಿಗೊಳಿಸಬೇಕು ಎಂದು ಮುಸ್ಲಿಂ…
ಕಂಟೇನರ್ ಲಾರಿ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟ ಘಟನೆ ಕೋಟೇಶ್ವರ ಹಾಲಾಡಿ…
ಎ. 4 2026ರಂದು ಪುಂಜಾಲಕಟ್ಟೆ ಠಾಣಾ ವ್ಯಾಪ್ತಿಯ ಮನೆಯಲ್ಲಿ ನಡೆದ ಚಿನ್ನಾಭರಣ ಮತ್ತು ನಗದು ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ದಾಖಲಾಗಿದ್ದ…
ರಾಜಕೀಯ ಹಾಗೂ ಚುನಾವಣಾ ತಂತ್ರಗಾರಿಕೆಯಲ್ಲಿ ಗುರುತಿಸಿಕೊಂಡಿರುವ ಸುನಿಲ್ ಕಾನುಗೋಲು ಅವರನ್ನು ಕರ್ನಾಟಕದ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಅವರ ಮುಖ್ಯ…