ಮೂಡುಬಿದಿರೆ: ನಿಡೋಡಿಯಿಂದ ಕಟೀಲು ಕಡೆಗೆಕಲ್ಲು ಹೇರಿಕೊಂಡು ಹೋಗುತ್ತಿದ್ದ ಟಿಪ್ಪರೊಂದು ಚಾಲಕನ ನಿಯಂತ್ರಣ ತಪ್ಪಿ ಹೊಂಡಕ್ಕೆ ಬಿದ್ದ ಪರಿಣಾಮವಾಗಿ ಟಿಪ್ಪರ್ ಚಾಲಕ, ಮೂಡುಬಿದಿರೆ ತಾಲೂಕು ಪಾಲಡ್ಕದ ನಿವಾಸಿ ವಿಶ್ವನಾಥ ನಾಯಕ್ ಮೃತಪಟ್ಟಿದ್ದಾರೆ.
ಶುಂಠಿಲ ಪದವು ಕಡೆಯಿಂದ ಕೆಂಪುಕಲ್ಲು ಹೇರಿಕೊಂಡು ಕಟೀಲು ಕಡೆಗೆ ಬರುತ್ತಿದ್ದಾಗ ಸೌಂದರ್ಯ ರೆಸಾರ್ಟ್ ಚಡಾವು ಬಳಿ ದೊಡ್ಡ ಹೊಂಡಕ್ಕೆ ಟಿಪ್ಪರ್ ಬಿದ್ದಿದೆ ಈ ಸಂದರ್ಭ ಚಾಲಕ ವಿಶ್ವನಾಥ ಟಿಪ್ಪರ್ ನ ಒಳಗಡೆ ಸಿಲುಕಿಕೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ.ಮೂಡುಬಿದಿರೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಬಡಕುಟುಂಬದವರಾಗಿರುವ ವಿಶ್ವನಾಥ ನಾಯಕ್ ಅವರ ಕುಟುಂಬದ ಜೀವನವು ಅವರ ದುಡಿಮೆಯಿಂದಲೇ ನಡೆಯುತ್ತಿತ್ತು. ಪತ್ನಿ ಮತ್ತು ಪುಟ್ಟ ಪುಟ್ಟ ಇಬ್ಬರು ಹೆಣ್ಣು ಮಕ್ಕಳಿದ್ದು ಇವರ ಮುಂದಿನ ಜೀವನಕ್ಕೆ ಕಷ್ಟ ಸಾಧ್ಯವಾಗಿದೆ.
ಹೆಬ್ರಿ ಸಮೀಪದ ಹೊಸೂರು ಎಂಬಲ್ಲಿ ಇಸ್ಪೀಟ್ ಜೂಜಾಟ ನಡೆಸುತ್ತಿದ್ದ ಆರೋಪದಲ್ಲಿ ಏಳು ಮಂದಿಯನ್ನು ಹೆಬ್ರಿ ಪೊಲೀಸರು ಬಂಧಿಸಿದ್ದಾರೆ. ಜೂಜಾಟ ನಡೆಯುತ್ತಿರುವ…
ಮಚ್ಚಿನ ಗ್ರಾಮ ಪಾಳ್ಯರ ಎಂಬಲ್ಲಿ ಪಿಕಪ್ ವಾಹನ ಹಾಗೂ ಸ್ಕೂಟರ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಸವಾರರಿಬ್ಬರು ಚಿಕಿತ್ಸೆ…
ಗೋವನ್ನು ರಾಷ್ಟ್ರೀಯ ಪ್ರಾಣಿಯಾಗಿ ಘೋಷಿಸಿ, ದೇಶಾದ್ಯಂತ ಗೋಹತ್ಯೆ ಹಾಗೂ ಗೋಮಾಂಸ ರಫ್ತನ್ನು ಸಂಪೂರ್ಣವಾಗಿ ನಿಷೇಧಿಸುವ ಕಾನೂನು ಜಾರಿಗೊಳಿಸಬೇಕು ಎಂದು ಮುಸ್ಲಿಂ…
ಕಂಟೇನರ್ ಲಾರಿ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟ ಘಟನೆ ಕೋಟೇಶ್ವರ ಹಾಲಾಡಿ…
ಎ. 4 2026ರಂದು ಪುಂಜಾಲಕಟ್ಟೆ ಠಾಣಾ ವ್ಯಾಪ್ತಿಯ ಮನೆಯಲ್ಲಿ ನಡೆದ ಚಿನ್ನಾಭರಣ ಮತ್ತು ನಗದು ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ದಾಖಲಾಗಿದ್ದ…
ರಾಜಕೀಯ ಹಾಗೂ ಚುನಾವಣಾ ತಂತ್ರಗಾರಿಕೆಯಲ್ಲಿ ಗುರುತಿಸಿಕೊಂಡಿರುವ ಸುನಿಲ್ ಕಾನುಗೋಲು ಅವರನ್ನು ಕರ್ನಾಟಕದ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಅವರ ಮುಖ್ಯ…