ಮೂಡುಬಿದಿರೆ: ನಿಡೋಡಿಯಿಂದ ಕಟೀಲು ಕಡೆಗೆಕಲ್ಲು ಹೇರಿಕೊಂಡು ಹೋಗುತ್ತಿದ್ದ ಟಿಪ್ಪರೊಂದು ಚಾಲಕನ ನಿಯಂತ್ರಣ ತಪ್ಪಿ ಹೊಂಡಕ್ಕೆ ಬಿದ್ದ ಪರಿಣಾಮವಾಗಿ ಟಿಪ್ಪರ್ ಚಾಲಕ, ಮೂಡುಬಿದಿರೆ ತಾಲೂಕು ಪಾಲಡ್ಕದ ನಿವಾಸಿ ವಿಶ್ವನಾಥ ನಾಯಕ್ ಮೃತಪಟ್ಟಿದ್ದಾರೆ.
ಶುಂಠಿಲ ಪದವು ಕಡೆಯಿಂದ ಕೆಂಪುಕಲ್ಲು ಹೇರಿಕೊಂಡು ಕಟೀಲು ಕಡೆಗೆ ಬರುತ್ತಿದ್ದಾಗ ಸೌಂದರ್ಯ ರೆಸಾರ್ಟ್ ಚಡಾವು ಬಳಿ ದೊಡ್ಡ ಹೊಂಡಕ್ಕೆ ಟಿಪ್ಪರ್ ಬಿದ್ದಿದೆ ಈ ಸಂದರ್ಭ ಚಾಲಕ ವಿಶ್ವನಾಥ ಟಿಪ್ಪರ್ ನ ಒಳಗಡೆ ಸಿಲುಕಿಕೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ.ಮೂಡುಬಿದಿರೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಬಡಕುಟುಂಬದವರಾಗಿರುವ ವಿಶ್ವನಾಥ ನಾಯಕ್ ಅವರ ಕುಟುಂಬದ ಜೀವನವು ಅವರ ದುಡಿಮೆಯಿಂದಲೇ ನಡೆಯುತ್ತಿತ್ತು. ಪತ್ನಿ ಮತ್ತು ಪುಟ್ಟ ಪುಟ್ಟ ಇಬ್ಬರು ಹೆಣ್ಣು ಮಕ್ಕಳಿದ್ದು ಇವರ ಮುಂದಿನ ಜೀವನಕ್ಕೆ ಕಷ್ಟ ಸಾಧ್ಯವಾಗಿದೆ.
ಇರಾನ್ನ ನೂತನ ಸುಪ್ರೀಂ ಲೀಡರ್ ಮೊಜ್ತಬಾ ಖಮೇನಿ ಅವರ ಆರೋಗ್ಯ ಹಾಗೂ ಅವರು ಎಲ್ಲಿದ್ದಾರೆ ಎಂಬ ಕುರಿತು ಜಾಗತಿಕ ಮಟ್ಟದಲ್ಲಿ…
ಥೈಲ್ಯಾಂಡ್ನ ರಾಜಧಾನಿ ಬ್ಯಾಂಕಾಕ್ ಸಮೀಪದ ಶಾಲೆಯೊಂದರಲ್ಲಿ 9ನೇ ತರಗತಿ ವಿದ್ಯಾರ್ಥಿಯೊಬ್ಬ ನಡೆಸಿದ ಗುಂಡಿನ ದಾಳಿಯಲ್ಲಿ ಶಿಕ್ಷಕರೊಬ್ಬರು ಮೃತಪಟ್ಟಿದ್ದು, ಕನಿಷ್ಠ 15…
ಮೂಡಬಿದ್ರೆಯ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಆಯೋಜಿಸಿರುವ ಆಳ್ವಾಸ್ ಪ್ರಗತಿ-2026 ಬೃಹತ್ ಉದ್ಯೋಗ ಮೇಳಕ್ಕೆ ತೆರಳಲು ಬಂಟ್ವಾಳದಿಂದ ಶುಕ್ರವಾರ ಎರಡು ಉಚಿತ…
ರಾಷ್ಟ್ರೀಯ ಹೆದ್ದಾರಿ 75ರ ಸುರಿಕುಮೇರು ಸಮೀಪದ ಹಿಂದೂಸ್ತಾನ್ ಪೆಟ್ರೋಲ್ ಬಂಕ್ ಬಳಿ ನಡೆದ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ಆರು…
ಬಿ.ಸಿ.ರೋಡ್ನ ಎನ್.ಜಿ. ಸರ್ಕಲ್ನಲ್ಲಿ ಗುರುವಾರ ಸಂಜೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಇಬ್ಬರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.…
ಕಳೆದ ಒಂದು ವಾರದಿಂದ ನ್ಯುಮೋನಿಯಾ ಜ್ವರದಿಂದ ಬಳಲುತ್ತಿದ್ದ ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವ ದುಃಖದ ಘಟನೆ ನಡೆದಿದೆ. ಮೃತ ವಿದ್ಯಾರ್ಥಿನಿಯನ್ನು…