ಕೋಟಿ ಚೆನ್ನಯ ಜೊಡುಕರೆ ಕಂಬಳ ಸಮಿತಿಯ ವತಿಯಿಂದ ಡಿ.೧೭ ಮತ್ತು ೧೮ ರಂದು ನಡೆಯಲಿರುವ ಮೂಡುಬಿದಿರೆ ಕಂಬಳದ ಕುರಿತು ಸಮಾಲೋಚನಾ ಸಭೆಯು ಸೃಷ್ಠಿ ಗಾರ್ಡನ್ನಲ್ಲಿ ನಡೆಯಿತು. ಈ ವೇಳೆ ಕಂಬಳ ಸಮಿತಿಯ ಅಧ್ಯಕ್ಷರಾದ ಶಾಸಕ ಉಮಾನಾಥ ಕೋಟ್ಯಾನ್ರವರು ಮಾತಾನಾಡಿ, ಅವಿಭಜಿತ ದ.ಕ ಜಿಲ್ಲೆಯಲ್ಲಿ ಅತೀ ಹೆಚ್ಚು ಕೋಣಗಳು ಭಾಗವಹಿಸುವ ಕಂಬಳ ಇದಾಗಿದ್ದು, ಶಿಸ್ತು ಅಚ್ಚುಕಟ್ಟು ಮತ್ತು ಸಮಯ ಪರಿಪಾಲನೆಗೆ ಹೆಸರಾಗಿದೆ.
ಈ ಗೌರವವನ್ನು ಮುಂದಿನ ಕಂಬಳಗಳಲ್ಲಿಯೂ ಉಳಿಸಿಕೊಳ್ಳಬೇಕು. ಹಿಂದಿನ ಕಂಬಳದ ಸಮಯದಲ್ಲಿ ತಾವು ಯಾರ ಬಳಿಯೂ ಧನದ ಸಹಕಾರವನ್ನು ಕೇಳಿಲ್ಲ. ಈ ಬಾರಿ ಕಂಬಳವು ವೈಭವಯುತವಾಗಿ ನಡೆಯಲು ಎಲ್ಲರೂ ಸಹಕಾರ ನೀಡುವಂತೆ ಮನವಿ ಮಾಡಿಕೊಂಡಿದ್ದಾರೆ. ಈ ಸಂದರ್ಬದಲ್ಲಿ ಜಿಲ್ಲಾ ಕಂಬಳ ಸಮಿತಿಯ ಮಾಜಿ ಅಧ್ಯಕ್ಷರಾದ ಭಾಸ್ಕರ್ ಎಸ್. ಕೋಟ್ಯಾನ್, ಕೆಎಂಎಫ್ ಅಧ್ಯಕ್ಷರಾದ ಕೆಪಿ ಸುಚರಿತ ಶೆಟ್ಟಿ, ಕಂಬಳ ಸಮಿತಿಯ ಕಾರ್ಯದರ್ಶಿಯಾದ ರಂಜಿತ್ ಪೂಜಾರಿ, ಬಿಜೆಪಿ ಮುಖಂಡರಾದ ಕೆ.ಪಿ ಜಗದೀಶ, ಅಧಿಕಾರಿಯಾದ ಸುನಿಲ್ ಆಳ್ವ, ಈಶ್ವರ ಕಟೀಲು, ನಾಗರಾಜ ಪೂಜಾರಿ, ನ್ಯಾಯವಾದಿ ಶಾಂತಿಪ್ರಸಾದ್ ಹೆಗ್ಡೆ, ವಲಯ ಅರಣ್ಯಾಧಿಕಾರಿ ಹೇಮಗಿರಿ ಅಂಗಡಿ, ಜಿಲ್ಲಾ ಕಂಬಳ ಸಮಿತಿಯ ತೀರ್ಪುಗಾರ ವಿಜಯಕುಮಾರ್ ಕಂಗಿನಮನೆ ಮತ್ತಿತರರು ಉಪಸ್ಥಿತರಿದ್ದರು.
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…
ಸಮಾಜದಲ್ಲಿ ಒಡಕುಂಟು ಮಾಡಿ, ದ್ವೇಷವನ್ನು ಬಿತ್ತುವ ಹಾಗೂ ಶಾಂತಿಯನ್ನು ಕದಡಲು ಪ್ರಚೋದನಾತ್ಮಕ ಭಾಷಣವನ್ನು ಯಾರು ಮಾಡಿದರೂ, ಅವರ ಮೇಲೆ ಪ್ರಕರಣ…
ಕರಾವಳಿಯ ಗಂಡುಕಲೆ ಎಂದೇ ಪ್ರಸಿದ್ಧ ಪಡೆದಿರುವ ಯಕ್ಷಗಾನ ಉತ್ತರ ಪ್ರದೇಶದ ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ ಪ್ರಪ್ರಥಮ ಬಾರಿಗೆ ಪ್ರದರ್ಶನವಾಗಿದೆ.…
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…