ಕೋಟಿ ಚೆನ್ನಯ ಜೊಡುಕರೆ ಕಂಬಳ ಸಮಿತಿಯ ವತಿಯಿಂದ ಡಿ.೧೭ ಮತ್ತು ೧೮ ರಂದು ನಡೆಯಲಿರುವ ಮೂಡುಬಿದಿರೆ ಕಂಬಳದ ಕುರಿತು ಸಮಾಲೋಚನಾ ಸಭೆಯು ಸೃಷ್ಠಿ ಗಾರ್ಡನ್ನಲ್ಲಿ ನಡೆಯಿತು. ಈ ವೇಳೆ ಕಂಬಳ ಸಮಿತಿಯ ಅಧ್ಯಕ್ಷರಾದ ಶಾಸಕ ಉಮಾನಾಥ ಕೋಟ್ಯಾನ್ರವರು ಮಾತಾನಾಡಿ, ಅವಿಭಜಿತ ದ.ಕ ಜಿಲ್ಲೆಯಲ್ಲಿ ಅತೀ ಹೆಚ್ಚು ಕೋಣಗಳು ಭಾಗವಹಿಸುವ ಕಂಬಳ ಇದಾಗಿದ್ದು, ಶಿಸ್ತು ಅಚ್ಚುಕಟ್ಟು ಮತ್ತು ಸಮಯ ಪರಿಪಾಲನೆಗೆ ಹೆಸರಾಗಿದೆ.
ಈ ಗೌರವವನ್ನು ಮುಂದಿನ ಕಂಬಳಗಳಲ್ಲಿಯೂ ಉಳಿಸಿಕೊಳ್ಳಬೇಕು. ಹಿಂದಿನ ಕಂಬಳದ ಸಮಯದಲ್ಲಿ ತಾವು ಯಾರ ಬಳಿಯೂ ಧನದ ಸಹಕಾರವನ್ನು ಕೇಳಿಲ್ಲ. ಈ ಬಾರಿ ಕಂಬಳವು ವೈಭವಯುತವಾಗಿ ನಡೆಯಲು ಎಲ್ಲರೂ ಸಹಕಾರ ನೀಡುವಂತೆ ಮನವಿ ಮಾಡಿಕೊಂಡಿದ್ದಾರೆ. ಈ ಸಂದರ್ಬದಲ್ಲಿ ಜಿಲ್ಲಾ ಕಂಬಳ ಸಮಿತಿಯ ಮಾಜಿ ಅಧ್ಯಕ್ಷರಾದ ಭಾಸ್ಕರ್ ಎಸ್. ಕೋಟ್ಯಾನ್, ಕೆಎಂಎಫ್ ಅಧ್ಯಕ್ಷರಾದ ಕೆಪಿ ಸುಚರಿತ ಶೆಟ್ಟಿ, ಕಂಬಳ ಸಮಿತಿಯ ಕಾರ್ಯದರ್ಶಿಯಾದ ರಂಜಿತ್ ಪೂಜಾರಿ, ಬಿಜೆಪಿ ಮುಖಂಡರಾದ ಕೆ.ಪಿ ಜಗದೀಶ, ಅಧಿಕಾರಿಯಾದ ಸುನಿಲ್ ಆಳ್ವ, ಈಶ್ವರ ಕಟೀಲು, ನಾಗರಾಜ ಪೂಜಾರಿ, ನ್ಯಾಯವಾದಿ ಶಾಂತಿಪ್ರಸಾದ್ ಹೆಗ್ಡೆ, ವಲಯ ಅರಣ್ಯಾಧಿಕಾರಿ ಹೇಮಗಿರಿ ಅಂಗಡಿ, ಜಿಲ್ಲಾ ಕಂಬಳ ಸಮಿತಿಯ ತೀರ್ಪುಗಾರ ವಿಜಯಕುಮಾರ್ ಕಂಗಿನಮನೆ ಮತ್ತಿತರರು ಉಪಸ್ಥಿತರಿದ್ದರು.
ಹೆಬ್ರಿ ಸಮೀಪದ ಹೊಸೂರು ಎಂಬಲ್ಲಿ ಇಸ್ಪೀಟ್ ಜೂಜಾಟ ನಡೆಸುತ್ತಿದ್ದ ಆರೋಪದಲ್ಲಿ ಏಳು ಮಂದಿಯನ್ನು ಹೆಬ್ರಿ ಪೊಲೀಸರು ಬಂಧಿಸಿದ್ದಾರೆ. ಜೂಜಾಟ ನಡೆಯುತ್ತಿರುವ…
ಮಚ್ಚಿನ ಗ್ರಾಮ ಪಾಳ್ಯರ ಎಂಬಲ್ಲಿ ಪಿಕಪ್ ವಾಹನ ಹಾಗೂ ಸ್ಕೂಟರ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಸವಾರರಿಬ್ಬರು ಚಿಕಿತ್ಸೆ…
ಗೋವನ್ನು ರಾಷ್ಟ್ರೀಯ ಪ್ರಾಣಿಯಾಗಿ ಘೋಷಿಸಿ, ದೇಶಾದ್ಯಂತ ಗೋಹತ್ಯೆ ಹಾಗೂ ಗೋಮಾಂಸ ರಫ್ತನ್ನು ಸಂಪೂರ್ಣವಾಗಿ ನಿಷೇಧಿಸುವ ಕಾನೂನು ಜಾರಿಗೊಳಿಸಬೇಕು ಎಂದು ಮುಸ್ಲಿಂ…
ಕಂಟೇನರ್ ಲಾರಿ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟ ಘಟನೆ ಕೋಟೇಶ್ವರ ಹಾಲಾಡಿ…
ಎ. 4 2026ರಂದು ಪುಂಜಾಲಕಟ್ಟೆ ಠಾಣಾ ವ್ಯಾಪ್ತಿಯ ಮನೆಯಲ್ಲಿ ನಡೆದ ಚಿನ್ನಾಭರಣ ಮತ್ತು ನಗದು ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ದಾಖಲಾಗಿದ್ದ…
ರಾಜಕೀಯ ಹಾಗೂ ಚುನಾವಣಾ ತಂತ್ರಗಾರಿಕೆಯಲ್ಲಿ ಗುರುತಿಸಿಕೊಂಡಿರುವ ಸುನಿಲ್ ಕಾನುಗೋಲು ಅವರನ್ನು ಕರ್ನಾಟಕದ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಅವರ ಮುಖ್ಯ…