ಕೋಟಿ ಚೆನ್ನಯ ಜೊಡುಕರೆ ಕಂಬಳ ಸಮಿತಿಯ ವತಿಯಿಂದ ಡಿ.೧೭ ಮತ್ತು ೧೮ ರಂದು ನಡೆಯಲಿರುವ ಮೂಡುಬಿದಿರೆ ಕಂಬಳದ ಕುರಿತು ಸಮಾಲೋಚನಾ ಸಭೆಯು ಸೃಷ್ಠಿ ಗಾರ್ಡನ್ನಲ್ಲಿ ನಡೆಯಿತು. ಈ ವೇಳೆ ಕಂಬಳ ಸಮಿತಿಯ ಅಧ್ಯಕ್ಷರಾದ ಶಾಸಕ ಉಮಾನಾಥ ಕೋಟ್ಯಾನ್ರವರು ಮಾತಾನಾಡಿ, ಅವಿಭಜಿತ ದ.ಕ ಜಿಲ್ಲೆಯಲ್ಲಿ ಅತೀ ಹೆಚ್ಚು ಕೋಣಗಳು ಭಾಗವಹಿಸುವ ಕಂಬಳ ಇದಾಗಿದ್ದು, ಶಿಸ್ತು ಅಚ್ಚುಕಟ್ಟು ಮತ್ತು ಸಮಯ ಪರಿಪಾಲನೆಗೆ ಹೆಸರಾಗಿದೆ.
ಈ ಗೌರವವನ್ನು ಮುಂದಿನ ಕಂಬಳಗಳಲ್ಲಿಯೂ ಉಳಿಸಿಕೊಳ್ಳಬೇಕು. ಹಿಂದಿನ ಕಂಬಳದ ಸಮಯದಲ್ಲಿ ತಾವು ಯಾರ ಬಳಿಯೂ ಧನದ ಸಹಕಾರವನ್ನು ಕೇಳಿಲ್ಲ. ಈ ಬಾರಿ ಕಂಬಳವು ವೈಭವಯುತವಾಗಿ ನಡೆಯಲು ಎಲ್ಲರೂ ಸಹಕಾರ ನೀಡುವಂತೆ ಮನವಿ ಮಾಡಿಕೊಂಡಿದ್ದಾರೆ. ಈ ಸಂದರ್ಬದಲ್ಲಿ ಜಿಲ್ಲಾ ಕಂಬಳ ಸಮಿತಿಯ ಮಾಜಿ ಅಧ್ಯಕ್ಷರಾದ ಭಾಸ್ಕರ್ ಎಸ್. ಕೋಟ್ಯಾನ್, ಕೆಎಂಎಫ್ ಅಧ್ಯಕ್ಷರಾದ ಕೆಪಿ ಸುಚರಿತ ಶೆಟ್ಟಿ, ಕಂಬಳ ಸಮಿತಿಯ ಕಾರ್ಯದರ್ಶಿಯಾದ ರಂಜಿತ್ ಪೂಜಾರಿ, ಬಿಜೆಪಿ ಮುಖಂಡರಾದ ಕೆ.ಪಿ ಜಗದೀಶ, ಅಧಿಕಾರಿಯಾದ ಸುನಿಲ್ ಆಳ್ವ, ಈಶ್ವರ ಕಟೀಲು, ನಾಗರಾಜ ಪೂಜಾರಿ, ನ್ಯಾಯವಾದಿ ಶಾಂತಿಪ್ರಸಾದ್ ಹೆಗ್ಡೆ, ವಲಯ ಅರಣ್ಯಾಧಿಕಾರಿ ಹೇಮಗಿರಿ ಅಂಗಡಿ, ಜಿಲ್ಲಾ ಕಂಬಳ ಸಮಿತಿಯ ತೀರ್ಪುಗಾರ ವಿಜಯಕುಮಾರ್ ಕಂಗಿನಮನೆ ಮತ್ತಿತರರು ಉಪಸ್ಥಿತರಿದ್ದರು.
ಇರಾನ್ನ ನೂತನ ಸುಪ್ರೀಂ ಲೀಡರ್ ಮೊಜ್ತಬಾ ಖಮೇನಿ ಅವರ ಆರೋಗ್ಯ ಹಾಗೂ ಅವರು ಎಲ್ಲಿದ್ದಾರೆ ಎಂಬ ಕುರಿತು ಜಾಗತಿಕ ಮಟ್ಟದಲ್ಲಿ…
ಥೈಲ್ಯಾಂಡ್ನ ರಾಜಧಾನಿ ಬ್ಯಾಂಕಾಕ್ ಸಮೀಪದ ಶಾಲೆಯೊಂದರಲ್ಲಿ 9ನೇ ತರಗತಿ ವಿದ್ಯಾರ್ಥಿಯೊಬ್ಬ ನಡೆಸಿದ ಗುಂಡಿನ ದಾಳಿಯಲ್ಲಿ ಶಿಕ್ಷಕರೊಬ್ಬರು ಮೃತಪಟ್ಟಿದ್ದು, ಕನಿಷ್ಠ 15…
ಮೂಡಬಿದ್ರೆಯ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಆಯೋಜಿಸಿರುವ ಆಳ್ವಾಸ್ ಪ್ರಗತಿ-2026 ಬೃಹತ್ ಉದ್ಯೋಗ ಮೇಳಕ್ಕೆ ತೆರಳಲು ಬಂಟ್ವಾಳದಿಂದ ಶುಕ್ರವಾರ ಎರಡು ಉಚಿತ…
ರಾಷ್ಟ್ರೀಯ ಹೆದ್ದಾರಿ 75ರ ಸುರಿಕುಮೇರು ಸಮೀಪದ ಹಿಂದೂಸ್ತಾನ್ ಪೆಟ್ರೋಲ್ ಬಂಕ್ ಬಳಿ ನಡೆದ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ಆರು…
ಬಿ.ಸಿ.ರೋಡ್ನ ಎನ್.ಜಿ. ಸರ್ಕಲ್ನಲ್ಲಿ ಗುರುವಾರ ಸಂಜೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಇಬ್ಬರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.…
ಕಳೆದ ಒಂದು ವಾರದಿಂದ ನ್ಯುಮೋನಿಯಾ ಜ್ವರದಿಂದ ಬಳಲುತ್ತಿದ್ದ ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವ ದುಃಖದ ಘಟನೆ ನಡೆದಿದೆ. ಮೃತ ವಿದ್ಯಾರ್ಥಿನಿಯನ್ನು…