ಮೂಡುಬಿದಿರೆ: ಮಹಿಳೆಯರಿಗೆ ಸಮಾನತೆ ನೀಡುವ ದೇಶ ಪ್ರಗತಿಯ ಪಥದಲ್ಲಿ ಸಾಗುತ್ತದೆ ಎಂದು ಬೆಂಗಳೂರಿನ ವೈದ್ಯೆ ಹಾಗೂ ಸಾಹಿತಿ ಡಾ. ವಸುಂಧರಾ ಭೂಪತಿ ಹೇಳಿದರು.
ಆಳ್ವಾಸ್ ಪದವಿ ಪೂರ್ವ ಕಾಲೇಜಿನ ಆಂತರಿಕ ಸಮಿತಿ ಹಮ್ಮಿಕೊಂಡ ಮಹಿಳಾ ದೌರ್ಜನ್ಯ ತಡೆ ಅರಿವು ಕಾರ್ಯಕ್ರಮದಲ್ಲಿ ಮಾತನಾಡಿದರು.
ಸಮಾಜ ಹೆಣ್ಣನ್ನು ಕೀಳರಿಮೆಯಿಂದ ನೋಡುತ್ತಿದೆ. ಅಂತಹ ತಾರತಮ್ಯ ಹೋಗಲಾಡಿಸಿ ಹೆಣ್ಣು ಗಂಡಿನಷ್ಟೆ ಸಮಾನಳು ಎಂಬ ಮನಸ್ಥಿತಿ ಸಮಾಜದಲ್ಲಿ ಮೂಡಬೇಕು. ಎಷ್ಟೋ ವಿಚಾರಗಳಲ್ಲಿ ಹೆಣ್ಣನ್ನು ತಪ್ಪು ಕಲ್ಪನೆಗಳಿಂದ ನೋಡುವುದಲ್ಲದೆ ಬಹಿಷ್ಕರಿಸುವ ಪದ್ದತಿಯನ್ನು ನಾವು ನೋಡುತ್ತಿದ್ದೇವೆ. ಆದರೆ ಅಂತಹ ತಪ್ಪಿನಲ್ಲಿ ಗಂಡಿನ ಪಾತ್ರವು ಇರುವುದೆಂದು ಯಾರು ಯೋಚಿಸುವುದಿಲ್ಲ. ದೌರ್ಜನ್ಯಕ್ಕೆ ಒಳಗಾದವರನ್ನು ಅನುಕಂಪದಿಂದ ನೋಡಬೇಕೆ ಹೊರತು ಬಹಿಷ್ಕರಿಸುವುದಲ್ಲ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಆಳ್ವಾಸ್ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಮೊಹಮ್ಮದ್ ಸದಾಕತ್ ಭಾರತಕ್ಕೆ ಸ್ವಾತಂತ್ರ್ಯ ಸಿಕ್ಕಿ ಇಷ್ಟು ವರ್ಷಗಳು ಕಳೆದರೂ ಕೂಡ ನಾವು ದೌರ್ಜನ್ಯದ ಪ್ರಕರಣಗಳನ್ನು ನೋಡುತ್ತಿದ್ದೆವೆ ಎಂದರೆ ನಾವು ಈಗಿನ ಸಮಾಜಕ್ಕಿಂತ ಹಿಂದಕ್ಕೆ ಹೋಗುತ್ತಿದ್ದೇವೆ ಎಂಬುದಲ್ಲ, ಹಿಂದಕ್ಕೆ ಓಡುತ್ತಿದ್ದೇವೆ ಎನ್ನುವುದಾಗಿದೆ ಎಂದು ಎಚ್ಚರಿಸಿದರು. ಹೆಣ್ಣನ್ನು ಕೇವಲ ರೇಷನ್ ಕಾರ್ಡ್ ನಲ್ಲಿ ಮಾತ್ರ ಯಜಮಾನಿ ಎಂದು ಪರಿಗಣಿಸದೆ, ನಿಜ ಜೀವನದಲ್ಲೂ ಯಜಮಾನಿಯಾಗಿರಬೇಕು ಎಂದರು.
ಕಾರ್ಯಕ್ರಮದಲ್ಲಿ ಆಳ್ವಾಸ್ ಪದವಿಪೂರ್ವ ಕಾಲೇಜಿನ ಉಪ ಪ್ರಾಂಶುಪಾಲೆ ಜಾನ್ಸಿ ಪಿ.ಎನ್, ಸಂಯೋಜಕಿ ವಿದ್ಯಾ.ಕೆ ಉಪಸ್ಥಿತರಿದ್ದರು.
ಕಾರ್ಯಕ್ರಮದ ಸಂಯೋಜಕಿ ಡಾ.ಸುಲತಾ ಸ್ವಾಗತಿಸಿ, ಉಪನ್ಯಾಸಕಿ ಉಷಾ.ಬಿ ನಿರೂಪಿಸಿ ಉಪನ್ಯಾಸಕಿ ಆಶಾ ವಂದಿಸಿದರು.
ಇರಾನ್ನ ನೂತನ ಸುಪ್ರೀಂ ಲೀಡರ್ ಮೊಜ್ತಬಾ ಖಮೇನಿ ಅವರ ಆರೋಗ್ಯ ಹಾಗೂ ಅವರು ಎಲ್ಲಿದ್ದಾರೆ ಎಂಬ ಕುರಿತು ಜಾಗತಿಕ ಮಟ್ಟದಲ್ಲಿ…
ಥೈಲ್ಯಾಂಡ್ನ ರಾಜಧಾನಿ ಬ್ಯಾಂಕಾಕ್ ಸಮೀಪದ ಶಾಲೆಯೊಂದರಲ್ಲಿ 9ನೇ ತರಗತಿ ವಿದ್ಯಾರ್ಥಿಯೊಬ್ಬ ನಡೆಸಿದ ಗುಂಡಿನ ದಾಳಿಯಲ್ಲಿ ಶಿಕ್ಷಕರೊಬ್ಬರು ಮೃತಪಟ್ಟಿದ್ದು, ಕನಿಷ್ಠ 15…
ಮೂಡಬಿದ್ರೆಯ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಆಯೋಜಿಸಿರುವ ಆಳ್ವಾಸ್ ಪ್ರಗತಿ-2026 ಬೃಹತ್ ಉದ್ಯೋಗ ಮೇಳಕ್ಕೆ ತೆರಳಲು ಬಂಟ್ವಾಳದಿಂದ ಶುಕ್ರವಾರ ಎರಡು ಉಚಿತ…
ರಾಷ್ಟ್ರೀಯ ಹೆದ್ದಾರಿ 75ರ ಸುರಿಕುಮೇರು ಸಮೀಪದ ಹಿಂದೂಸ್ತಾನ್ ಪೆಟ್ರೋಲ್ ಬಂಕ್ ಬಳಿ ನಡೆದ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ಆರು…
ಬಿ.ಸಿ.ರೋಡ್ನ ಎನ್.ಜಿ. ಸರ್ಕಲ್ನಲ್ಲಿ ಗುರುವಾರ ಸಂಜೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಇಬ್ಬರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.…
ಕಳೆದ ಒಂದು ವಾರದಿಂದ ನ್ಯುಮೋನಿಯಾ ಜ್ವರದಿಂದ ಬಳಲುತ್ತಿದ್ದ ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವ ದುಃಖದ ಘಟನೆ ನಡೆದಿದೆ. ಮೃತ ವಿದ್ಯಾರ್ಥಿನಿಯನ್ನು…