ಮುಲ್ಕಿ: ಪಡುಪಣಂಬೂರು ಸಹಕಾರಿ ವ್ಯವಸಾಯಿಕ ಸಂಘ ದ ವತಿಯಿಂದ ಸಂಘದ ನಾರಾಯಣ ಸನಿಲ್ ಸಭಾಭವನದಲ್ಲಿ ವಿದ್ಯಾರ್ಥಿ ಪ್ರೋತ್ಸಾಹ ಧನ ವಿತರಣಾ ಸಮಾರಂಭ ನಡೆಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಹಳೆಯಂಗಡಿ ಪಿಸಿಎ ಬ್ಯಾಂಕ್ ಅಧ್ಯಕ್ಷ ಎಸ್ ಎಸ್ ಸತೀಶ್ ಭಟ್ ವಹಿಸಿ ಮಾತನಾಡಿ ಮಕ್ಕಳ ಶಿಕ್ಷಣಕ್ಕೆ ಪ್ರೋತ್ಸಾಹ ನೀಡುವುದರ ಜೊತೆಗೆ ಸಹಕಾರ ಸಂಘದ ಅಭಿವೃದ್ಧಿಗೆ ಸಂಘದ ಸದಸ್ಯರು ಶ್ರಮಿಸಬೇಕು ಹಾಗೂ ಬಡ ಮಕ್ಕಳ ಶಿಕ್ಷಣಕ್ಕೆ ವೈಯುಕ್ತಿಕ ನೆಲೆಯಲ್ಲಿ ಒಂದು ಲಕ್ಷ ರುಪಾಯಿ ಸಹಾಯಧನ ಘೋಷಿಸಿದರು.
ಸಹಕಾರಿ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹಿಮಕರ್, ಮಾತನಾಡಿ ಕಳೆದ ಸಂಘದ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಬಳಿಕ ಸಂಘವು ಸುಮಾರು ಒಂದು ಕೋಟಿ ಗೂ ಮಿಕ್ಕಿ ಲಾಭದತ್ತ ಸಾಗುತ್ತಿದ್ದು ಮುಂದಿನ ದಿನಗಳಲ್ಲಿ ಬಡ ವಿದ್ಯಾರ್ಥಿಗಳನ್ನು ದತ್ತು ತೆಗೆದುಕೊಳ್ಳುವ ಮೂಲಕ ಶಿಕ್ಷಣಕ್ಕೆ ಸಹಾಯ ನಿರಂತರವಾಗಿ ನಡೆಯಲಿದೆ ಎಂದರು.
ವೇದಿಕೆಯಲ್ಲಿ ಮುಖ್ಯ ಅತಿಥಿಗಳಾಗಿ ಹಳೆಯಂಗಡಿ ಗ್ರಾ.ಪಂ. ಅಧ್ಯಕ್ಷೆ ಪೂರ್ಣಿಮಾ, ಪಿ ಸಿ ಎ ಬ್ಯಾಂಕ್ ನಿರ್ದೇಶಕರಾದ ಶ್ಯಾಮ್ ಪ್ರಸಾದ್, ವಿನೋದ್ ಕುಮಾರ್ ಬೊಳ್ಳೂರು, ಗೀತಾ ಆರ್ ಶೆಟ್ಟಿ, ಯೋಗೀಶ್ ಪಾವಂಜೆ, ವಸಂತ್ ಬೆರ್ನಾಡ್, ಮೀರಾಬಾಯಿ, ರೋಹಿಣಿ ಬಿ ಶೆಟ್ಟಿ, ಅಶೋಕ್ ಬಂಗೇರ, ಮುಖೇಶ್ ಸುವರ್ಣ, ದಿವ್ಯ ,ಶಂಕರ್ , ನಾಮನಿರ್ದೇಶಕರಾದ ರಾಜೇಶ್ ದಾಸ್, ಸಿಬ್ಬಂದಿ ನವೀನ್ ಬಾಂದಕೆರೆ, ಎಸ್ ಡಿ ಸಿಸಿ ಬ್ಯಾಂಕ್ ಮೇಲ್ವಿಚಾರಕರಾದ ಕಿರಣ್ ಕುಮಾರ್ ಶೆಟ್ಟಿ, ಜೊತೆ ಕಾರ್ಯದರ್ಶಿ ಶ್ರೀಕಾಂತಿ, ಮತ್ತಿತರರು ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಸುಮಾರು 400ಕ್ಕೂ ಮಿಕ್ಕಿ ಮಕ್ಕಳಿಗೆ ವಿದ್ಯಾರ್ಥಿ ಪ್ರೋತ್ಸಾಹ ಧನ ವಿತರಿಸಲಾಯಿತು.
ಇರಾನ್ನ ನೂತನ ಸುಪ್ರೀಂ ಲೀಡರ್ ಮೊಜ್ತಬಾ ಖಮೇನಿ ಅವರ ಆರೋಗ್ಯ ಹಾಗೂ ಅವರು ಎಲ್ಲಿದ್ದಾರೆ ಎಂಬ ಕುರಿತು ಜಾಗತಿಕ ಮಟ್ಟದಲ್ಲಿ…
ಥೈಲ್ಯಾಂಡ್ನ ರಾಜಧಾನಿ ಬ್ಯಾಂಕಾಕ್ ಸಮೀಪದ ಶಾಲೆಯೊಂದರಲ್ಲಿ 9ನೇ ತರಗತಿ ವಿದ್ಯಾರ್ಥಿಯೊಬ್ಬ ನಡೆಸಿದ ಗುಂಡಿನ ದಾಳಿಯಲ್ಲಿ ಶಿಕ್ಷಕರೊಬ್ಬರು ಮೃತಪಟ್ಟಿದ್ದು, ಕನಿಷ್ಠ 15…
ಮೂಡಬಿದ್ರೆಯ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಆಯೋಜಿಸಿರುವ ಆಳ್ವಾಸ್ ಪ್ರಗತಿ-2026 ಬೃಹತ್ ಉದ್ಯೋಗ ಮೇಳಕ್ಕೆ ತೆರಳಲು ಬಂಟ್ವಾಳದಿಂದ ಶುಕ್ರವಾರ ಎರಡು ಉಚಿತ…
ರಾಷ್ಟ್ರೀಯ ಹೆದ್ದಾರಿ 75ರ ಸುರಿಕುಮೇರು ಸಮೀಪದ ಹಿಂದೂಸ್ತಾನ್ ಪೆಟ್ರೋಲ್ ಬಂಕ್ ಬಳಿ ನಡೆದ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ಆರು…
ಬಿ.ಸಿ.ರೋಡ್ನ ಎನ್.ಜಿ. ಸರ್ಕಲ್ನಲ್ಲಿ ಗುರುವಾರ ಸಂಜೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಇಬ್ಬರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.…
ಕಳೆದ ಒಂದು ವಾರದಿಂದ ನ್ಯುಮೋನಿಯಾ ಜ್ವರದಿಂದ ಬಳಲುತ್ತಿದ್ದ ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವ ದುಃಖದ ಘಟನೆ ನಡೆದಿದೆ. ಮೃತ ವಿದ್ಯಾರ್ಥಿನಿಯನ್ನು…