ದೀಪಾವಳಿ ಹಬ್ಬದ ಸಂಭ್ರಮದಲ್ಲಿದ್ದ ಜನತೆಗೆ ಬೆಚ್ಚಿ ಬೀಳಿಸಿದ್ದ ಉಡುಪಿ ಜಿಲ್ಲೆಯಲ್ಲಿ ನಡೆದ ಕೊಲೆ. ಒಂದೇ ಕುಟುಂಬದ ನಾಲ್ವರನ್ನು ದುಷ್ಕರ್ಮಿಯೊಬ್ಬ ಹತ್ಯೆ ಮಾಡಿದ್ದಾನೆ. ತಾಯಿ ಹಾಗೂ ಆಕೆಯ ಮೂವರು ಮಕ್ಕಳನ್ನು ಆರೋಪಿ ಬರ್ಬರವಾಗಿ ಇರಿದು ಕೊಂದಿದ್ದಾನೆ. ಆಟೋ ಒಂದರಲ್ಲಿ ಬಂದಿದ್ದ ಆರೋಪಿ ಕೊಲೆ ಎಸಗಿ ಮತ್ತೊಂದು ಆಟೋದಲ್ಲಿ ಪರಾರಿಯಾಗಿದ್ದಾನೆ ಎನ್ನಲಾಗಿದೆ.
ಬೋಳು ತಲೆಯ ಅಪರಿಚಿತ ವ್ಯಕ್ತಿಯೊಬ್ಬ ಬಿಳಿ ಬಣ್ಣದ ಶರ್ಟ್, ಬಿಳಿ ಬಣ್ಣದ ಮಾಸ್ಕ್ ಧರಿಸಿ ಬಂದು ಈ ಕೃತ್ಯ ಎಸಗಿದ್ದಾನೆ ಎಂದು ತಿಳಿದು ಬಂದಿದೆ. ಘಟನಾ ಸ್ಥಳಕ್ಕೆ ಮಲ್ಪೆ ಪೊಲೀಸರು ಭೇಟಿ ನೀಡಿದ್ದು, ಸ್ಥಳೀಯ ಸಿಸಿಟಿವಿ ದೃಶ್ಯಾವಳಿಗಳ ಸಹಿತ, ಮಾಹಿತಿ ಸಂಗ್ರಹಿಸುತ್ತಿದ್ದಾರೆ..ಉಡುಪಿ ಜಿಲ್ಲೆಯ ಮಲ್ಪೆ ಪೊಲೀಸ್ ಠಾಣೆ ವ್ಯಾಪ್ತಿಯ ನೇಜಾರು ತೃಪ್ತಿ ನಗರದಲ್ಲಿರುವ ಮೃತರ ಮನೆಗೆ ಬೆಳಗ್ಗಿನ ವೇಳೆ ಬಂದ ದುಷ್ಕರ್ಮಿಯೊಬ್ಬ ತಾಯಿ ಹಾಗೂ ಮೂವರು ಮಕ್ಕಳನ್ನು ಚೂರಿಯಿಂದ ಇರಿದು ಕೊಂದು ವೃದ್ಧೆಯನ್ನು ಗಾಯಗೊಳಿಸಿದ್ದಾನೆ. ತಾಯಿ ಹಸೀನಾ (46) ಆಕೆಯ ಮಕ್ಕಳಾದ ಅಫ್ನಾನ್ (23), ಅಯಾಂಜ್ (21), ಮತ್ತು ಅಸೀಮ್ (14) ದುಷ್ಕರ್ಮಿಯ ಇರಿತದಿಂದ ಮೃತಪಟ್ಟವರು ಎಂದು ಗುರುತಿಸಲಾಗಿದೆ.
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…
ಸಮಾಜದಲ್ಲಿ ಒಡಕುಂಟು ಮಾಡಿ, ದ್ವೇಷವನ್ನು ಬಿತ್ತುವ ಹಾಗೂ ಶಾಂತಿಯನ್ನು ಕದಡಲು ಪ್ರಚೋದನಾತ್ಮಕ ಭಾಷಣವನ್ನು ಯಾರು ಮಾಡಿದರೂ, ಅವರ ಮೇಲೆ ಪ್ರಕರಣ…
ಕರಾವಳಿಯ ಗಂಡುಕಲೆ ಎಂದೇ ಪ್ರಸಿದ್ಧ ಪಡೆದಿರುವ ಯಕ್ಷಗಾನ ಉತ್ತರ ಪ್ರದೇಶದ ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ ಪ್ರಪ್ರಥಮ ಬಾರಿಗೆ ಪ್ರದರ್ಶನವಾಗಿದೆ.…
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…