ದೀಪಾವಳಿ ಹಬ್ಬದ ಸಂಭ್ರಮದಲ್ಲಿದ್ದ ಜನತೆಗೆ ಬೆಚ್ಚಿ ಬೀಳಿಸಿದ್ದ ಉಡುಪಿ ಜಿಲ್ಲೆಯಲ್ಲಿ ನಡೆದ ಕೊಲೆ. ಒಂದೇ ಕುಟುಂಬದ ನಾಲ್ವರನ್ನು ದುಷ್ಕರ್ಮಿಯೊಬ್ಬ ಹತ್ಯೆ ಮಾಡಿದ್ದಾನೆ. ತಾಯಿ ಹಾಗೂ ಆಕೆಯ ಮೂವರು ಮಕ್ಕಳನ್ನು ಆರೋಪಿ ಬರ್ಬರವಾಗಿ ಇರಿದು ಕೊಂದಿದ್ದಾನೆ. ಆಟೋ ಒಂದರಲ್ಲಿ ಬಂದಿದ್ದ ಆರೋಪಿ ಕೊಲೆ ಎಸಗಿ ಮತ್ತೊಂದು ಆಟೋದಲ್ಲಿ ಪರಾರಿಯಾಗಿದ್ದಾನೆ ಎನ್ನಲಾಗಿದೆ.
ಬೋಳು ತಲೆಯ ಅಪರಿಚಿತ ವ್ಯಕ್ತಿಯೊಬ್ಬ ಬಿಳಿ ಬಣ್ಣದ ಶರ್ಟ್, ಬಿಳಿ ಬಣ್ಣದ ಮಾಸ್ಕ್ ಧರಿಸಿ ಬಂದು ಈ ಕೃತ್ಯ ಎಸಗಿದ್ದಾನೆ ಎಂದು ತಿಳಿದು ಬಂದಿದೆ. ಘಟನಾ ಸ್ಥಳಕ್ಕೆ ಮಲ್ಪೆ ಪೊಲೀಸರು ಭೇಟಿ ನೀಡಿದ್ದು, ಸ್ಥಳೀಯ ಸಿಸಿಟಿವಿ ದೃಶ್ಯಾವಳಿಗಳ ಸಹಿತ, ಮಾಹಿತಿ ಸಂಗ್ರಹಿಸುತ್ತಿದ್ದಾರೆ..ಉಡುಪಿ ಜಿಲ್ಲೆಯ ಮಲ್ಪೆ ಪೊಲೀಸ್ ಠಾಣೆ ವ್ಯಾಪ್ತಿಯ ನೇಜಾರು ತೃಪ್ತಿ ನಗರದಲ್ಲಿರುವ ಮೃತರ ಮನೆಗೆ ಬೆಳಗ್ಗಿನ ವೇಳೆ ಬಂದ ದುಷ್ಕರ್ಮಿಯೊಬ್ಬ ತಾಯಿ ಹಾಗೂ ಮೂವರು ಮಕ್ಕಳನ್ನು ಚೂರಿಯಿಂದ ಇರಿದು ಕೊಂದು ವೃದ್ಧೆಯನ್ನು ಗಾಯಗೊಳಿಸಿದ್ದಾನೆ. ತಾಯಿ ಹಸೀನಾ (46) ಆಕೆಯ ಮಕ್ಕಳಾದ ಅಫ್ನಾನ್ (23), ಅಯಾಂಜ್ (21), ಮತ್ತು ಅಸೀಮ್ (14) ದುಷ್ಕರ್ಮಿಯ ಇರಿತದಿಂದ ಮೃತಪಟ್ಟವರು ಎಂದು ಗುರುತಿಸಲಾಗಿದೆ.
ಬಂಟ್ವಾಳ ತಾಲೂಕಿನ ತೆಂಕಬೆಳ್ಳೂರು ಗ್ರಾಮದ ಕಾಗುಡ್ಡೆ ಎಂಬಲ್ಲಿ ರಾತ್ರಿ ಸುರಿದ ಭಾರೀ ಮಳೆ ಹಾಗೂ ಬಿರುಗಾಳಿಯ ಅಬ್ಬರಕ್ಕೆ ಮನೆಯ ಚಾವಣಿ…
ಬಂಟ್ವಾಳ ತಾಲೂಕಿನ ಸಜೀಪಮೂಡ ಗ್ರಾಮದ ಕೊಳಕೆ ಎಂಬಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದ ಸಂಭವಿಸಿದಂತಹ ಅವಘಡದಲ್ಲಿ ಮನೆಯ ಪೀಠೋಪಕರಣಗಳು ಹಾಗೂ ದಿನನಿತ್ಯ…
ವಾಷಿಂಗ್ಟನ್ ಕರ್ನಾಟಕದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ. ಯು. ಟಿ. ಖಾದರ್ ಫರೀದ್ ಅವರ ಸಾರ್ವಜನಿಕ ಸೇವೆ…
ಫಿಫಾ ವಿಶ್ವಕಪ್ 2026ರ ಫೈನಲ್ ಹಾಗೂ ಸೆಮಿಫೈನಲ್ ಪಂದ್ಯಗಳ ವೇಳೆ ನಡೆದ ಗಲಾಟೆ ಮತ್ತು ನಿಯಮ ಉಲ್ಲಂಘನೆಗಳ ಹಿನ್ನೆಲೆಯಲ್ಲಿ, ಅರ್ಜೆಂಟೀನಾ…
'ನ್ಯೂಯಾರ್ಕ್ ಟೈಮ್ಸ್' ತನ್ನ ವರದಿಯಲ್ಲಿ 'ಪಾಕಿಸ್ತಾನಿ ಕಾಶ್ಮೀರ' ಎಂದು ಉಲ್ಲೇಖಿಸಿರುವುದಕ್ಕೆ ಭಾರತ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಅಮೆರಿಕದಲ್ಲಿರುವ ಭಾರತೀಯ ರಾಯಭಾರ…
ಚೀನಾ ಪಾಕಿಸ್ತಾನದ ಮೂಲಕ ಇರಾನ್ಗೆ 400 ರಾಕೆಟ್ ಲಾಂಚರ್ಗಳನ್ನು ಪೂರೈಸಿದೆ ಎಂಬ ವರದಿಗಳು ಜಾಗತಿಕ ಆತಂಕಕ್ಕೆ ಕಾರಣವಾಗಿವೆ. ಈ ಕುರಿತು…