ದೀಪಾವಳಿ ಹಬ್ಬದ ಸಂಭ್ರಮದಲ್ಲಿದ್ದ ಜನತೆಗೆ ಬೆಚ್ಚಿ ಬೀಳಿಸಿದ್ದ ಉಡುಪಿ ಜಿಲ್ಲೆಯಲ್ಲಿ ನಡೆದ ಕೊಲೆ. ಒಂದೇ ಕುಟುಂಬದ ನಾಲ್ವರನ್ನು ದುಷ್ಕರ್ಮಿಯೊಬ್ಬ ಹತ್ಯೆ ಮಾಡಿದ್ದಾನೆ. ತಾಯಿ ಹಾಗೂ ಆಕೆಯ ಮೂವರು ಮಕ್ಕಳನ್ನು ಆರೋಪಿ ಬರ್ಬರವಾಗಿ ಇರಿದು ಕೊಂದಿದ್ದಾನೆ. ಆಟೋ ಒಂದರಲ್ಲಿ ಬಂದಿದ್ದ ಆರೋಪಿ ಕೊಲೆ ಎಸಗಿ ಮತ್ತೊಂದು ಆಟೋದಲ್ಲಿ ಪರಾರಿಯಾಗಿದ್ದಾನೆ ಎನ್ನಲಾಗಿದೆ.
ಬೋಳು ತಲೆಯ ಅಪರಿಚಿತ ವ್ಯಕ್ತಿಯೊಬ್ಬ ಬಿಳಿ ಬಣ್ಣದ ಶರ್ಟ್, ಬಿಳಿ ಬಣ್ಣದ ಮಾಸ್ಕ್ ಧರಿಸಿ ಬಂದು ಈ ಕೃತ್ಯ ಎಸಗಿದ್ದಾನೆ ಎಂದು ತಿಳಿದು ಬಂದಿದೆ. ಘಟನಾ ಸ್ಥಳಕ್ಕೆ ಮಲ್ಪೆ ಪೊಲೀಸರು ಭೇಟಿ ನೀಡಿದ್ದು, ಸ್ಥಳೀಯ ಸಿಸಿಟಿವಿ ದೃಶ್ಯಾವಳಿಗಳ ಸಹಿತ, ಮಾಹಿತಿ ಸಂಗ್ರಹಿಸುತ್ತಿದ್ದಾರೆ..ಉಡುಪಿ ಜಿಲ್ಲೆಯ ಮಲ್ಪೆ ಪೊಲೀಸ್ ಠಾಣೆ ವ್ಯಾಪ್ತಿಯ ನೇಜಾರು ತೃಪ್ತಿ ನಗರದಲ್ಲಿರುವ ಮೃತರ ಮನೆಗೆ ಬೆಳಗ್ಗಿನ ವೇಳೆ ಬಂದ ದುಷ್ಕರ್ಮಿಯೊಬ್ಬ ತಾಯಿ ಹಾಗೂ ಮೂವರು ಮಕ್ಕಳನ್ನು ಚೂರಿಯಿಂದ ಇರಿದು ಕೊಂದು ವೃದ್ಧೆಯನ್ನು ಗಾಯಗೊಳಿಸಿದ್ದಾನೆ. ತಾಯಿ ಹಸೀನಾ (46) ಆಕೆಯ ಮಕ್ಕಳಾದ ಅಫ್ನಾನ್ (23), ಅಯಾಂಜ್ (21), ಮತ್ತು ಅಸೀಮ್ (14) ದುಷ್ಕರ್ಮಿಯ ಇರಿತದಿಂದ ಮೃತಪಟ್ಟವರು ಎಂದು ಗುರುತಿಸಲಾಗಿದೆ.
ಹೆಬ್ರಿ ಸಮೀಪದ ಹೊಸೂರು ಎಂಬಲ್ಲಿ ಇಸ್ಪೀಟ್ ಜೂಜಾಟ ನಡೆಸುತ್ತಿದ್ದ ಆರೋಪದಲ್ಲಿ ಏಳು ಮಂದಿಯನ್ನು ಹೆಬ್ರಿ ಪೊಲೀಸರು ಬಂಧಿಸಿದ್ದಾರೆ. ಜೂಜಾಟ ನಡೆಯುತ್ತಿರುವ…
ಮಚ್ಚಿನ ಗ್ರಾಮ ಪಾಳ್ಯರ ಎಂಬಲ್ಲಿ ಪಿಕಪ್ ವಾಹನ ಹಾಗೂ ಸ್ಕೂಟರ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಸವಾರರಿಬ್ಬರು ಚಿಕಿತ್ಸೆ…
ಗೋವನ್ನು ರಾಷ್ಟ್ರೀಯ ಪ್ರಾಣಿಯಾಗಿ ಘೋಷಿಸಿ, ದೇಶಾದ್ಯಂತ ಗೋಹತ್ಯೆ ಹಾಗೂ ಗೋಮಾಂಸ ರಫ್ತನ್ನು ಸಂಪೂರ್ಣವಾಗಿ ನಿಷೇಧಿಸುವ ಕಾನೂನು ಜಾರಿಗೊಳಿಸಬೇಕು ಎಂದು ಮುಸ್ಲಿಂ…
ಕಂಟೇನರ್ ಲಾರಿ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟ ಘಟನೆ ಕೋಟೇಶ್ವರ ಹಾಲಾಡಿ…
ಎ. 4 2026ರಂದು ಪುಂಜಾಲಕಟ್ಟೆ ಠಾಣಾ ವ್ಯಾಪ್ತಿಯ ಮನೆಯಲ್ಲಿ ನಡೆದ ಚಿನ್ನಾಭರಣ ಮತ್ತು ನಗದು ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ದಾಖಲಾಗಿದ್ದ…
ರಾಜಕೀಯ ಹಾಗೂ ಚುನಾವಣಾ ತಂತ್ರಗಾರಿಕೆಯಲ್ಲಿ ಗುರುತಿಸಿಕೊಂಡಿರುವ ಸುನಿಲ್ ಕಾನುಗೋಲು ಅವರನ್ನು ಕರ್ನಾಟಕದ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಅವರ ಮುಖ್ಯ…