ಕಾಪು: ನಾಗಸ್ವರ ವಾದಕ ಶೇಖ್ ಜಲೀಲ್ ಸಾಹೇಬ್ (56) ಅವರು ಸೋಮವಾರ ಹೃದಯಾಘಾತದಿಂದ ನಿಧನ ಹೊಂದಿದರು.
ಇಂದು ಮುಂಜಾನೆ ನಾಗಸ್ವರ ಹೆಗಲಿಗೇರಿಸಿಕೊಂಡು ಮನೆಯಿಂದ ಹೊರಗೆ ಹೋಗಿದ್ದರು. ಹೋಟೇಲ್ ನಲ್ಲಿ ಚಹಾ ಕುಡಿಯಲು ಕುಳಿತಿದ್ದ ವೇಳೆ ಎದೆನೋವು ಕಾಣಿಸಿಕೊಂಡಿತ್ತು. ಆದರೆ, ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಅವರು ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ.
ಜಲೀಲ್ ಸಾಹೇಬ್ ಅವರು ಶನಿವಾರ ಕೊಪ್ಪಲಂಗಡಿಯಲ್ಲಿ ನಡೆದ ಮುಳ್ಳಮುಟ್ಟೆ, ಭಾನುವಾರ ಕಾಪು ಶ್ರೀ ಲಕ್ಷ್ಮೀ ಜನಾರ್ದನ ದೇವಸ್ಥಾನದಲ್ಲಿ ದೀಪಾವಳಿ ಸಂಭ್ರಮ ಮತ್ತು ಬಲಿ ಹೊರಡುವ ಸಂದರ್ಭದಲ್ಲೂ ನಾಗಸ್ವರ ಸೇವೆ ನೀಡಿದ್ದರು. ಕಾಪು ಸಾವಿರ ಸೀಮೆಯ ಒಡೆಯ ಮಹತೋಭಾರ ಶ್ರೀ ಲಕ್ಷ್ಮೀ ಜನಾರ್ದನ ದೇವರ ಸನ್ನಿಧಿ, ಕಾಪು ಮೂರನೇ ಮಾರಿಗುಡಿ ಸಹಿತ ಕಾಪು ಮಾರಿಯಮ್ಮ ದೇವಿ ಸನ್ನಿಧಿ ಹಾಗೂ ಕಾಪು ಸಾವಿರ ಸೀಮೆಯ ಹೆಚ್ಚಿನ ದೇವಸ್ಥಾನ, ಗರಡಿ, ದೇವಸ್ಥಾನಗಳಲ್ಲಿ ನಾಗಸ್ವರ ವಾದಕರಾಗಿ ಸೇವೆ ನೀಡುತ್ತಿದ್ದರು.
ಮೃತರು, ಪತ್ನಿ, ಮಗಳು, ಸಹೋದರ ಸಹಿತ ಅಪಾರ ಬಂಧು ಬಳಗ, ಅಭಿಮಾನಿಗಳನ್ನು ಅಗಲಿದ್ದಾರೆ.
ಯುಎಇ ಮೂಲದ ಟೋರ್ಟಿಲ್ಲಾ ಮತ್ತು ಫ್ಲಾಟ್ಬ್ರೆಡ್ ತಯಾರಕರಾದ ಫ್ಲೋರ್ ಮಾಸ್ಟರ್ಸ್, ಆಂಧ್ರಪ್ರದೇಶದಲ್ಲಿ ವಿಶ್ವ ದರ್ಜೆಯ ಸಂಯೋಜಿತ ಫ್ಲಾಟ್ಬ್ರೆಡ್ ಉತ್ಪಾದನಾ ಪರಿಸರ…
ಕಾರಿಗೆ ಖಾಸಗಿ ಬಸ್ ಡಿಕ್ಕಿಯಾಗಿ ಕಾರಿನಲ್ಲಿದ್ದ ಪುಟ್ಟ ಮಕ್ಕಳು ಸಹಿತ ಚಾಲಕ ಅಪಾಯದಿಂದ ಪಾರಾಗಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 66ರ…
ಅಮೆರಿಕ ಮತ್ತು ಇರಾನ್ ನಡುವೆ ಪರ್ಷಿಯನ್ ಕೊಲ್ಲಿಯಲ್ಲಿನ ಮಿಲಿಟರಿ ದಾಳಿಗಳು ತಾತ್ಕಾಲಿಕವಾಗಿ ಸ್ಥಗಿತಗೊಂಡ ಬೆನ್ನಲ್ಲೇ ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ…
ದೇಶಾದ್ಯಂತ ವ್ಯಾಪಕ ಸಂಚಲನ ಮೂಡಿಸಿದ್ದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ಹಾಗೂ ದೆಹಲಿಯ ಜಂತರ್ ಮಂತರ್ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ತೀವ್ರ…
ನಗರದ ಲಾಲ್ಬಾಗ್ ಸಿಗ್ನಲ್ ಸಮೀಪ ಶನಿವಾರ ಮಧ್ಯಾಹ್ನ ಸಾರ್ವಜನಿಕರ ಕಣ್ಣೆದುರಲ್ಲೇ ಭೀಕರ ಮಾರಕಾಸ್ತ್ರ ದಾಳಿ ನಡೆದಿದ್ದು, ಪ್ರಸಿದ್ಧ ರೌಡಿಶೀಟರ್ ಒಬ್ಬ…
ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇದೀಗ ಆತನ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ವಿಷಸೇವನೆ…