ಕೋಳಿ ಮಾಂಸ ವಿಚಾರವಾಗಿ ಮೊನ್ನೆ ಮೊನ್ನೆ ಬಸ್ನಲ್ಲಿ ಪ್ರಯಾಣಿಸಿದ ಪ್ರಯಾಣಿಕನನ್ನು ಠಾಣೆಯಲ್ಲಿ ಇಳಿಸಿ ರಾದ್ದಾಂತ ಮಾಡಿದ ಪ್ರಕರಣದ ನೆನಪು ಮಾಸುವ ಮುನ್ನ ಬಿ.ಸಿ.ರೋಡಿನಲ್ಲಿ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. ಹೌದು, ತೆಂಗಿನ ಎಣ್ಣೆಯನ್ನು ಹಿಡಿದುಕೊಂಡು ಬಸ್ನಲ್ಲಿ ಪ್ರಯಾಣಿಸುವ ಮಹಿಳೆಯನ್ನು ಬಸ್ ನಿರ್ವಾಹಕ ಪ್ರಶ್ನಿಸಿ ಬಸ್ಸಿನಿಂದ ಇಳಿಯುವಂತೆ ಹೇಳಿದ್ದಾನೆ.
ಮಂಗಳೂರು – ಹಾಸನ ಬಸ್ನಲ್ಲಿ ಮಂಗಳೂರಿನಿAದ ಹಾಸನಕ್ಕೆ ಮಹಿಳರಯೊರ್ವರು ಪ್ರಯಾಣ ಬೆಳೆಸಿದ್ದರು. ಬಸ್ ಹತ್ತಿದ ಮಹಿಳೆಯ ಕೈಯಲ್ಲಿ ಚೀಲವೊಂದಿದ್ದು, ಅದರಲ್ಲಿ ಮೂರು ಕ್ಯಾನ್ ತೆಂಗಿನ ಎಣ್ಣೆ ಇತ್ತು. ಮಂಗಳೂರಿನಿAದ ಸಂಬAಧಿಕರ ಮನೆಗೆ ಶುದ್ಧ ತೆಂಗಿನ ಎಣ್ಣೆಯನ್ನು ಮಹಿಳೆ ತೆಗೆದುಕೊಮಡು ಹೋಗ್ತಾ ಇದ್ರು. ಆದರೆ ಬಸ್ ನಿರ್ವಾಹಕ ಟಿಕೆಟ್ ಪಡೆಯಲು ಬಂದಾಗ ತೆಂಗಿನ ಎಣ್ಣೆಯನ್ನು ನೋಡಿ ಇದು ಏನಮ್ಮಾ ಅಂತ ಕೇಳಿದ್ದಾರೆ. ಮೇಲ್ನೋಟಕ್ಕೆ ತೆಂಗಿನ ಎಣ್ಣೆ ಎಂಬುದು ಖಾತ್ರಿಯಾದರೂ ಕಂಡಕ್ಟರ್ ಮಹಿಳೆಯನ್ನು ಪ್ರಶ್ನಿಸಿದಾಗ ಅವರು ಕೋಪದಲ್ಲಿ ಇದು ಬಾಂಬ್ ಅಂತ ಹೇಳಿದ್ದಾರೆ. ಆದರೆ ಯಾವುದೇ ಆಯಿಲ್ ಪದಾರ್ಥಗಳನ್ನು ಬಸ್ನಲ್ಲಿ ಕೊಂಡು ಹೋಗುವಂತಿಲ್ಲ ಎಂದು ಮಹಿಳೆಯಲ್ಲಿ ನಿರ್ವಾಹಕ ವಾಗ್ವಾದ ನಡೆಸಿದ್ದಾನೆ. ಆದರೆ ಮಹಿಳೆ ಇವರ ಮಾತನ್ನು ಕೇಳುವ ಸ್ಥಿತಿಯಲ್ಲಿ ಇರಲಿಲ್ಲ. ಆದರೆ ಪಟ್ಟು ಬಿಡದ ಕಂಡೆಕ್ಟರ್ ಮಂಗಳೂರಿನಿAದ ಬಿಸಿರೋಡು ತಲುಪುತ್ತಿದ್ದಂತೆ ಮಹಿಳೆಯನ್ನು ಒತ್ತಾಯ ಪೂರ್ವಕ ಇಳಿಸಿದ್ದಾನೆ. ಮಹಿಳೆ ನನಗೆ ನ್ಯಾಯ ಬೇಕು ಅಂತ ಸಂಚಾರ ನಿರ್ವಾಹಣೆಗಾಗಿ ಬಿಸಿರೋಡು ಬಸ್ ನಿಲ್ದಾಣದಲ್ಲಿ ಕಾರ್ಯನಿರ್ವಹಣೆ ಮಾಡುತ್ತಿದ್ದ ಟ್ರಾಫಿಕ್ ಪೋಲೀಸ್ ಸಿಬ್ಬಂದಿ ವಿವೇಕ್ ರೈ ಅವರಲ್ಲಿ ಮನವಿ ಮಾಡಿಕೊಂಡರು.
ಮಹಿಳೆ ಬಸ್ನಿಂದ ಇಳಿದಿದ್ದಾರೆ ಆದರೂ ಎಣ್ಣೆ ಕ್ಯಾನ್ ಮಾತ್ರ ಬಸ್ನೊಳಗೆ ಇತ್ತು. ಮಧ್ಯ ವಯಸ್ಸಿನ ಒಂಟಿ ಮಹಿಳೆಯಾಗಿರುವುದರಿಂದ ಬಸ್ ನಿಂದ ಇಳಿಸಿದ ಕಂಡಕ್ಟರ್ನ ವರ್ತನೆ ಸರಿ ಕಾಣದೆ ಸಾರ್ವಜನಿಕರು ಕೂಡ ಜಮಾಯಿಸಿದ್ದರು. ಮಹಿಳೆ ನೀಡಿದ ದೂರಿನಂತೆ ಟ್ರಾಫಿಕ್ ಪೋಲೀಸ್ ವಿವೇಕ್ ಅವರು ಬಸ್ ಚಾಲಕನಲ್ಲಿ ಬಸ್ನ್ನು ಬದಿಗೆ ಸರಿಸಿ ಸ್ವಲ್ಪ ಕಾಲ ನಿಲ್ಲುವಂತೆ ಕೇಳಿಕೊಂಡರು. ಬಳಿಕ ಘಟನೆಯಿಂದ ಮಹಿಳೆಗೆ ತೊಂದರೆಯಾಗುತ್ತದೆ ಎಂಬುದನ್ನು ಕಂಡೆಕ್ಟರ್ ಮನಮುಟ್ಟುವಂತೆ ಟ್ರಾಫಿಕ್ ಪೊಲೀಸ್ ತಿಳಿಸಿದ್ದಾರೆ.
ಈ ವಿಚಾರವನ್ನು ಬಂಟ್ವಾಳ ನಗರ ಪೋಲೀಸ್ ಠಾಣೆಯ ಎಸ್.ಐ.ರಾಮಕೃಷ್ಣ ಅವರ ಗಮನಕ್ಕೆ ತಂದಿದ್ದಾರೆ. ಅವರು ಪೋನ್ ಮೂಲಕ ನಿರ್ವಾಹಕನಿಗೆ ಬುದ್ದಿ ಮಾತು ಹೇಳಿದ್ದಲ್ಲದೆ ಸಂತ್ರಸ್ತ ಮಹಿಳೆಯನ್ನು ಅದೇ ಬಸ್ನಲ್ಲಿ ತೆಂಗಿನ ಎಣ್ಣೆ ಸಹಿತ ಹಾಸನಕ್ಕೆ ಕಳುಹಿಸುವಲ್ಲಿ ಯಶಸ್ವಿಯಾಗಿದ್ದಾರೆ. ಸರಕಾರಿ ಬಸ್ ನಲ್ಲಿ ಯಾವ ವಸ್ತುಗಳನ್ನು ಕೊಂಡು ಹೋಗಬಹುದು? ಯಾವುದನ್ನು ಕೊಂಡು ಹೋಗುವಂತಿಲ್ಲ ಎಂಬುದರ ಬಗ್ಗೆ ಪ್ರಯಾಣಿಕರಿಗೆ ಅನುಕೂಲವಾಗುವಂತೆ ಬಸ್ನ ಹೊರಗಡೆ ಅಥವಾ ಡಿಪೋಗಳಲ್ಲಿ ಜನರಿಗೆ ಮುಟ್ಟುವಂತೆ ಜಾಹೀರಾತುಗಳನ್ನು ಹಾಕಬೇಕು ಎಂಬುದು ಪ್ರಯಾಣಿಕರ ಒತ್ತಾಯವಾಗಿದೆ.
ಒಟ್ಟಿನಲ್ಲಿ ಕೆ.ಎಸ್.ಆರ್.ಟಿ.ಸಿ.ನಿಗಮದ ನಿಯಮಗಳಿಂದ ಬಡವರ ಪಾಲಿಗೆ ಅಂತೂ ಬಸ್ ಪ್ರಯಾಣ ಎಂಬುದು ದುಸ್ತರವಾಗಿ ಬಿಡುತ್ತದೆ. ಸರಕಾರದ ಪ್ರತಿಯೊಂದು¸ Ëಲಭ್ಯಗಳು ಬಡ ಜನರ ಜೀವನಕ್ಕೆ ಪೂರಕವಾಗುವ ನಿಟ್ಟಿನಲ್ಲಿ ಮಾಡಿರುವುದಾಗಿದ್ದರೂ ಕೂಡ ಇಂತಹ ಜನವಿರೋಧಿ ನಿಯಮಗಳಿಂದ ಬಡವರಿಗೆ ತೊಂದರೆಯಾಗುತ್ತಿದೆ ಎಂಬ ಆರೋಪಗಳು ಕೇಳಿ ಬಂದಿದೆ. ಕರಾವಳಿ ಭಾಗದಿಂದ ಆಯ್ಕೆಯಾದ ಶಾಸಕರುಗಳು ಈ ಬಗ್ಗೆ ಸಚಿವರ ಜೊತೆ ಮಾತನಾಡಿ ನಿಯಮಗಳನ್ನು ಸಡಿಲಿಕೆ ಮಾಡಲು ಒತ್ತಡ ಹಾಕಬೇಕು ಎಂಬುದು ಸಾರ್ವಜನಿಕ ಆಗ್ರಹವಾಗಿದೆ.
ಪಾಣೆಮಂಗಳೂರು ಹಳೆಯ ಸೇತುವೆ ಮೇಲೆ ರಿಕ್ಷಾ ನಿಲ್ಲಿಸಿ ಚಾಲನೋರ್ವ ಕಾಣೆಯಾದ ಘಟನೆ ನಡೆದಿದ್ದು, ನೇತ್ರಾವತಿ ನದಿಗೆ ಹಾರಿರುವ ಶಂಕೆ ವ್ಯಕ್ತವಾಗಿದೆ.…
ಬಂಟ್ವಾಳ ತಾಲೂಕಿನ ತುಂಬೆ ಗ್ರಾಮದ ವ್ಯಕ್ತಿಯೋರ್ವರು ನಾಪತ್ತೆಯಾಗಿರುವ ಬಗ್ಗೆ ದೂರು ದಾಖಲಾಗಿದೆ. ಬೊಳ್ಳಾರಿ ನಿವಾಸಿ ಚೆನ್ನಕೇಶವ ಕಾಣೆಯಾದವರಾಗಿದ್ದು, ದೂರುದಾರರ ಪ್ರಕಾರ,…
ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅವರು ತಮ್ಮ ಕಚೇರಿಯಲ್ಲಿ ಬಂಟ್ವಾಳ ಪುರಸಭೆಯ ಸಮಗ್ರ ಕುಡಿಯುವ ನೀರಿನ ಯೋಜನೆಯ 2ನೇ…
ಬಂಟ್ವಾಳ ತಾಲೂಕಿನ ಕೇಪು ಗ್ರಾಮ ಪಂಚಾಯತಿಗೆ ಎಮ್.ಎಲ್.ಸಿ ಕಿಶೋರ್ ಕುಮಾರ್ ಪುತ್ತೂರು ಭೇಟಿ ನೀಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ…
ಐವರು ಸ್ನೇಹಿತರು ಪ್ರಯಾಣಿಸುತ್ತಿದ್ದ ಕಾರೊಂದು ನಿಯಂತ್ರಣ ಕಳೆದುಕೊಂಡು ಮೇಲ್ಸೇತುವೆಯ ರಸ್ತೆ ವಿಭಾಜಕಕ್ಕೆ ಡಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದ ಚಾಲಕ ಆಸ್ಪತ್ರೆಯಲ್ಲಿ…
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…