ಮೂಡುಬಿದಿರೆಯ ಸಮಾಜ ಮಂದಿರ ಸಭಾ (ರಿ) , ಯುವ ವಾಹಿನಿ ಘಟಕದ ವತಿಯಿಂದ ಸಮಾಜ ಮಂದಿರದಲ್ಲಿ ಬೆದ್ರ ಗೂಡು ದೀಪ, ರಂಗೋಲಿ ಸ್ಪರ್ಧೆ-2023 ಸಮಾಜಮಂದಿರದಲ್ಲಿ ನಡೆಯಿತು.ಸಭಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಸಮಾಜ ಮಂದಿರ ಸಭಾ ಅಧ್ಯಕ್ಷ, ಮಾಜಿ ಸಚಿವ ಕೆ. ಅಭಯಚಂದ್ರ ಜೈನ್ ಅವರು ಪರಂಪರೆಯ ಬೆಳಕು ಎಲ್ಲೆಡೆ ಪಸರಿಸಿ ಸುಖ ಸಮೃದ್ಧಿ ನೆಮ್ಮದಿ ಸಿಗಲಿ ಎಂದು ಹಾರೈಸಿದ್ದಾರೆ.
ಮಂಗಳೂರು ವಿವಿಯ ಬ್ರಹ್ಮಶ್ರೀ ನಾರಾಯಣ ಗುರು ಅಧ್ಯಯನ ಪೀಠದ ನಿರ್ದೇಶಕ ಡಾ. ಗಣೇಶ ಅಮೀನ್ ಸಂಕಮಾರ್ ದೀಪಾವಳಿಯ ಬಗ್ಗೆ ಮಾತನಾಡಿ ಅಂದಿನ ಕಾಲದಲ್ಲಿ ಹಿರಿಯರಿಗೆ ಬಡತನವಿತ್ತು. ಆದರೆ ಸಕಾಲದಲ್ಲಿ ಹಸಿವೆ, ಸೊಗಸಾದ ನಿದ್ದೆಯ ನೈಜ್ಯ ಶ್ರೀಮಂತಿಕೆಯಿತ್ತು. ಕೂಡು ಕುಟುಂಬಗಳ ಚಿತ್ರಣ ಕರಗಿ ಹೋಗುತ್ತಿದ್ದಂತೆ ಇಂದು ಹಬ್ಬಗಳ ಬೆಳಕು, ಸಂಭ್ರಮ ಕ್ಷೀಣವಾಗುತ್ತಿದೆ ಎಂದ್ರು. ಇನ್ನು ಇದೇ ವೇಳೆ ಸ್ಪೂರ್ತಿಭಿನ್ನ ಸಾಮಥ್ಯ೯ದ ಮಕ್ಕಳ ಶಾಲಾ ಸ್ಥಾಪಕ ಪ್ರಕಾಶ್ ಶೆಟ್ಟಿಗಾರ್ದ ಹಾಗು ದ .ಕ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಸುರೇಶ್ ಎ ಅವರನ್ನು ಗೌರವಿಸಲಾಯಿತು.
ಇನ್ನು ಈ ಸಂಧರ್ಭದಲ್ಲಿ ಯುವವಾಹಿನಿ ಕೇಂದ್ರ ಸಮಿತಿ ಅಧ್ಯಕ್ಷ ರಾಜೇಶ್ ಬಿ, ರತ್ನ ವುಮೆನ್ ಕ್ಲಿನಿಕ್ನ ಡಾ. ರಮೇಶ್, ಸಮಾಜ ಮಂದಿರ ಸಭಾ ಕಾರ್ಯದರ್ಶಿ ಹೆಚ್. ಸುರೇಶ್ ಪ್ರಭು, ರೋಟರಿ ಮಿಡ್ ಟೌನ್ ಅಧ್ಯಕ್ಷ ಮಹೇಂದ್ರ ಕುಮಾರ್ ಜೈನ್,ಯುವ ವಾಹಿನಿ ಕಾರ್ಯದರ್ಶಿ ವಿದೇಶ್ ಎಂ, ಡಾ. ಮುರಳೀಕೃಷ್ಣ ವಿ. ಉಪಸ್ಥಿತರಿದ್ದರು.
ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾಧ್ಯಕ್ಷ, ಜಾನಪದ ಕಲಾವಿದ ಡಾ.ಗಣೇಶ್ ಗಂಗೊಳ್ಳಿ ಅವರು ಇಂದು ನಿಧನರಾಗಿದ್ದಾರೆ. ಕಳೆದ ರಾತ್ರಿ ಸಮಾರಂಭವೊಂದರಲ್ಲಿ…
ಕೆಎಸ್ಆರ್ಟಿಸಿ ಬಸ್ ಡಿಕ್ಕಿಯಾಗಿ ಮಹಿಳೆಯೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ತೆಕ್ಕಟ್ಟೆ ಪ್ರೆಸಿಡೆಂಟ್ ಕನ್ವೆನ್ಷನ್ ಹಾಲ್ ಮುಂಭಾಗ…
ಕನ್ನಡ ಚಿತ್ರರಂಗದ ಖ್ಯಾತ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕುಟುಂಬ ಸಮೇತರಾಗಿ ಆಗಮಿಸಿದ್ದಾರೆ. ರಿಷಬ್…
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು -ಸುಳ್ಯ ರಾಷ್ಟ್ರೀಯ ಹೆದ್ದಾರಿಯ ಕೌಡಿಚ್ಚಾರು ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಪಿಕಪ್ ವಾಹನ ಮೋರಿಗೆ…
ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಮಹಿಳೆಯೊಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಘಟನೆ ದಕ್ಷಿಣ…
ವಸತಿಗೃಹವೊಂದರ ಮುಂಭಾಗದಲ್ಲಿ ನಿಲ್ಲಿಸಲಾಗಿದ್ದ ಬೈಕ್ ಕಳವು ಮಾಡಿದ ಆರೋಪಿಗಳಿಬ್ಬರನ್ನು ಬಂಟ್ವಾಳ ನಗರ ಠಾಣಾ ಪೋಲೀಸರು ಬಂಧಿಸಿದ್ದಾರೆ. ಬಂಟ್ವಾಳ ಸಜೀಪ ಮುನ್ನೂರು…