ಮುಲ್ಕಿ: ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪಡೆದ ಕಂಕನಾಡಿ ಫಾದರ್ ಮುಲ್ಲರ್ ಸೇವಾ ಸಂಸ್ಥೆಯ ಮನೋವೈದ್ಯ ಸಮಾಲೋಚಕರಾದ ಎಸ್.ಕೆ. ಶ್ರೀಪತಿ ಭಟ್ ಪರೆಂಕಿಲ ರವರಿಗೆ ಶಿಮಂತೂರು ಬ್ರಾಹ್ಮಣ ಬಂಧು ಮಿತ್ರರಿಂದ ಹುಟ್ಟೂರ ಸನ್ಮಾನ ಕಾರ್ಯಕ್ರಮ ಶಿಮಂತೂರು ಶ್ರೀ ಆದಿ ಜನಾರ್ಧನ ದೇವಸ್ಥಾನದ ಸಭಾಭವನದಲ್ಲಿ ನಡೆಯಿತು.
ಕಾರ್ಯಕ್ರಮವನ್ನು ದೀಪ ಬೆಳಗಿಸಿ ಚಾಲನೆ ನೀಡಿ ಕಟೀಲು ಕ್ಷೇತ್ರದ ಅರ್ಚಕರಾದ ವೆಂಕಟರಮಣ ಆಸ್ರಣ್ಣ ರವರು ಆಶೀರ್ವಚನ ನೀಡಿ ಮನುಷ್ಯನ ಸಾಧನೆಗೆ ಏಕಾಗ್ರತೆ ಬೇಕು, ಪ್ರಶಸ್ತಿಯಿಂದ ಜವಾಬ್ದಾರಿ ಹೆಚ್ಚಿದ್ದು ಸಾಧನೆ ನಿರಂತರವಾಗಿ ನಡೆಯಲಿ ಎಂದರು
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಧರ್ಮದರ್ಶಿ ಡಾ. ಹರಿಕೃಷ್ಣ ಪುನರೂರು ವಹಿಸಿ ಮಾತನಾಡಿ ಉತ್ತಮ ಸೇವಾ ಮನೋಭಾವದ ಮೂಲಕ ಸಮಾಜ ಸೇವಕರಾಗಿ ಎಲೆ ಮರೆಯ ಕಾಯಿಯಂತೆ ಮಾಡಿದ ಸಾಧನೆ ಅಭಿನಂದನೀಯ ಎಂದರು ವೇದಿಕೆಯಲ್ಲಿ ಮುಖ್ಯ ಅತಿಥಿಗಳಾಗಿ ವೇ.ಮೂ. ವಾದಿರಾಜ ಉಪಾಧ್ಯಾಯ ಕೊಲಕಾಡಿ,ಯುಗಪುರುಷದ ಸಂಪಾದಕ ಭುವನಾಭಿರಾಮ ಉಡುಪ, ಸೋಮೇಶ್ವರ ಪಶ್ಚಿಮ್ ಚಾರಿಟೇಬಲ್ ಟ್ರಸ್ಟ್ ನ ಅಧ್ಯಕ್ಷ ಹಾಗೂ ನಿರ್ದೇಶಕ ರೋಹಿತ್ ಸ್ಯಾಂಕ್ಟುಶ್, ವಿಷ್ಣುಮೂರ್ತಿ ಭಟ್, ಶ್ರೀಕಾಂತ್ ಭಟ್ ಕೊಲಕಾಡಿ, ಲಯನ್ಸ್ ಕ್ಲಬ್ ಬಪ್ಪನಾಡು ಇನ್ಸ್ಪೈರ್ ನ ವೆಂಕಟೇಶ ಹೆಬ್ಬಾರ್, ರಾಘವೇಂದ್ರ ಭಟ್ ಕೊಲ್ಲೂರು ಪದವು, ಜಿತೇಂದ್ರ ವಿ.ರಾವ್, ಪ್ರಾಣೇಶ್ ಭಟ್, ಶಶಿಕಲಾ ಉಪಾಧ್ಯಾಯ, ಶ್ರೀವತ್ಸ, ಶಿಕ್ಷಕಿ ಕಾಮೇಶ್ವರಿ ಭಟ್, ಅಶ್ವಿನ್ ಭಟ್ ಶಿಮಂತೂರು, ಗುರುರಾಜ್ ಭಟ್ ದೇಂದಡ್ಕ ಮತ್ತಿತರರು ಉಪಸ್ಥಿತರಿದ್ದರು.
ಬಳಿಕ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ವಿಜೇತ ಎಸ್.ಕೆ. ಶ್ರೀಪತಿ ಭಟ್ ಪರೆಂಕಿಲ ರವರನ್ನು ಪತ್ನಿ ದೀಪ ಎಸ್ ಭಟ್ ಸಮೇತ ಶಿಮಂತೂರು ಬ್ರಾಹ್ಮಣ ಬಂಧು ಮಿತ್ರರ ವತಿಯಿಂದ ಗೌರವಿಸಲಾಯಿತು.
ಹೆಬ್ರಿ ಸಮೀಪದ ಹೊಸೂರು ಎಂಬಲ್ಲಿ ಇಸ್ಪೀಟ್ ಜೂಜಾಟ ನಡೆಸುತ್ತಿದ್ದ ಆರೋಪದಲ್ಲಿ ಏಳು ಮಂದಿಯನ್ನು ಹೆಬ್ರಿ ಪೊಲೀಸರು ಬಂಧಿಸಿದ್ದಾರೆ. ಜೂಜಾಟ ನಡೆಯುತ್ತಿರುವ…
ಮಚ್ಚಿನ ಗ್ರಾಮ ಪಾಳ್ಯರ ಎಂಬಲ್ಲಿ ಪಿಕಪ್ ವಾಹನ ಹಾಗೂ ಸ್ಕೂಟರ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಸವಾರರಿಬ್ಬರು ಚಿಕಿತ್ಸೆ…
ಗೋವನ್ನು ರಾಷ್ಟ್ರೀಯ ಪ್ರಾಣಿಯಾಗಿ ಘೋಷಿಸಿ, ದೇಶಾದ್ಯಂತ ಗೋಹತ್ಯೆ ಹಾಗೂ ಗೋಮಾಂಸ ರಫ್ತನ್ನು ಸಂಪೂರ್ಣವಾಗಿ ನಿಷೇಧಿಸುವ ಕಾನೂನು ಜಾರಿಗೊಳಿಸಬೇಕು ಎಂದು ಮುಸ್ಲಿಂ…
ಕಂಟೇನರ್ ಲಾರಿ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟ ಘಟನೆ ಕೋಟೇಶ್ವರ ಹಾಲಾಡಿ…
ಎ. 4 2026ರಂದು ಪುಂಜಾಲಕಟ್ಟೆ ಠಾಣಾ ವ್ಯಾಪ್ತಿಯ ಮನೆಯಲ್ಲಿ ನಡೆದ ಚಿನ್ನಾಭರಣ ಮತ್ತು ನಗದು ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ದಾಖಲಾಗಿದ್ದ…
ರಾಜಕೀಯ ಹಾಗೂ ಚುನಾವಣಾ ತಂತ್ರಗಾರಿಕೆಯಲ್ಲಿ ಗುರುತಿಸಿಕೊಂಡಿರುವ ಸುನಿಲ್ ಕಾನುಗೋಲು ಅವರನ್ನು ಕರ್ನಾಟಕದ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಅವರ ಮುಖ್ಯ…