ಜನ ಮನದ ನಾಡಿ ಮಿಡಿತ

Advertisement

ಒಂದೇ ಕುಟುಂಬದ ನಾಲ್ವರ ಕೊಲೆ ಪ್ರಕರಣ; ಆರೋಪಿ ಪತ್ತೆಗಾಗಿ 5 ತಂಡ ರಚನೆ

ಉಡುಪಿ: ನೇಜಾರಿನ ತೃಪ್ತಿನಗರದಲ್ಲಿ ಭಾನುವಾರ ದುಷ್ಕರ್ಮಿಯೋರ್ವ ಒಂದೇ ಕುಟುಂಬದ ನಾಲ್ವರನ್ನು ಚೂರಿಯಿಂದ ಇರಿದು ಕೊಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಎಲ್ಲ ಆಯಾಮಗಳಲ್ಲಿ ತನಿಖೆ ನಡೆಸುತ್ತಿದ್ದು, ಆರೋಪಿ ಪತ್ತೆಗಾಗಿ ಡಿವೈಎಸ್ಪಿ ನೇತೃತ್ವದಲ್ಲಿ 5 ತಂಡ ರಚನೆ ಮಾಡಿದ್ದಾರೆ.
ಮಂಗಳೂರು, ಶಿವಮೊಗ್ಗ, ಕಾರವಾರ ಮತ್ತು ಉಡುಪಿಯಲ್ಲಿ ಎರಡು ತಂಡಗಳಿಂದ ತನಿಖೆ ನಡೆಯುತ್ತಿದೆ. ಸಿಸಿಟಿವಿ ಫುಟೇಜ್ ಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ. ನಿನ್ನೆ ಇಬ್ಬರು ಶಂಕಿತ ವ್ಯಕ್ತಿಗಳನ್ನು ವಿಚಾರ ನಡೆಸಿದ್ದು, ಯಾವುದೇ ಮಾಹಿತಿ ಲಭ್ಯವಾಗದ ಹಿನ್ನಲೆಯಲ್ಲಿ ಬಿಡುಗಡೆ ಮಾಡಿದ್ದಾರೆ ಎಂದು ತಿಳಿದುಬಂದಿದೆ.
ಹಣಕಾಸಿನ ವಿಚಾರಕ್ಕೆ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದ್ದು, ಈ ನಿಟ್ಟಿನಲ್ಲಿಯೂ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.


ಘಟನೆ ಹಿನ್ನೆಲೆ: ಭಾನುವಾರ ಬೆಳಿಗ್ಗೆ ನೇಜಾರುವಿನ ತೃಪ್ತಿ ಲೇಔಟ್ ನಿವಾಸಿ ಹಸೀನಾ(42), ಅವರ ಪುತ್ರಿಯರಾದ ಅಫ್ನಾನ್(22) ಮತ್ತು ಅಯ್ನಾಝ್(20) ಮತ್ತು ಪುತ್ರ ಅಸೀಮ್(12)ನನ್ನು ದುಷ್ಕರ್ಮಿಯೋರ್ವ ಹರಿತವಾದ ಆಯುಧದಿಂದ ಇರಿದು ಕೊಲೆಗೈದಿದ್ದಾನೆ. ಈ ವೇಳೆ ಹಸೀನಾರ ಅತ್ತೆ ಹಾಜಿರಾ(70) ಎಂಬವರು ದುಷ್ಕರ್ಮಿಯಿಂದ ಇರಿತಕ್ಕೊಳಗಾಗಿದ್ದು, ಗಂಭೀರವಾಗಿ ಗಾಯಗೊಂಡಿದ್ದಾರೆ.

Leave a Reply

Your email address will not be published. Required fields are marked *

ನವದೆಹಲಿ: ಜಿರಳೆ ಹೋರಾಟಕ್ಕೆ ಕೊನೆಗೂ ಮಣಿದ ಕೇಂದ್ರ ಸರಕಾರ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ…!

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ಭೀಕರ ದಾಳಿ…!

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಆರೋಗ್ಯದಲ್ಲಿ ಸುಧಾರಣೆ..!

ಬಂಟ್ವಾಳ: ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟು ಸಾರ್ವಜನಿಕರಲ್ಲಿ ಆತಂಕ..!

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

error: Content is protected !!