ಜನ ಮನದ ನಾಡಿ ಮಿಡಿತ

Advertisement

ವಿದ್ಯಾಗಿರಿಯಲ್ಲಿ ಮಿಜಾರುಗುತ್ತು ಆನಂದ ಆಳ್ವರಿಗೆ ನುಡಿನಮನ; ಆಳ್ವಾಸ್ ಕಾಲೇಜಿನ ಕೃಷಿಸಿರಿ ವೇದಿಕೆಯಲ್ಲಿ ನಡೆದ ಕಾರ್ಯಕ್ರಮ


ಸ್ವರ್ಗಸ್ಥರಾದ ಶತಾಯುಷಿ ಮಿಜಾರುಗುತ್ತು ಆನಂದ ಆಳ್ವ ಅವರಿಗೆ ನುಡಿನಮನ ಹಾಗೂ ಸಹಬೋಜನವು ಆಳ್ವಾಸ್ ಕಾಲೇಜಿನ ಕೃಷಿಸಿರಿ ವೇದಿಕೆಯಲ್ಲಿ ಶ್ರದ್ಧಾ-ಭಕ್ತಿಯಿಂದ ನೆರವೇರಿದೆ

ಈ ಸಂದರ್ಭ ನಿಟ್ಟೆ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷರಾದ ವಿನಯ ಹೆಗ್ಡೆ ಅವರು ನುಡಿನಮನ ಸಲ್ಲಿಸಿದ್ದಾರೆ. ಬಳಿಕ ಮಾತಾನಾಡಿದ ಇವರು, ಕೌಟುಂಬಿಕ ಜವಾಬ್ದಾರಿಯಿಂದ ತನ್ನ ವಿದ್ಯಾಭ್ಯಾಸ ಮೊಟುಕಾದರೂ, ವಿದ್ಯಾಕ್ಷೇತ್ರಕ್ಕೆ ಕೊಡುಗೆ ನೀಡಿ ಹಾಗೂ ವಿಶ್ವವಿದ್ಯಾಲಯಕ್ಕೆ ಸಮಾನಾಗಿ ಶಿಕ್ಷಣ ಸಂಸ್ಥೆ ಕಟ್ಟುವಲ್ಲಿ ತನ್ನ ಮಗನಿಗೆ ನೆರಳಾಗಿ ನಿಂತ ಆನಂದ ಆಳ್ವರ ವ್ಯಕ್ತಿತ್ವವು ಆದರ್ಶ ಹಾಗೂ ಅನುಕರಣೀಯ’ ಎಂದು ಹೇಳಿದ್ರು. ಇದೇ ವೇಳೆ ಮೂಡುಬಿದಿರೆ ಜೈನ ಮಠದ ಚಾರುಕೀರ್ತಿ ಭಟ್ಟಾರಕ ಪಂಡಿತಾಚಾರ್ಯವರ್ಯ ಮಾತನಾಡಿ, ‘ಹಿಂದೂ ಸಂಪ್ರದಾಯದ ಗರುಡ ಪುರಾಣದಲ್ಲಿ ಶ್ರಾದ್ಧ ಹಾಗೂ ಮೋಕ್ಷಗಳ ಕುರಿತ ವಿವರಗಳಿವೆ. ಧರ್ಮ ನಿಷ್ಠ, ಧ್ಯಾನಿ, ಯೋಗಾದಿ ವಿಚಾರಗಳಿಂದ ಮೋಕ್ಷ ಪಡೆಯುತ್ತಾರೆ ಎಂಬ ಉಲ್ಲೇಖವಿದೆ. ಅಂತಹ ಬದುಕನ್ನು ಆನಂದಿಸಿದವರು ‘ಆನಂದ ಆಳ್ವರು’ ಎಂದು ಹೇಳಿದ್ದಾರೆ. ಇನ್ನೂ ಈ ಸಂದರ್ಭದಲ್ಲಿ ಕೃಷಿಸಿರಿ ವೇದಿಕೆಯಲ್ಲಿ ರಚಿಸಲಾದ ಪುಷ್ಪಾಲಂಕೃತ ಬೃಹತ್ ಮಂಟಪದಲ್ಲಿ ಇರಿಸಲಾದ ಮಿಜಾರುಗುತ್ತು ಆನಂದ ಆಳ್ವರ ಭಾವಚಿತ್ರಕ್ಕೆ ಗಣ್ಯರು ಪುಷ್ಪಾರ್ಚನೆಗೈದಿದ್ದಾರೆ.

Leave a Reply

Your email address will not be published. Required fields are marked *

ನವದೆಹಲಿ: ಜಿರಳೆ ಹೋರಾಟಕ್ಕೆ ಕೊನೆಗೂ ಮಣಿದ ಕೇಂದ್ರ ಸರಕಾರ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ…!

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ಭೀಕರ ದಾಳಿ…!

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಆರೋಗ್ಯದಲ್ಲಿ ಸುಧಾರಣೆ..!

ಬಂಟ್ವಾಳ: ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟು ಸಾರ್ವಜನಿಕರಲ್ಲಿ ಆತಂಕ..!

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

error: Content is protected !!