ಜನ ಮನದ ನಾಡಿ ಮಿಡಿತ

Advertisement

ಉಡುಪಿ: ನಾಲ್ವರನ್ನು ಕೊಚ್ಚಿ ಕೊಂದ ಹಂತಕ ಬೆಳಗಾವಿಯಲ್ಲಿ ಪೊಲೀಸರ ಬಲೆಗೆ!

ಉಡುಪಿ : ಮಲ್ಪೆ ಪೊಲಿಸ್ ಠಾಣಾ ವ್ಯಾಪ್ತಿಯ ನೇಜಾರಿನಲ್ಲಿ ಒಂದೇ ಕುಟುಂಬದ ನಾಲ್ವರನ್ನು ಕೊಲೆ ಮಾಡಿದ ದಾರುಣ ಘಟನೆಯೊಂದು ಎಲ್ಲರ ಎದೆ ನಡುಗಿಸಿತ್ತು. ಇದೀಗ ಈ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಯನ್ನು ಪೊಲೀಸರು ಬೆಳಗಾವಿ ಜಿಲ್ಲೆ ರಾಯಬಾಗ ತಾಲೂಕಿನ ಕುಡಚಿಯಲ್ಲಿ ಬಂಧಿಸಿದ್ದಾರೆ. ಪ್ರವೀಣ್ ಅರುಣ್ ಚೌಗಲೆ ಬಂಧಿತ ಆರೋಪಿ.

ಈತನನ್ನು ಕುಡಚಿಯಲ್ಲಿ ಅರೆಸ್ಟ್ ಮಾಡಲಾಗಿದೆ. ಉಡುಪಿ ಪೊಲೀಸರು ಕುಡಚಿಗೆ ಆಗಮಿಸಿ ಆರೋಪಿಯನ್ನು ಕರೆದೊಯ್ದಿದ್ದಾರೆ..ಇಬ್ಬರು ಮಹಿಳೆಯರು ಹಾಗೂ ಇಬ್ಬರು ಮಕ್ಕಳು ಹತ್ಯೆ ಮಾಡಲಾಗಿತ್ತು ಹಾಗೂ ಕೊಲೆಯಾದವರನ್ನು ಹಸೀನಾ (46 ), ಅಫ್ನಾನ್ (23 ), ಅಯ್ನಾಝ್ (21 ), ಆಸಿಂ (12 ) ಎಂದು ಗುರುತಿಸಲಾಗಿತ್ತು.

ಈ ಘಟನಾ ಸ್ಥಳಕ್ಕೆ ಮಲ್ಪೆ ಪೊಲೀಸರು ಭೇಟಿ ನೀಡಿದ್ದು, ಸ್ಥಳೀಯ ಸಿಸಿಟಿವಿ ದೃಶ್ಯಾವಳಿಗಳ ಸಹಿತ, ಮಾಹಿತಿ ಸಂಗ್ರಹಿಸುತ್ತಿದ್ದರು. ಏಕಾಏಕಿ ಮನೆಗೆ ನುಗ್ಗಿ ಮಾತಿನ ಚಕಮಕಿ ನಡೆದ ಬಳಿಕ ಮೊದಲು ಮಹಿಳೆ ಹಾಗೂ ಮಕ್ಕಳಾದ ಹಸಿನಾ, ಅಫ್ನಾನ್, ಐನಾಜ್ ಗೆ ಇರಿದ ದುಷ್ಕರ್ಮಿ, ಬಳಿಕ ಅಲ್ಲೇ ಆಟವಾಡುತ್ತಿದ್ದ ಆಸೀಮ್ ಸದ್ದು ಕೇಳಿ ಒಳ ಬರುತ್ತಿದ್ದಂತೆ ಆತನನ್ನು ಕೂಡ ದುಷ್ಕರ್ಮಿ ಇರಿದುಕೊಂದಿದ್ದಾನೆ ಎನ್ನಲಾಗಿತ್ತು. ಬೊಬ್ಬೆ ಕೇಳಿ ಹೊರಗಡೆ ಬಂದ ಪಕ್ಕದ ಮನೆ ಯುವತಿಯನ್ನು ಬೆದರಿಸಿ ದುಷ್ಕರ್ಮಿ ಅಲ್ಲಿಂದ ಕಾಲ್ಕಿತ್ತಿದ್ದನು. ಇನ್ನು ಜೀವಾಂತ್ಯಗೊಳಿಸಿದ ಮಹಿಳೆಯ ಅತ್ತೆಗೂ ತೀವ್ರ ತರಹದ ಗಾಯಗಳಾಗಿದ್ದವು. ಈ ಘಟನೆಯ ಕುರಿತಂತೆ ತನಿಖೆಗೆ ಇಳಿದಂತ ಪೊಲೀಸರು, ಬೆಳಗಾವಿ ಜಿಲ್ಲೆಯ ರಾಯಭಾಗ ತಾಲೂಕಿನ ಕುಡಚಿಯಲ್ಲಿ ಆರೋಪಿ ಪ್ರವೀಣ್ ಅರುಣ್ ಚೌಗಲೆ ಎಂಬಾತನನ್ನು ಬಂಧಿಸಿದ್ದಾರೆ.

ಬಂಧಿತ ಆರೋಪಿ ಮಂಗಳೂರು ಏರ್ ಪೋರ್ಟ್ ನಲ್ಲಿ ಸೆಕ್ಯುರಿಟಿ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದನು ಎಂದು ಹೇಳಲಾಗುತ್ತಿದ್ದು ಈತನ ಹೆಸರು ಪ್ರವೀಣ್ ಅರುಣ್ ಚೌಗಲೆ ಎಂದು ತಿಳಿದು ಬಂದಿದೆ. ಮಹಾರಾಷ್ಟ್ರ ಸಾಂಗ್ಲಿ ಮೂಲದ ಅರುಣ್ ಚೌಗಲೆ CRPF ಸಿಬ್ಬಂದಿಯಾಗಿದ್ದ. ಕುಡಚಿಯ ಸಂಬಂಧಿ ಮನೆಯಲ್ಲಿ ಅಡಗಿ ಕುಳಿತಿದ್ದ ಅರುಣ್ ಚೌಗಲೆ ನನ್ನು ಮೊಬೈಲ್ ಟವರ್ ಲೊಕೇಶನ್ ಆಧರಿಸಿ ಆರೋಪಿ ಅರೆಸ್ಟ್ ಮಾಡಲಾಗಿದೆ. ಈಗ ಆತನನ್ನ ಕಡಚಿಯಲ್ಲಿ ಬಂಧಿಸಿದ್ದು, ಉಡುಪಿಗೆ ಕರೆತರಲಾಗುತ್ತಿದೆ.

Leave a Reply

Your email address will not be published. Required fields are marked *

ಉಡುಪಿ : ಕಾಪುವಿನಲ್ಲಿ ಭೀಕರ ಅಪಘಾತ…!

ಬಂಟ್ವಾಳ : ಸಜಿಪದಲ್ಲಿ ಭೀಕರ ಅಪಘಾತ…!

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ….!

ಬಂಟ್ವಾಳ: ಬಡಗಬೆಳ್ಳೂರಿನಲ್ಲಿ ಕುಸಿದು ಬಿದ್ದ ಸೇತುವೆ; ಜನ ಸಂಚಾರಕ್ಕೆ ಭಾರೀ ಸಂಕಷ್ಟ…..!

ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ನಿಧನ….!

ಬಂಟ್ವಾಳ: ಮಿನಿ ವಿಧಾನಸೌಧ ಮುಂಭಾಗದ ಕ್ಯಾಂಟೀನ್‌ನಲ್ಲಿ ಅನಿಲ ಸೋರಿಕೆ ಆತಂಕ….!

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

error: Content is protected !!