ಉಡುಪಿ : ಮಲ್ಪೆ ಪೊಲಿಸ್ ಠಾಣಾ ವ್ಯಾಪ್ತಿಯ ನೇಜಾರಿನಲ್ಲಿ ಒಂದೇ ಕುಟುಂಬದ ನಾಲ್ವರನ್ನು ಕೊಲೆ ಮಾಡಿದ ದಾರುಣ ಘಟನೆಯೊಂದು ಎಲ್ಲರ ಎದೆ ನಡುಗಿಸಿತ್ತು. ಇದೀಗ ಈ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಯನ್ನು ಪೊಲೀಸರು ಬೆಳಗಾವಿ ಜಿಲ್ಲೆ ರಾಯಬಾಗ ತಾಲೂಕಿನ ಕುಡಚಿಯಲ್ಲಿ ಬಂಧಿಸಿದ್ದಾರೆ. ಪ್ರವೀಣ್ ಅರುಣ್ ಚೌಗಲೆ ಬಂಧಿತ ಆರೋಪಿ.
ಈತನನ್ನು ಕುಡಚಿಯಲ್ಲಿ ಅರೆಸ್ಟ್ ಮಾಡಲಾಗಿದೆ. ಉಡುಪಿ ಪೊಲೀಸರು ಕುಡಚಿಗೆ ಆಗಮಿಸಿ ಆರೋಪಿಯನ್ನು ಕರೆದೊಯ್ದಿದ್ದಾರೆ..ಇಬ್ಬರು ಮಹಿಳೆಯರು ಹಾಗೂ ಇಬ್ಬರು ಮಕ್ಕಳು ಹತ್ಯೆ ಮಾಡಲಾಗಿತ್ತು ಹಾಗೂ ಕೊಲೆಯಾದವರನ್ನು ಹಸೀನಾ (46 ), ಅಫ್ನಾನ್ (23 ), ಅಯ್ನಾಝ್ (21 ), ಆಸಿಂ (12 ) ಎಂದು ಗುರುತಿಸಲಾಗಿತ್ತು.
ಈ ಘಟನಾ ಸ್ಥಳಕ್ಕೆ ಮಲ್ಪೆ ಪೊಲೀಸರು ಭೇಟಿ ನೀಡಿದ್ದು, ಸ್ಥಳೀಯ ಸಿಸಿಟಿವಿ ದೃಶ್ಯಾವಳಿಗಳ ಸಹಿತ, ಮಾಹಿತಿ ಸಂಗ್ರಹಿಸುತ್ತಿದ್ದರು. ಏಕಾಏಕಿ ಮನೆಗೆ ನುಗ್ಗಿ ಮಾತಿನ ಚಕಮಕಿ ನಡೆದ ಬಳಿಕ ಮೊದಲು ಮಹಿಳೆ ಹಾಗೂ ಮಕ್ಕಳಾದ ಹಸಿನಾ, ಅಫ್ನಾನ್, ಐನಾಜ್ ಗೆ ಇರಿದ ದುಷ್ಕರ್ಮಿ, ಬಳಿಕ ಅಲ್ಲೇ ಆಟವಾಡುತ್ತಿದ್ದ ಆಸೀಮ್ ಸದ್ದು ಕೇಳಿ ಒಳ ಬರುತ್ತಿದ್ದಂತೆ ಆತನನ್ನು ಕೂಡ ದುಷ್ಕರ್ಮಿ ಇರಿದುಕೊಂದಿದ್ದಾನೆ ಎನ್ನಲಾಗಿತ್ತು. ಬೊಬ್ಬೆ ಕೇಳಿ ಹೊರಗಡೆ ಬಂದ ಪಕ್ಕದ ಮನೆ ಯುವತಿಯನ್ನು ಬೆದರಿಸಿ ದುಷ್ಕರ್ಮಿ ಅಲ್ಲಿಂದ ಕಾಲ್ಕಿತ್ತಿದ್ದನು. ಇನ್ನು ಜೀವಾಂತ್ಯಗೊಳಿಸಿದ ಮಹಿಳೆಯ ಅತ್ತೆಗೂ ತೀವ್ರ ತರಹದ ಗಾಯಗಳಾಗಿದ್ದವು. ಈ ಘಟನೆಯ ಕುರಿತಂತೆ ತನಿಖೆಗೆ ಇಳಿದಂತ ಪೊಲೀಸರು, ಬೆಳಗಾವಿ ಜಿಲ್ಲೆಯ ರಾಯಭಾಗ ತಾಲೂಕಿನ ಕುಡಚಿಯಲ್ಲಿ ಆರೋಪಿ ಪ್ರವೀಣ್ ಅರುಣ್ ಚೌಗಲೆ ಎಂಬಾತನನ್ನು ಬಂಧಿಸಿದ್ದಾರೆ.
ಬಂಧಿತ ಆರೋಪಿ ಮಂಗಳೂರು ಏರ್ ಪೋರ್ಟ್ ನಲ್ಲಿ ಸೆಕ್ಯುರಿಟಿ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದನು ಎಂದು ಹೇಳಲಾಗುತ್ತಿದ್ದು ಈತನ ಹೆಸರು ಪ್ರವೀಣ್ ಅರುಣ್ ಚೌಗಲೆ ಎಂದು ತಿಳಿದು ಬಂದಿದೆ. ಮಹಾರಾಷ್ಟ್ರ ಸಾಂಗ್ಲಿ ಮೂಲದ ಅರುಣ್ ಚೌಗಲೆ CRPF ಸಿಬ್ಬಂದಿಯಾಗಿದ್ದ. ಕುಡಚಿಯ ಸಂಬಂಧಿ ಮನೆಯಲ್ಲಿ ಅಡಗಿ ಕುಳಿತಿದ್ದ ಅರುಣ್ ಚೌಗಲೆ ನನ್ನು ಮೊಬೈಲ್ ಟವರ್ ಲೊಕೇಶನ್ ಆಧರಿಸಿ ಆರೋಪಿ ಅರೆಸ್ಟ್ ಮಾಡಲಾಗಿದೆ. ಈಗ ಆತನನ್ನ ಕಡಚಿಯಲ್ಲಿ ಬಂಧಿಸಿದ್ದು, ಉಡುಪಿಗೆ ಕರೆತರಲಾಗುತ್ತಿದೆ.
ಬೇಕಲ ಕೋಟೆ ಸಮೀಪದ ಪಳ್ಳಿಕರೆ ಕಡಲತೀರದಲ್ಲಿ ಭಾನುವಾರ ಸಂಜೆ ಸಂಭವಿಸಿದ ದುರ್ಘಟನೆಯಲ್ಲಿ ಇಬ್ಬರು ಕಾಲೇಜು ವಿದ್ಯಾರ್ಥಿಗಳು ಸಮುದ್ರದಲ್ಲಿ ಕೊಚ್ಚಿಹೋಗಿದ್ದು, ಅವರಿಗಾಗಿ…
ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ ಹೊಡೆದ ಘಟನೆ ಸುಬ್ರಹ್ಮಣ್ಯ ಸಮೀಪದ ಕುಲ್ಕುಂದ ಎಂಬಲ್ಲಿ ನಡೆದಿದೆ. ರಾತ್ರಿ ವೇಳೆ…
ಕಡಬ ತಾಲೂಕು ಕೊಯಿಲ ಮತ್ತು ರಾಮಕುಂಜ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕ ರಸ್ತೆಯುದ್ದಕ್ಕೂ ಉಂಟಾಗಿರುವ ಹೊಂಡಗಳಿಗೆ ಸ್ಥಳಿಯರು ಶ್ರಮ…
ರಾಷ್ಟ್ರೀಯ ಹೆದ್ದಾರಿಯ ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದಲ್ಲಿ ಸರ್ವೀಸ್ ರಸ್ತೆ ಹೊಂಡಗುಂಡಿಗಳಿಂದ ತುಂಬಿ ವಾಹನ ಸಂಚಾರಕ್ಕೆ ತೊಂದರೆಯಾಗುತ್ತಿದೆ ಎಂದು ಸ್ಥಳೀಯರು…
ಮಾದಕ ದ್ರವ್ಯ ಸಾಗಾಟ ಹಾಗೂ ಮಾರಾಟ ಪ್ರಕರಣಗಳಲ್ಲಿ ಭಾಗಿಯಾಗಿರುವ ಆರೋಪದಡಿ ಮಣಿಪಾಲ ಪೊಲೀಸ್ ಠಾಣೆ ವ್ಯಾಪ್ತಿಯ 80 ಬಡಗಬೆಟ್ಟು ಗ್ರಾಮದ…
ಮಂಗಳೂರು ನಗರದ ಪದವು ಗ್ರಾಮದ ಜೋಡುಕಟ್ಟೆ ಮರೋಳಿ ಹತ್ತಿರ ಜೂನ್ 11 ರಂದು ಅಕ್ರಮವಾಗಿ ಆನೆದಂತಗಳನ್ನು ಮಾರಾಟಕ್ಕೆ ಯತ್ನಿಸುತಿದ್ದವರನ್ನು ಬಂಧಿಸಲಾಗಿದೆ.…