ಮುಲ್ಕಿ: ಇತಿಹಾಸ ಪ್ರಸಿದ್ಧ ಮುಲ್ಕಿ ಸೀಮೆಯ ಒಂಬತ್ತು ಮಾಗಣೆಯ ಶಿಮಂತೂರು ಶ್ರೀ ಆದಿ ಜನಾರ್ಧನ ದೇವಸ್ಥಾನದಲ್ಲಿ ದೀಪಾವಳಿಯ ಪ್ರಯುಕ್ತ ದೊಡ್ಡ ರಂಗ ಪೂಜೆ, ಬಲಿಂದ್ರ ಪೂಜೆ, ಶ್ರೀ ದೇವರ ಉತ್ಸವ ಬಲಿ ದೇವಸ್ಥಾನದ ತಂತ್ರಿಗಳಾದ ಶಿಬರೂರು ವೇದವ್ಯಾಸ ತಂತ್ರಿ ಹಾಗೂ ಅರ್ಚಕ ಪುರುಷೋತ್ತಮ ಭಟ್ ಪೌರೋಹಿತ್ಯದಲ್ಲಿ ವಿಜೃಂಭಣೆಯಿಂದ ನಡೆಯಿತು.
ಈ ಸಂದರ್ಭದಲ್ಲಿ ಕಿಲ್ಪಾಡಿ ಗ್ರಾಪಂ ಅಧ್ಯಕ್ಷ ವಿಕಾಸ್ ಶೆಟ್ಟಿ, ಆಡಳಿತ ಮೊಕ್ತೇಸರ ಚಂದ್ರಹಾಸ ಶೆಟ್ಟಿ, ವ್ಯವಸ್ಥಾಪನಾ ಸಮಿತಿಯ ಸದಸ್ಯರಾದ ದಿನೇಶ್ಚಂದ್ರ ಅಜಿಲ, ಹರೀಶ್ ಶೆಟ್ಟಿ, ಕಲ್ಪನಾ ಬಲ್ಲಾಳ್,ಮಾಜೀ ಮೊಕ್ತೇಸರ ಉದಯ್ ಕುಮಾರ್ ಶೆಟ್ಟಿ, ಗುರುಪ್ರಸಾದ್ ಭಟ್ ಮುಂಡ್ಕೂರು, ಶ್ರೀಪತಿ ಭಟ್, ಪ್ರಬಂಧಕ ಕಿಶೋರ್ ಶೆಟ್ಟಿ, ಯುವಕ ಮಂಡಲದ ಉಪಾಧ್ಯಕ್ಷ ಪ್ರವೀಣ್,ಉದಯ ಕುಮಾರ್ ಶೆಟ್ಟಿ ಅಧಿಧನ್ ಮತ್ತಿತರರು ಉಪಸ್ಥಿತರಿದ್ದರು.
ಮುಡಿಪು-ಬಿ. ಸಿ. ರೋಡ್ ರಸ್ತೆಯ ಸಜಿಪ ಎಂಬಲ್ಲಿ ಕಾರು ಮತ್ತು ಆಕ್ಟಿವಾ ಸ್ಕೂಟರ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ…
ಎಂಆರ್ಜಿ ಸಮೂಹದ ಸಂಸ್ಥಾಪಕ ಹಾಗೂ ಅಧ್ಯಕ್ಷರಾದ ಡಾ. ಕೆ. ಪ್ರಕಾಶ್ ಶೆಟ್ಟಿ ಅವರು ತಮ್ಮ ಉದ್ಯಮ ಸಮೂಹಕ್ಕೆ ಖಾಸಗಿ ವಿಮಾನವನ್ನು…
ಬಸ್ವೊಂದು ಸ್ಕೂಟಿಗೆ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟಿ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಕಾಪು…
ಮುಡಿಪು-ಬಿ. ಸಿ. ರೋಡ್ ರಸ್ತೆಯ ಸಜಿಪ ಎಂಬಲ್ಲಿ ಕಾರು ಮತ್ತು ಆಕ್ಟಿವಾ ಸ್ಕೂಟರ್ ನಡುವೆ ಸಂಭವಿಸಿದ ಭೀಕರ ರಸ್ತೆ…
ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ ನೀಡಿ ದೇವಿ ಮೂಕಾಂಬಿಕಾ…
ಮಳೆಗಾಲ ಆರಂಭವಾಗುತ್ತಿದ್ದಂತೆ ಸೇತುವೆಯೊಂದು ಕುಸಿದು ಬಿದ್ದ ಪರಿಣಾಮ ಹಲವು ಗ್ರಾಮಗಳ ಸಂಪರ್ಕದ ಕೊಂಡಿ ಕಳಚಿ ಬಿದ್ದು, ಜನರು ದ್ವೀಪದಂತೆ, ಹಳ್ಳಿಯೊಳಗೆ…