ಬಜಪೆ: ಕಳೆದ 26 ವರ್ಷಗಳಿಂದ ವಿವಿಧಾಕೃತಿಯ ಗೂಡುದೀಪ ನಿರ್ಮಿಸುತ್ತ ಬಂದಿರುವ ಬಜಪೆ ಸಮೀಪದ ಪಡುಪೆರಾರದ ಜಿಲ್ಲಾ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಶ್ರೀ ನಾಗಬ್ರಹ್ಮ ಯುವಕ ಮಂಡಲವು ಸುಮಾರು 40 ಕ್ಕೂ ಹೆಚ್ಚು ಕಾರ್ಯಕರ್ತರ ಪರಿಶ್ರಮ ದಿಂದ ಈ ಬಾರಿಯ ದೀಪಾವಳಿ ಹಬ್ಬಕ್ಕೆ 27 ನೇ ವರ್ಷದ ಗೂಡುದೀಪವಾಗಿ 150 ಕೆಜಿ ಭಾರದ 27 ಫೀಟ್ ಉದ್ದ ಹಾಗೂ 7 ಫೀಟ್ ಅಗಲದ ಚಂದ್ರಯಾನ 3 ಮಾದರಿಯ ಬೃಹತ್ ಗೂಡುದೀಪ ನಿರ್ಮಾಣ ಮಾಡಿದ್ದಾರೆ.
ಇಸ್ರೋ ವಿಜ್ಞಾನಿಗಳಿಗೆ ಸದಾ ಪ್ರೋತ್ಸಾಹ ನೀಡುತ್ತಾ ಬಂದಿರುವ ದೇಶದ ಪ್ರಧಾನಿ ನರೇಂದ್ರ ಮೋದಿಯವರು ಮತ್ತೊಮ್ಮೆ 2024 ರಲ್ಲಿ ಪ್ರಧಾನಿಯಾಗಲೆಂದು ಸಂದೇಶ ನೀಡಿದ್ದಾರೆ.
ಗೂಡುದೀಪ ಉದ್ಘಾಟನೆ ಕಾರ್ಯಕ್ರಮದಲ್ಲಿ ಶ್ರೀ ಕ್ಷೇತ್ರ ಬಲಾವಂಡಿ ದೈವದ ಮುಕ್ಕಾಲ್ದಿ ಬಾಲಕೃಷ್ಣ ಶೆಟ್ಟಿ, ಗ್ರಾಮ ಪಂಚಾಯತ್ ಉಪಾಧ್ಯಕ್ಷ ಜಯಂತ್ ಕಟ್ಟಸ್ಥಾನ, ಪುರುಷೋತ್ತಮ್ ಮಳಲಿ, ಕೃಷ್ಣ ಕಜೆಪದವು, ರಾಜೇಶ್ ಗಂಜಿಮಠ, ಪಡುಪೆರಾರ ಗ್ರಾಮ ಪಂಚಾಯತ್ ನ ಸದಸ್ಯರುಗಳು , ಶ್ರೀ ನಾಗ ಬ್ರಹ್ಮ ಯುವಕ ಮಂಡಲದ ಅಧ್ಯಕ್ಷ ಶೇಖರ್ ಸಪಳಿಗ, ಗೌರವ ಅಧ್ಯಕ್ಷರು, ಪದಾಧಿಕಾರಿಗಳು, ಗ್ರಾಮಸ್ಥರು ಉಪಸ್ಥಿತರಿದ್ದರು.
ಗ್ರಾಮ ಪಂಚಾಯತ್ ಸೇರಿದಂತೆ ಸರ್ಕಾರದ ಎಲ್ಲಾ ಸ್ಥಳೀಯ ಸಂಸ್ಥೆಗಳಲ್ಲಿ ಕೃತಕ ಬುದ್ಧಿಮತ್ತೆ (AI) ವ್ಯವಸ್ಥೆ ಅಳವಡಿಕೆ ಅನಿವಾರ್ಯವಾಗಲಿದೆ ಎಂದು ರಾಜ್ಯ…
ಬೆಂಗಳೂರಿನಲ್ಲಿ 'ಸೇಫ್ ಫುಟ್ಪಾತ್' ಅಭಿಯಾನಕ್ಕೆ ಭರ್ಜರಿ ಸ್ಪಂದನೆ ಸಿಕ್ಕಿದೆ. ಕಳೆದ ಒಂದು ತಿಂಗಳಲ್ಲಿ 750 ಕಿಲೋಮೀಟರ್ಗೂ ಹೆಚ್ಚು ಪಾದಚಾರಿ ಮಾರ್ಗಗಳ…
ಮಧ್ಯಪ್ರಾಚ್ಯದಲ್ಲಿ ಇರಾನ್ ಬಿಕ್ಕಟ್ಟು ದಿನೇದಿನೇ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ, ಅಮೆರಿಕ ತನ್ನ ಯುದ್ಧ ತಂತ್ರಗಳನ್ನು ಮರುಪರಿಶೀಲಿಸಲು ಮುಂದಾಗಿದೆ. ಇರಾನ್ನ ಭೂಗತ ಬಂಕರ್ಗಳು…
ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಪೋಷಕ ಸದಸ್ಯರೂ, ಬಂಟ್ಸ್ ಅಸೋಸಿಯೇಷನ್ ನಾರ್ತ್ ಅಮೆರಿಕಾ (BANA) ಅಧ್ಯಕ್ಷರೂ ಆದ ಶ್ರೀ ಮಂಜುನಾಥ್…
ಉಡುಪಿ ತಾಲೂಕಿನಲ್ಲಿ ಕಡಲ್ಕೊರೆತದಿಂದ ಹಾನಿಗೊಳಗಾಗಿರುವ ಹೆಜಮಾಡಿ, ಪಡುಬಿದ್ರಿ, ಎರ್ಮಾಳು, ಕಾಪು, ಪೊಲಿಪು ಹಾಗೂ ಕಟಪಾಡಿ-ಮಟ್ಟು ಪ್ರದೇಶಗಳಿಗೆ ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ.…
ಮಳೆ ಸುರಿದರೆ ಸಾಕು, ಬಂಟ್ವಾಳ ತಾಲೂಕಿನ ಮಾಣಿ ಸಮೀಪದ ಪೆರಾಜೆ ಗ್ರಾಮದ ಜೋಗಿಬೆಟ್ಟು ರಸ್ತೆಯಲ್ಲಿ ಸಂಚಾರ ದುಸ್ತರವಾಗುತ್ತಿದೆ. ರಾಷ್ಟ್ರೀಯ ಹೆದ್ದಾರಿಗೆ…