ಕ್ರೀಡೆ

ಕಿವೀಸ್​ ವಿರುದ್ಧದ ಸೇಡಿನ ಸಮರದಲ್ಲಿ ಗೆದ್ದು 4ನೇ ಬಾರಿಗೆ ವಿಶ್ವಕಪ್ ಫೈನಲ್​ ನತ್ತ ಭಾರತ

ವಾಂಖೆಡೆ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಐಸಿಸಿ ಏಕದಿನ ಕ್ರಿಕೆಟ್ ಟೂರ್ನಿ ಪಂದ್ಯದಲ್ಲಿ ಭಾರತ ತಂಡ ನ್ಯೂಝಿಲ್ಯಾಂಡ್ ವಿರುದ್ಧ 70 ರನ್ ಗಳ ಜಯಭೇರಿ ಬಾರಿಸಿದೆ.

ಏಕದಿನ ವಿಶ್ವಕಪ್ ಟೂರ್ನಿಯ ಮೊದಲ ಸೆಮಿಫೈನಲ್​ನಲ್ಲಿ ನ್ಯೂಜಿಲೆಂಡ್ ವಿರುದ್ಧ ಜಯಿಸಿದ ಭಾರತ, 4ನೇ ಬಾರಿಗೆ ಫೈನಲ್ ಪ್ರವೇಶಿಸಿದೆ. 2011ರ ನಂತರ ಫೈನಲ್​ಗೆ ಎಂಟ್ರಿಕೊಟ್ಟಿದೆ.

ಈ ಗೆಲುವಿನೊಂದಿಗೆ 2019ರ ವಿಶ್ವಕಪ್ ಸೆಮಿಫೈನಲ್​ ಸೋಲಿನ ಸೇಡನ್ನು ರೋಹಿತ್ ಪಡೆ, ತೀರಿಸಿಕೊಂಡಿದೆ. ಕೊನೆಯ ಬಾರಿ 2011ರಲ್ಲಿ ಫೈನಲ್​ಗೇರಿದ್ದ ಭಾರತ ಪ್ರಶಸ್ತಿ ಗೆದ್ದಿತ್ತು. 140 ಕೋಟಿ ಭಾರತೀಯರ ಕನಸಿಗೆ ಇನ್ನೊಂದೆ ಹೆಜ್ಜೆ ಬಾಕಿ ಇದೆ

ವಾಂಖೆಡೆ ಮೈದಾನದಲ್ಲಿ ನಡೆದ ವಿಶ್ವಕಪ್​ನ ಮೊದಲ ಸೆಮಿಫೈನಲ್​ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್​ ನಡೆಸಿದ ಭಾರತ, ನಿಗದಿತ 50 ಓವರ್​​ಗಳಲ್ಲಿ 4 ವಿಕೆಟ್ ನಷ್ಟಕ್ಕೆ 397 ರನ್​​ಗಳ ಬೃಹತ್ ಮೊತ್ತ ಕಲೆ ಹಾಕಿತು. ವಿರಾಟ್ ಕೊಹ್ಲಿ 117 ರನ್, ಶ್ರೇಯಸ್ ಅಯ್ಯರ್ 105 ರನ್, ಶುಭ್ಮನ್ ಗಿಲ್ ಅಜೇಯ 80 ರನ್ ಗಳಿಸಿದರು. ಈ ಗುರಿ ಬೆನ್ನಟ್ಟಿದ ನಿಗದಿತ 48.5 ಓವರ್​​​ಗಳಲ್ಲಿ 327 ರನ್​ಗಳಿಗೆ ಆಲೌಟ್​ ಆಯಿತು. ಡೇರಿಲ್ ಮಿಚೆಲ್ 134 ರನ್ ಗಳಿಸಿದರು. ಭಾರತದ ಪರ ಶಮಿ 7 ವಿಕೆಟ್ ಪಡೆದು ಮಿಂಚಿದರು.

ಅಭಿಮತ ಟಿವಿ

Abhimatha TV is a trusted channel renowned for its dedication to honest journalism and its unwavering commitment to showcasing the rich culture, heritage, and traditions of Tulunadu. With a focus on delivering unbiased news and promoting the region's vibrant art forms, rituals, and cultural events, Abhimatha TV has become a beacon of authenticity and pride for the community. Established in 2018, the channel was founded by Mamatha P. Shetty (Managing Partner) and Kanyana Sadhashiva Shetty (Chief Promoter) with a mission to provide truthful reporting and celebrate the essence of our heritage.

Recent Posts

ಬಂಟ್ವಾಳ: ಕಾರು ಮತ್ತು ಆಕ್ಟಿವಾ ಸ್ಕೂಟರ್ ನಡುವೆ ಭೀಕರ ರಸ್ತೆ ಅಪ*ಘಾತ….!

ಮುಡಿಪು-ಬಿ. ಸಿ. ರೋಡ್ ರಸ್ತೆಯ ಸಜಿಪ ಎಂಬಲ್ಲಿ ಕಾರು ಮತ್ತು ಆಕ್ಟಿವಾ ಸ್ಕೂಟರ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ…

7 hours ago

ಮಂಗಳೂರು: ಎಂ.ಆರ್.ಜಿ.ಗ್ರೂಪ್ ಗೆ ಹಾರುವ ಹಕ್ಕಿ ಸೇರ್ಪಡೆ..!

ಎಂಆರ್‌ಜಿ ಸಮೂಹದ ಸಂಸ್ಥಾಪಕ ಹಾಗೂ ಅಧ್ಯಕ್ಷರಾದ ಡಾ. ಕೆ. ಪ್ರಕಾಶ್ ಶೆಟ್ಟಿ ಅವರು ತಮ್ಮ ಉದ್ಯಮ ಸಮೂಹಕ್ಕೆ ಖಾಸಗಿ ವಿಮಾನವನ್ನು…

7 hours ago

ಉಡುಪಿ : ಕಾಪುವಿನಲ್ಲಿ ಭೀಕರ ಅಪಘಾತ…!

  ಬಸ್‌ವೊಂದು ಸ್ಕೂಟಿಗೆ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟಿ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಕಾಪು…

13 hours ago

ಬಂಟ್ವಾಳ : ಸಜಿಪದಲ್ಲಿ ಭೀಕರ ಅಪಘಾತ…!

  ಮುಡಿಪು-ಬಿ. ಸಿ. ರೋಡ್ ರಸ್ತೆಯ ಸಜಿಪ ಎಂಬಲ್ಲಿ ಕಾರು ಮತ್ತು ಆಕ್ಟಿವಾ ಸ್ಕೂಟರ್ ನಡುವೆ ಸಂಭವಿಸಿದ ಭೀಕರ ರಸ್ತೆ…

13 hours ago

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ….!

ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ ನೀಡಿ ದೇವಿ ಮೂಕಾಂಬಿಕಾ…

4 days ago

ಬಂಟ್ವಾಳ: ಬಡಗಬೆಳ್ಳೂರಿನಲ್ಲಿ ಕುಸಿದು ಬಿದ್ದ ಸೇತುವೆ; ಜನ ಸಂಚಾರಕ್ಕೆ ಭಾರೀ ಸಂಕಷ್ಟ…..!

ಮಳೆಗಾಲ ಆರಂಭವಾಗುತ್ತಿದ್ದಂತೆ ಸೇತುವೆಯೊಂದು ಕುಸಿದು ಬಿದ್ದ ಪರಿಣಾಮ ಹಲವು ಗ್ರಾಮಗಳ ಸಂಪರ್ಕದ ಕೊಂಡಿ ಕಳಚಿ ಬಿದ್ದು, ಜನರು ದ್ವೀಪದಂತೆ, ಹಳ್ಳಿಯೊಳಗೆ…

4 days ago