ಒಂದೇ ಮನೆಯಲ್ಲಿ ನಾಲ್ವರ ಹತ್ಯಾಕಾಂಡ ನಡೆದಿದ್ದ ರಕ್ತಪಾತ ಬೆಚ್ಚಿ ಬೀಳಿಸಿದೆ. ಗಗನಸಖಿ ಅಯ್ನಾಸ್ಳನ್ನು ಬರ್ಬರವಾಗಿ ಹತ್ಯೆ ಮಾಡಿದ ಕಿರಾತಕನ ಕ್ರೌರ್ಯ ಬಗೆದಷ್ಟು ಬಯಲಾಗ್ತಿದೆ. ಸದ್ಯ ಪೊಲೀಸರ ವಶದಲ್ಲಿರುವ ಆರೋಪಿ ಪ್ರವೀಣ ಚೌಗಲೆ ತಾನು ಯಾರು? ಅಯ್ನಾಸ್ಳನ್ನು ಕೊಲೆ ಮಾಡಲು ಕಾರಣವೇನು ಅನ್ನೋ ಸ್ಫೋಟಕ ಸಂಗತಿಗಳನ್ನ ಬಾಯ್ಬಿಟ್ಟಿದ್ದಾನೆ.
ಆರೋಪಿ ಪ್ರವೀಣ ಚೌಗಲೆ ಏರ್ ಇಂಡಿಯಾ ವಿಮಾನದಲ್ಲಿ ಕ್ಯಾಬಿನ್ ಕ್ರ್ಯೂ ಆಗಿ ಕೆಲಸ ಮಾಡುತ್ತಿದ್ದ. ಕ್ಯಾಬಿನ್ ಕ್ರ್ಯೂ ಅಂದ್ರೆ ವಿಮಾನ ಹತ್ತಿದ ಮೇಲೆ ಪ್ರಯಾಣಿಕರು ವಿವರಣೆ ನೀಡೋ ಕಾರ್ಯ. ಇದೇ ವಿಮಾನದಲ್ಲಿ ಸಹೋದ್ಯೋಗಿಯಾಗಿದ್ದು ಗಗನಸಖಿ ಅಯ್ನಾಸ್. ಅಯ್ನಾಸ್ ಅಂದ್ರೆ ಪ್ರವೀಣ್ ಅದೆಷ್ಟು ಇಷ್ಟ ಪಡುತ್ತಿದ್ದ ಅಂದ್ರೆ, ಅಯ್ನಾಸ್ ಮೊಬೈಲ್ ನಂಬರ್ ಬ್ಲಾಕ್ ಮಾಡಿದ್ದಕ್ಕೆ ಪ್ರವೀಣ್ ಚೌಗಲೆ ಹುಚ್ಚನಂತಾಗಿದ್ದ.
ಅಯ್ನಾಸ್ ತನ್ನಿಂದ ದೂರ ಮಾಡಿದ್ದಕ್ಕೆ ಕೋಪಗೊಂಡ ಪ್ರವೀಣ್ ಕೊಲೆ ಮಾಡಲು ನಿರ್ಧರಿಸಿದ್ದ. ಈತನ ಉದ್ದೇಶ ಅಯ್ನಾಸ್ ಒಬ್ಬಳನ್ನೇ ಕೊಲೆ ಮಾಡುವುದಾಗಿತ್ತು. ಆದರೆ, ಸಾಕ್ಷ್ಯ ನಾಶದ ಕಾರಣಕ್ಕೆ ಅಯ್ನಾಸ್ ಜೊತೆಗಿದ್ದ ಅಮ್ಮ, ತಮ್ಮ, ತಂಗಿಯನ್ನು ಹತ್ಯೆ ಮಾಡಿದ್ದಾನೆ. ಕೊಲೆ ಮಾಡಿದ ಬಳಿಕ ಪ್ರವೀಣ್ ಓಡಾಟ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಇದಿಷ್ಟೇ ಅಲ್ಲ ಎಲ್ಲಾ ಸಿಸಿಟಿವಿಗಳನ್ನು ಪರಿಶೀಲನೆ ನಡೆಸಿದ ಪೊಲೀಸರಿಗೆ ಹಂತಕ ಪ್ರವೀಣ್ ಕೊಲೆ ಮಾಡೋದಕ್ಕೂ ಮೊದಲೇ ಅಯ್ನಾಸ್ ಮನೆಗೆ ಬಂದು ಹೋಗಿರುವ ಶಂಕೆ ವ್ಯಕ್ತವಾಗಿದೆ. ಉಡುಪಿ ಪೊಲೀಸರು ಪ್ರವೀಣ್ ಹೆಜ್ಜೆ ಗುರುತನ್ನೇ ಹಿಂಬಾಲಿಸಿಕೊಂಡು ಹೋಗಿ ಬಂಧಿಸಿದ್ದಾರೆ.
ಮಂಗಳೂರು: ಇತ್ತೀಚೆಗೆ ನಿಧನ ಹೊಂದಿದ ಬಂಟರ ಯಾನೆ ನಾಡವರ ಮಾತೃ ಸಂಘದ ಮಾಜಿ ಕೋಶಾಧಿಕಾರಿ ಹಾಗೂ ಯೂನಿಯನ್ ಬ್ಯಾಂಕಿನ ನಿವೃತ್ತ…
ಮಂಗಳೂರು: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ ನಡೆಯಲಿದ್ದು, ಅದರ ಭಾಗವಾಗಿ ಕರ್ನಾಟಕದಲ್ಲಿ 2027ರ ಜನಗಣತಿಯ…
ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ…
ಬಂಟ್ವಾಳ: ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆಯಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. …
ಕಾಸರಗೋಡು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕರ್ಯರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ…
ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್ನಲ್ಲಿ ಖಾಸಗಿ ಬಸ್ಗೆ ಹಿಂಬದಿಯಿಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದ್ದು, ಪಿಕಪ್ ವಾಹನದ ಮುಂಭಾಗವು ಸಂಪೂರ್ಣ…