ಭಾರತ ಸರಕಾರ, ಯುವ ಕಾರ್ಯ ಮತ್ತು ಕ್ರೀಡಾ ಸಚಿವಾಲಯ, ನೆಹರು ಯುವ ಕೇಂದ್ರ, ಮಂಗಳೂರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಮಂಗಳೂರು, ಜಿಲ್ಲಾಡಳಿತ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಗ್ರಾಮ ಪಂಚಾಯತ್ ಪಡುಪಣಂಬೂರು, ತಾಲೂಕು ಮತ್ತು ಜಿಲ್ಲಾ ಯುವಜನ ಒಕ್ಕೂಟ, ದ. ಕ. ಜಿಲ್ಲೆ ಇವರುಗಳ ಮಾರ್ಗದರ್ಶನದಲ್ಲಿ ಜಿಲ್ಲಾ, ರಾಜ್ಯ, ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಹಾಗೂ 2021 ನೇ ಸಾಲಿನ ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಶ್ರೀ ಸುಬ್ರಹ್ಮಣ್ಯ ಮಹಾಗಣಪತಿ ಸ್ಪೋರ್ಟ್ಸ್ ಕ್ಲಬ್(ರಿ)ತೋಕೂರು ಹಳೆಯಂಗಡಿ ಇದರ ಆಶ್ರಯದಲ್ಲಿ ನಮ್ಮ ತುಳುನಾಡಿನ ಪ್ರಮುಖ ಆಚರಣೆಗಳಲ್ಲಿ ಒಂದಾದ ದೀಪಾವಳಿ ಹಬ್ಬದ ಪ್ರಯುಕ್ತ ತುಳುನಾಡ ತುಡರ ಪರ್ಬ -2023 ಕಾರ್ಯಕ್ರಮವು ದಿನಾಂಕ ಮಂಗಳವಾರ ಬೆಳಿಗ್ಗೆ ಘಂಟೆ 9:30 ರಿಂದ ಸಂಸ್ಥೆಯ ಸಭಾಂಗಣದಲ್ಲಿ ಜರುಗಿತು.
ಖ್ಯಾತ ರಂಗ ಭೂಮಿ ಕಲಾವಿದರು ಹಾಗೂ ಕನ್ನಡ ಮತ್ತು ತುಳು ಚಲನ ಚಿತ್ರ ನಟ ಪ್ರಕಾಶ್ ತುಮಿನಾಡ್ ಇವರು ದೀಪ ಬೆಳಗಿಸಿ ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಿ, ತುಳುನಾಡ ಸಂಸ್ಕೃತಿ, ಪರಂಪರೆಯ ಪ್ರತೀಕವಾಗಿರುವ ತುಳುನಾಡ ತುಡರ್ ಪರ್ಬ ಮತ್ತು ಬಲಿಂದ್ರ ಪೂಜೆಯ ಮಹತ್ವದ ಬಗ್ಗೆ ಮಾತನಾಡಿದರು. ಗೋವಿಂದದಾಸ ಕಾಲೇಜು , ಸುರತ್ಕಲ್ ಇಲ್ಲಿನ ಪ್ರಾಂಶುಪಾಲರು ಕೃಷ್ಣಮೂರ್ತಿ.ಪಿ , ಇವರು ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿ, ಸಂಸ್ಥೆಯ ಜನ ಸೇವೆಗೆ ಹಲವು ಪ್ರಶಸ್ತಿಗಳು ದೊರಕಿರುವುದನ್ನು ಶ್ಲಾಘಿಸಿ ಶುಭಹಾರೈಸಿದರು ಹಾಗೂ ತುಳುನಾಡ ತುಡರ್ ಪರ್ಬವನ್ನು ಹೇಗೆ ಆಚರಿಸಬೇಕು ಮತ್ತು ಮುಂದಿನ ಜನಾಂಗಕ್ಕೆ ಹೇಗೆ ಮನದಟ್ಟು ಮಾಡಬೇಕು ಇದರ ಬಗ್ಗೆ ಸವಿಸ್ತಾರವಾಗಿ ಹೇಳಿದರು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಆಗಮಿಸಿದ ಸಹಾಯಕ ಪ್ರಾಧ್ಯಾಪಕರು ಎನ್. ಐ. ಟಿ.ಕೆ ಸುರತ್ಕಲ್ ಇಲ್ಲಿನ ಸತ್ಯನಾರಾಯಣ. ಎನ್. ಇವರು ಸಂಸ್ಥೆಯ ಕಾರ್ಯ ವೈಖರಿಯ ಬಗ್ಗೆ ಶ್ಲಾಘಿಸಿದರು. ವೇದಿಕೆಯಲ್ಲಿ ಸಂಸ್ಥೆಯ ಗೌರವ ಅಧ್ಯಕ್ಷರು ಪ್ರಶಾಂತ್ ಕುಮಾರ್ ಬೇಕಲ್, ಅಧ್ಯಕ್ಷರು ಜಗದೀಶ್ ಕುಲಾಲ್, ಮಹಿಳಾ ಕಾರ್ಯಾಧ್ಯಕ್ಷೆ ಯಶೋಧಾ ದೇವಾಡಿಗ ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಪಡುಪಣಂಬೂರು ಇಲ್ಲಿನ ಉಪಾಧ್ಯಕ್ಷರಾದ ಹೇಮನಾಥ ಅಮೀನ್, ಸದಸ್ಯ ಶ್ರೀ ಮೋಹನ್ ದಾಸ್ , ಶಾರದಾ ಆರ್ಟ್ಸ್ ಮಂಜೇಶ್ವರ ನಾಟಕ ತಂಡ ಇದರ ಸಂಗೀತ ನಿರ್ದೇಶಕರಾದ ಶ್ರೀ ಗಣೇಶ್ ಕೊಡಕ್ಕಲ್, ತೋಕೂರು ಶ್ರೀ ಸುಬ್ರಹ್ಮಣ್ಯ ದೇವಸ್ಥಾನ ಇದರ ವ್ಯವಸ್ಥಾಪನ ಸಮಿತಿಯ ಮಾಜಿ ಸದಸ್ಯರಾಗಿರುವ ಶ್ರೀ ಯೋಗೀಶ್ ಕೋಟ್ಯಾನ್, ಕ್ಲಬ್ ನ ಗೌರವ ಸಲಹೆಗಾರರಾದ ಹರಿಪ್ರಸಾದ್ ಶೆಟ್ಟಿ ಬೆಂಗಳೂರು, ಶ್ರೀ ಗಣೇಶ್ ಪೂಜಾರಿ, ಬೆಂಗಳೂರು, ಕಲ್ಲಾಪು ವೀರಭದ್ರ ಮಹಮ್ಮಾಯಿ ವಾಚನಾಲಯ ಮತ್ತು ಯುವಕ ಮಂಡಲದ ಅಧ್ಯಕ್ಷರು ಶ್ರೀ ನವೀನ್ ಶೆಟ್ಟಿಗಾರ್, ಸಾಮಾಜಿಕ ಕಾರ್ಯಕರ್ತ ಧರ್ಮನಂದ ಶೆಟ್ಟಿಗಾರ್, ಕ್ಲಬ್ ನ ಉಪಾಧ್ಯಕ್ಷ ಸುನಿಲ್ ದೇವಾಡಿಗ,ಕ್ಲಬ್ ನ ಪದಾಧಿಕಾರಿಗಳು, ಸದಸ್ಯರು, ಸದಸ್ಯೆಯರು, ನೃತ್ಯ ತರಗತಿಯ ಮಕ್ಕಳು, ಮಕ್ಕಳ ಪೋಷಕರು, ಗ್ರಾಮಸ್ಥರು ಹಾಗೂ ಮತ್ತಿತರರು, ಉಪಸ್ಥಿತರಿದ್ದರು. ಮಹಿಳಾ ಸಮಿತಿಯ ಸದಸ್ಯೆಯರಾದ ಶೋಭಾ ಅಂಚನ್, ವಾಣಿ ಮಹೇಶ್ ಮತ್ತು ಶ್ರೀಮತಿ ಮೀನಾಕ್ಷಿ ದೇವಾಡಿಗ ಪ್ರಾರ್ಥಿಸಿದರು. ಅಧ್ಯಕ್ಷರಾದ ಜಗದೀಶ್ ಕುಲಾಲ್ ಸ್ವಾಗತಿಸಿದರು. ಪರಿಸರ ಸಂರಕ್ಷಣಾ ಕಾರ್ಯದರ್ಶಿ ಸಂಪತ್ ದೇವಾಡಿಗ ವಂದಿಸಿದರು. ಕಾರ್ಯಾಧ್ಯಕ್ಷರಾದ ಸಂತೋಷ್ ದೇವಾಡಿಗ ಕಾರ್ಯಕ್ರಮ ನಿರೂಪಿಸಿದರು. ಸಭಾ ಕಾರ್ಯಕ್ರಮದ ಅನಂತರ ಸ್ಪೋರ್ಟ್ಸ್ ಕ್ಲಬ್ ನ ನೃತ್ಯ ತರಗತಿಯ ಪುಟಾಣಿ ಮಕ್ಕಳಿಂದ ನೃತ್ಯ ಕಾರ್ಯಕ್ರಮ ನಡೆಯಿತು.
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…
ಸಮಾಜದಲ್ಲಿ ಒಡಕುಂಟು ಮಾಡಿ, ದ್ವೇಷವನ್ನು ಬಿತ್ತುವ ಹಾಗೂ ಶಾಂತಿಯನ್ನು ಕದಡಲು ಪ್ರಚೋದನಾತ್ಮಕ ಭಾಷಣವನ್ನು ಯಾರು ಮಾಡಿದರೂ, ಅವರ ಮೇಲೆ ಪ್ರಕರಣ…
ಕರಾವಳಿಯ ಗಂಡುಕಲೆ ಎಂದೇ ಪ್ರಸಿದ್ಧ ಪಡೆದಿರುವ ಯಕ್ಷಗಾನ ಉತ್ತರ ಪ್ರದೇಶದ ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ ಪ್ರಪ್ರಥಮ ಬಾರಿಗೆ ಪ್ರದರ್ಶನವಾಗಿದೆ.…
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…