ಮುಲ್ಕಿ: ಇಲ್ಲಿಗೆ ಸಮೀಪದ ಪಡುಪಣಂಬೂರು ಪಡು ತೋಟ ನಿವಾಸಿ ಗುರಿಕಾರ ಸಂಜೀವ ಪೂಜಾರಿ ಸಾನದ ಮನೆ ( 81) ಅನಾರೋಗ್ಯದಿಂದ ಸ್ವಗೃಹದಲ್ಲಿ ನಿಧನರಾದರು. ಅವರು ಪತ್ನಿ 2 ಪುತ್ರರು ಹಾಗೂ 5ಪುತ್ರಿಯರನ್ನು ಅಗಲಿದ್ದಾರೆ.
ಅವರು ಪಡುಪಣಂಬೂರು ಪಡು ತೋಟದ ಊರಿನ ಗುರಿಕಾರರಾಗಿ, ಪ್ರತಿಷ್ಠಿತ ಸುವರ್ಣ ಮೂಲಸ್ಥಾನದ ಪೂಜಾರಿಯಾಗಿ ಸೇವೆ ಸಲ್ಲಿಸುತ್ತಿದ್ದರು. ಪಡುಪಣಂಬೂರು ಪರಿಸರದಲ್ಲಿ ಕೊಡುಗೈ ದಾನಿಯಾಗಿ ತಮ್ಮ ಸಾಮಾಜಿಕ ಚಟುವಟಿಕೆಗಳಿಂದ ಜನಾನುರಾಗಿಯಾಗಿದ್ದರು.
ಅವರ ನಿಧನಕ್ಕೆ ಬೆಂಗಳೂರಿನ ಅಂತರಾಷ್ಟ್ರೀಯ ವಾಸ್ತು ತಜ್ಞ ಹಾಗೂ ವೈಜ್ಞಾನಿಕ ಜ್ಯೋತಿಷಿ ಶ್ರೀ ಚಂದ್ರಶೇಖರ ಸ್ವಾಮೀಜಿ, ಮುಲ್ಕಿ ಸೀಮೆಯ ಅರಸರಾದ ದುಗ್ಗಣ್ಣ ಸಾವಂತ ಅರಸರು, ಶಾಸಕ ಉಮಾನಾಥ ಕೋಟ್ಯಾನ್, ಮಾಜೀ ಸಚಿವ ಅಭಯಚಂದ್ರ ಜೈನ್, ಯುವ ಕಾಂಗ್ರೆಸ್ ನಾಯಕ ಮಿಥುನ್ ರೈ, ಪಡುಪಣಂಬೂರು ಗ್ರಾ.ಪಂ. ಅಧ್ಯಕ್ಷೆ ಕುಸುಮಾ ಚಂದ್ರಶೇಖರ್, ಸದಸ್ಯ ವಿನೋದ್ ಸಾಲ್ಯಾನ್, ಹರಿಪ್ರಸಾದ್, ಕೆಪಿಸಿಸಿ ಕೋಆರ್ಡಿನೇಟರ್ ವಸಂತ್ ಬೆರ್ನಾಡ್, ಪಿಸಿಎ ಬ್ಯಾಂಕ್ ಅಧ್ಯಕ್ಷ ಸತೀಶ್ ಭಟ್, ನಿರ್ದೇಶಕ ಶಾಮ್ ಪ್ರಸಾದ್,ಉಪಾಧ್ಯಕ್ಷ ಹೇಮನಾಥ ಅಮೀನ್, ಪಡುಪಣಂಬೂರು ಪಡುತೋಟ ಸುವರ್ಣ ಮೂಲಸ್ಥಾನದ ವಿಜಯಕುಮಾರ್, ಸುಚೇಂದ್ರ ಅಮೀನ್, ಅರಸು ಕಂಬಳ ಸಮಿತಿ ಅಧ್ಯಕ್ಷ ಕಿರಣ್ ಕುಮಾರ್,ಗೌತಮ್ ಜೈನ್ ಮುಲ್ಕಿ ಅರಮನೆ, ಮುಂಬೈ ಬಂಟರ ಸಂಘದ ಮಾಜೀ ಅಧ್ಯಕ್ಷ ಭುಜಂಗ ಶೆಟ್ಟಿ, ದಿನೇಶ್ ಸುವರ್ಣ ಬೆಳ್ಳಾಯರು ದಾಮೋದರ ಸಾಲ್ಯಾನ್, ಮುಲ್ಕಿ ಪ್ರೆಸ್ ಕ್ಲಬ್ ಅಧ್ಯಕ್ಷ ನಿಶಾಂತ್ ಶೆಟ್ಟಿ, ಸದಸ್ಯರಾದ ಪುನೀತ್ ಕೃಷ್ಣ ಮತ್ತಿತರರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಮಂಗಳೂರು: ಇತ್ತೀಚೆಗೆ ನಿಧನ ಹೊಂದಿದ ಬಂಟರ ಯಾನೆ ನಾಡವರ ಮಾತೃ ಸಂಘದ ಮಾಜಿ ಕೋಶಾಧಿಕಾರಿ ಹಾಗೂ ಯೂನಿಯನ್ ಬ್ಯಾಂಕಿನ ನಿವೃತ್ತ…
ಮಂಗಳೂರು: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ ನಡೆಯಲಿದ್ದು, ಅದರ ಭಾಗವಾಗಿ ಕರ್ನಾಟಕದಲ್ಲಿ 2027ರ ಜನಗಣತಿಯ…
ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ…
ಬಂಟ್ವಾಳ: ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆಯಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. …
ಕಾಸರಗೋಡು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕರ್ಯರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ…
ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್ನಲ್ಲಿ ಖಾಸಗಿ ಬಸ್ಗೆ ಹಿಂಬದಿಯಿಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದ್ದು, ಪಿಕಪ್ ವಾಹನದ ಮುಂಭಾಗವು ಸಂಪೂರ್ಣ…